• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBMP ಚುನಾವಣೆಗೆ ಕಾಂಗ್ರೆಸ್ ತಯಾರಿ.. ಚುನಾವಣೆಗೂ ಮುನ್ನ ಬಂಪರ್ ಗಿಫ್ಟ್..

ಕೃಷ್ಣ ಮಣಿ by ಕೃಷ್ಣ ಮಣಿ
June 2, 2023
in Top Story, ಕರ್ನಾಟಕ, ರಾಜಕೀಯ
0
BBMP ಚುನಾವಣೆಗೆ ಕಾಂಗ್ರೆಸ್ ತಯಾರಿ.. ಚುನಾವಣೆಗೂ ಮುನ್ನ ಬಂಪರ್ ಗಿಫ್ಟ್..
Share on WhatsAppShare on FacebookShare on Telegram

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎರಡೂವರೆ ವರ್ಷದ ಹಿಂದೆಯೇ ನಡೆಯಬೇಕಿತ್ತು. ಆದರೆ ರಾಜ್ಯ ಬಿಜೆಪಿ ಸರ್ಕಾರ ಹತ್ತಾರು ಕಾರಣಗಳನ್ನು ಇಟ್ಟುಕೊಂಡು ಚುನಾವಣೆ ಮುಂದೂಡುವ ಪ್ರಯತ್ನ ಮಾಡಿತ್ತು. ಅಂತಿಮವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ ತಾಕೀತು ಮಾಡಿದರೂ ಚುನಾವಣೆ ನಡೆಸದೆ ಕಾಲಹರಣ ಮಾಡಿತ್ತು. ವಾರ್ಡ್ ಪುನರ್ ವಿಂಗಡಣೆ ಸೇರಿದಂತೆ ಸಾಕಷ್ಟು ವಿಚಾರಗಳು ಬಿಜೆಪಿ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದೆ. ಇಷ್ಟು‌ ದಿನಗಳ ಕಾಲ ಆಡಳಿತ ಪಕ್ಷವನ್ನು ಕಟುವಾಗಿ ಟೀಕಿಸುತ್ತಿದ್ದ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದ್ದು, ಬಿಬಿಎಂಪಿ ಚುನಾವಣೆ ನಡೆಸುವ ಸಿದ್ಧತೆಯಲ್ಲಿದೆ. ಇಂದು ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ನಾಯಕರ ಜೊತೆಗೆ ಸಭೆ ನಡೆಸಲಾಗ್ತಿದೆ.

ADVERTISEMENT

ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ತಯಾರಿ ಹೇಗಿದೆ..?

ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೆ ಬಿಬಿಎಂಪಿ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಿದ್ಧತೆ ಆರಂಭ ಮಾಡಿದೆ. ಮಾಜಿ ಮೇಯರ್‌ಗಳ ಜೊತೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದಿರುವ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಗೆಲ್ಲಲು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗು ವಾರ್ಡ್​ ಮರುವಿಂಗಡಣೆ, ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಆಗುವ ಲಾಭ ನಷ್ಟ, ಕಾನೂನು ತೊಡಕು ನಿವಾರಣೆ ಬಗ್ಗೆ ಡಿ.ಕೆ ಶಿವಕುಮಾರ್​ ಮಾಜಿ ಮೇಯರ್​ಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಇನ್ನು ನಮ್ಮ ಸರ್ಕಾರ ಬಂದಿದೆ ಬಿಬಿಎಂಪಿ ಚುನಾವಣೆಗೆ ಅನುಕೂಲ ಆಗುವಂತೆ ಬೆಂಗಳೂರಿಗರಿಗೆ ಏನಾದರೂ ಉಡುಗೊರೆ ಕೊಡಿ ಎಂದು ನಾಯಕರು ಕೇಳಿದ್ದಕ್ಕೆ ಅಸ್ತು ಎಂದಿದ್ದಾರೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ.ಕೆ ಶಿವಕುಮಾರ್.

ಜೂನ್​​ ಅಂತ್ಯದ ತನಕ ರಿಯಾಯ್ತಿ ತೆರಿಗೆಗೆ ಅವಕಾಶ..!

ಬೆಂಗಳೂರಿನ ಆಸ್ತಿದಾರರು ತೆರಿಗೆ ಪಾವತಿ ಮಾಡಲು ಮೇ 30ರ ತನಕ ಶೇಕಡ 5ರಷ್ಟು ರಿಯಾಯ್ತಿ ಘೋಷಣೆ ಮಾಡಲಾಗಿತ್ತು. ಇದೀಗ ಬಿಬಿಎಂಪಿ ಮಾಜಿ ಮೇಯರ್​ಗಳ ಮನವಿ ಮೇರೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ ಶಿವಕುಮಾರ್​ , ರಿಯಾಯ್ತಿ ತೆರಿಗೆ ಪಾವತಿ ಅವಧಿಯನ್ನು ಜೂನ್​ 30ರ ತನಕ ವಿಸ್ತರಣೆ ಮಾಡಲಾಗಿದೆ. ಇನ್ನು ಬಿಬಿಎಂಪಿ ಚುನಾವಣೆ ನಡೆಸುವ ಸಲುವಾಗಿ ಈಗಾಗಲೇ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಚುನಾವಣಾ ಪೂರ್ವ ತಯಾರಿ ಸಮಿತಿ ರಚನೆ ಮಾಡಲಾಗಿದೆ. ಲೋಕಸಭಾ ಚುನಾವಣೆಗೂ ಮುನ್ನವೇ ಬಿಬಿಎಂಪಿ ಚುನಾವಣೆ ನಡೆಸುವ ಮೂಲಕ ಸಂಪೂರ್ಣ ಲಾಭ ಪಡೆದುಕೊಳ್ಳುವ ಲೆಕ್ಕಾಚಾರ ಹಾಕಲಾಗಿದೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಹವಾ ಕೆಲಸ ಮಾಡಿ ಬಿಜೆಪಿ ಪುಟಿದು ತಿರುಗೇಟು ಕೊಟ್ಟರೆ ಬಿಬಿಎಂಪಿಯಲ್ಲಿ ಮತ್ತೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಈಗಲೇ ಚುನಾವಣೆ ನಡೆಸಿದರೆ ವಿರೋಧ ಪಕ್ಷಗಳನ್ನು ಸುಲಭವಾಗಿ ಮಣಿಸಬಹುದು ಅನ್ನೋದು ಕಾಂಗ್ರೆಸ್​ ಲೆಕ್ಕಾಚಾರ.

ಬಿಬಿಎಂಪಿ ಗೆಲುವು ಕಾಂಗ್ರೆಸ್​ ನೀರು ಕುಡಿದಷ್ಟುಸುಲಭ..!

ಬಿಬಿಎಂಪಿ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ಕಾಂಗ್ರೆಸ್​-ಬಿಜೆಪಿ ಸಮಬಲ ಸಾಧಿಸಿವೆ. ಆದರೆ ಕಾಂಗ್ರೆಸ್​ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿಗಳು ಜಾರಿ ಆಗುತ್ತಿರುವ ಕಾರಣಕ್ಕೆ ಬಿಬಿಎಂಪಿ ಚುನಾವಣೆ ಕಾಂಗ್ರೆಸ್​ ಪಾಲಿಗೆ ವರವಾಗುವ ಎಲ್ಲಾ ಲಕ್ಷಗಳು ಕಾಣಿಸುತ್ತಿವೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಮಹಿಳೆಯರಿಗೆ ಉಚಿತ ಬಸ್​ ಸಂಚಾರ, ಪ್ರತಿಯೊಬ್ಬ ವ್ಯಕ್ತಿಗೂ ತಲಾ 10 ಕೆಜಿ ಅಕ್ಕಿ ಹಾಗು ಪ್ರತಿಯೊಂದು ಕುಟುಂಬಕ್ಕೂ ತಿಂಗಳಿಗೆ 200 ಯೂನಿಟ್​ ವಿದ್ಯುತ್​ ನೀಡುವ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಿದರೆ ಕಾಂಗ್ರೆಸ್​ ಪಾಲಿಗೆ ಬಿಬಿಎಂಪಿ ಅಧಿಕಾರ ಕಟ್ಟಿಟ್ಟ ಬುತ್ತಿ. ಇನ್ನುಳಿದ ಎರಡು ಗ್ಯಾರಂಟಿಗಳಾದ ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ಹಾಗು ನಿರುದ್ಯೋಗ ಯುವಕ ಯುವತಿಗೆ ಯುವನಿಧಿ ಮೂಲಕ 3000 ಹಾಗು 1500 ರೂಪಾಯಿ ನೀಡುವ ಯೋಜನೆಗೆ ಚಾಲನೆ ನೀಡದರೆ ಲಡ್ಡು ಬಂದು ಬಾಯಿಗೆ ಬಿತ್ತು ಎನ್ನುವಂತಾಗುತ್ತದೆ ಎನ್ನಬಹುದು.

ಕೃಷ್ಣಮಣಿ

Tags: BBMPBBMP ELECTIONcmsiddaramiahcongressvsbjpDCM DK ShivakumarDK Shivakumarlatestnewssiddaramaiah
Previous Post

8 thousand posts in IBPS : ಐಬಿಪಿಎಸ್‌ನಲ್ಲಿ 8 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

Next Post

The organ of this mummy has been preserved for 2000 years : ಈ ಮಮ್ಮಿಯ ಅಂಗಾಂಗ 2000 ವರ್ಷಗಳಿಂದ‌ ಸಂರಕ್ಷಿಸಲ್ಪಟ್ಟಿದೆಯಂತೆ..!

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
The organ of this mummy has been preserved for 2000 years : ಈ ಮಮ್ಮಿಯ ಅಂಗಾಂಗ 2000 ವರ್ಷಗಳಿಂದ‌ ಸಂರಕ್ಷಿಸಲ್ಪಟ್ಟಿದೆಯಂತೆ..!

The organ of this mummy has been preserved for 2000 years : ಈ ಮಮ್ಮಿಯ ಅಂಗಾಂಗ 2000 ವರ್ಷಗಳಿಂದ‌ ಸಂರಕ್ಷಿಸಲ್ಪಟ್ಟಿದೆಯಂತೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada