Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಹೊಸ ಪ್ಲ್ಯಾನ್ ನೊಂದಿಗೆ ಬಂದ ಬಿಬಿಎಂಪಿ.!

ಕರ್ಣ

ಕರ್ಣ

June 29, 2022
Share on FacebookShare on Twitter

ರಾಜಧಾನಿ ಬೆಂಗಳೂರಿನಲ್ಲಿ  ಸಂಚಾರ ದಟ್ಟಣೆ ಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯಲ್ಲಿ 50 ಜಂಕ್ಷನ್ ಗಳನ್ನು ಗುರುತಿಸಲಾಗಿದ್ದು, ಅದನ್ನು ಸುಧಾರಣೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇದಕ್ಕಂತಲೇ ಹೊಸ ಪ್ಲ್ಯಾನ್ ಅನ್ನೂ ಪಾಲಿಕೆ ಮಾಡಿಕೊಂಡಿದೆ.

ಹೆಚ್ಚು ಓದಿದ ಸ್ಟೋರಿಗಳು

ಇಂದಿನಿಂದ 7 ದಿನ ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ

ಈ ಸರ್ಕಾರ ನಡೆಯುತ್ತಿಲ್ಲ, ಚುನಾವಣೆಗೆ ಏಳೆಂಟು ತಿಂಗಳಿದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ : ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ರಾಜ್ಯದ 1 ಕೋಟಿ 25 ಲಕ್ಷ ಮನೆಗಳಲ್ಲಿ ಧ್ವಜ ಹಾರಾಟ: ಸಿಎಂ ಬೊಮ್ಮಾಯಿ

ಟ್ರಾಫಿಕ್ ಪೊಲೀಸ್‌ಗೆ ಬಿಬಿಎಂಪಿ ಸಾಥ್.. ನಯಾ ಐಡಿಯಾ ಮಾಡಿದ ಪಾಲಿಕೆ.!

ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ನಿನ್ನೆ ಮೊನ್ನೆಯದ್ದಲ್ಲ.‌ ಎಷ್ಟೇ ಪ್ರಯತ್ನಿಸಿದರೂ ಟ್ರಾಫಿಕ್‌ ಕಿರಿಕ್‌ ತಪ್ಪಿಸಲು ಮಾತ್ರ ಆಗುತ್ತಿಲ್ಲ. ಹೀಗಾಗಿ ಈ ಬಾರಿ ಟ್ರಾಫಿಕ್‌ಗೊಂದು ಪರಿಹಾರ ಕಂಡು ಹಿಡಿಯಲೇ ಬೇಕು ಎಂಬ ಟ್ರಾಫಿಕ್ ಪೊಲೀಸರ ಆಸೆಗೆ ಬಿಬಿಎಂಪಿ ಸಾಥ್ ಕೊಡುತ್ತಿದೆ.‌ ನಗರದಲ್ಲಿ ಅತಿಹೆಚ್ಚು ಟ್ರಾಫಿಕ್ ಉಂಟಾಗುವ ಜಂಕ್ಷನ್ ಗಳನ್ನು‌ ಗುರುತಿಸಿ ಬೇಕಾದ ಕ್ರಮ ತೆಗೆದುಕೊಳ್ಳುವ ಕೆಲಸಕ್ಕೆ ಪಾಲಿಕೆ ಇಳಿದಿದೆ. ಇದರ ಭಾಗವಾಗಿಯೇ ಬಿಬಿಎಂಪಿ ಅಧಿಕಾರಿಗಳು ಹಾಗೂ ಇತರೆ ಇಲಾಖೆ ಅಧಿಕಾರಿಗಳು ನಿನ್ನೆ ರಾತ್ರಿ ರೌಂಡ್ಸ್ ಮಾಡಿದ್ದು ನಗರದ ಪ್ರಮುಖ ಮೂರ್ನಾಲ್ಕು ಜಂಕ್ಷನ್ ಗಳ ಪರಿಶೀಲನೆ ಮಾಡಿದ್ದಾರೆ. 

ಸದ್ಯ ಆರಂಭಿಕವಾಗಿ ಗೋರಗುಂಟೆ ಪಾಳ್ಯ, ಹೆಬ್ಬಾಳ, ಕೆ.ಆರ್ ಪುರಂ ಜಂಕ್ಷನ್ ನಲ್ಲಾಗುವ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಪಾಲಿಕೆ ಮುಂದಾಗಿದೆ. ಇನ್ನೂ ಕೆಲವು ಜಂಕ್ಷನ್ ಗಳಲ್ಲಿ ಸ್ಕೈವಾಕ್, ಪಬ್ಲಿಕ್ ಟಾಯ್ಲೆಟ್ ವ್ಯವಸ್ಥೆ ಮಾಡುವ ಅಗತ್ಯವಿದೆ. ಹೆಬ್ಬಾಳ ಫ್ಲೈ ಓವರ್ ಸಿಕ್ಕಾಪಟ್ಟೆ ದಟ್ಟಣೆ ಎದುರಿಸುತ್ತಿದ್ದು, ಇಲ್ಲೊಂದು ಅಂಡರ್ ಪಾಸ್ ನಿರ್ಮಾಣಕ್ಕೆ ಯೋಚಿಸಿದೆ. ಅಲ್ಲದೆ ಲೂಪ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇನ್ನು ಗೊರಗುಂಟೆ ಪಾಳ್ಯ ಜಂಕ್ಷನ್, ಸುಮಾರು 20 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಪ್ರತಿನಿತ್ಯ ಸಹಸ್ರಾರು ವಾಹನಗಳು ಸಂಚರಿಸಲಿವೆ. ವಾರದ ಕೊನೆಯ ದಿನ ಸಂಚಾರ ದಟ್ಟಣೆ ಇನ್ನೂ ಹೆಚ್ಚಾಗಿ ಸಾಲುಗಟ್ಟಲೆ ವಾಹನಗಳು ನಿಂತಿರುತ್ತವೆ. ಈ ಪೈಕಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಅಲ್ಪಾವಧಿಯ ಯೋಜನೆಗಳನ್ನು ಕೈಗೆತ್ತಿಕೊಂಡು ಅವುಗಳನ್ನು ತುರ್ತಾಗಿ ಪೂರ್ಣಗೊಳಿಸುವುದರಿಂದ ವಾಹನ ಸಂಚಾರ ದಟ್ಟಣೆ ಶೇ. 20 ಸುಧಾರಿಸಲಿದೆ. ಈ ಪೈಕಿ ತುರ್ತಾಗಿ ಕೆಲಸಗಳನ್ನು ಪ್ರಾರಂಭಿಸಲು ಬಿಬಿಎಂಪಿ ಮುಂದಾಗಿದೆ.

ಈ ಬಗ್ಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿಗಳ ಜತೆ ನಗರದ ಕೆಲವು ಕಡೆ ಪರಿಶೀಲನೆ ನಡೆಸಲಾಗಿದೆ. ಕೆಲ ಜಂಕ್ಷನ್ ನಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದನ್ನು ಗಮನಿಸ ಕೂಡಲೆ ಜಂಕ್ಷನ್ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸದ್ಯ ಇರುವ ಶೌಚಾಲಯವನ್ನು ಮುಚ್ಚಲಾಗಿದ್ದು, ಅದನ್ನು ಕೂಡಲೆ ದುರಸ್ತಿಪಡಿಸಿ ಸಾರ್ವಜನಿಕರು ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ರಸ್ತೆ ದಾಟುವ ಪ್ರಯಾಣಿಕರ ಸಂಖ್ಯೆ ಹೆಚಿದ್ದು, ಪಿಪಿಪಿ ಮಾದರಿಯಲ್ಲಿ ತ್ವರಿತಗತಿಯಲ್ಲಿ ಪಾದಚಾರಿ ಮೇಲುಸೇತುವೆ ತುರ್ತಾಗಿ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಒಟ್ಟಾರೆ ಟ್ರಾಫಿಕ್ ಪೊಲೀಸರ ಕೆಲಸಕ್ಕೆ ಬಿಬಿಎಂಪಿ ಸಾಥ್ ಕೊಡಲು ನಿರ್ಧರಿಸಿದೆ. ಒಗ್ಗಟ್ಟಾಗಿ ಕೆಲಸ ಮಾಡಿ ರಾಜಧಾನಿಯ ಟ್ರಾಫಿಕ್‌ ಸಮಸ್ಯೆಗೆ ಮುಕ್ತಿ ಕೊಡಲು ಬಿಬಿಎಂಪಿ ಅಧಿಕಾರಿಗಳು ಎದುರು ನೋಡುತ್ತಿದ್ದಾರೆ. ಆದರೆ ಇಲ್ಲೂ ಕೂಡ ಕಳಪೆ ಕಾಮಗಾರಿ ಮಾಡಿದರೆ ಛೀಮಾರಿ ಹಾಗೂ ಮುಖಭಂಗ ಮಾತ್ರ ತಪ್ಪಿದ್ದಲ್ಲ.

RS 500
RS 1500

SCAN HERE

[elfsight_youtube_gallery id="4"]

don't miss it !

ಪತ್ರಾಚಲ್ ಭೂ ಹಗರಣ: ಸಂಜಯ್ ರಾವತ್ 22ರವರೆಗೆ ನ್ಯಾಯಾಂಗ ವಶಕ್ಕೆ
ದೇಶ

ಪತ್ರಾಚಲ್ ಭೂ ಹಗರಣ: ಸಂಜಯ್ ರಾವತ್ 22ರವರೆಗೆ ನ್ಯಾಯಾಂಗ ವಶಕ್ಕೆ

by ಪ್ರತಿಧ್ವನಿ
August 8, 2022
ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ
ಕರ್ನಾಟಕ

ಲೋಕಾಯುಕ್ತ ದುರ್ಬಲಗೊಳಿಸಲು ರಾಜಕಾರಣಿಗಳಿಂದ ಕುತಂತ್ರ :ನ್ಯಾ. ಸಂತೋಷ್ ಹೆಗ್ಡೆ

by ಪ್ರತಿಧ್ವನಿ
August 12, 2022
ಲವ್ 360ಗೆ ಶುಭ ಹಾರೈಸಿದ ಡಾ. ಶಿವರಾಜ್‌ಕುಮಾರ್‌
ಸಿನಿಮಾ

ಲವ್ 360ಗೆ ಶುಭ ಹಾರೈಸಿದ ಡಾ. ಶಿವರಾಜ್‌ಕುಮಾರ್‌

by ಪ್ರತಿಧ್ವನಿ
August 7, 2022
ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh
ಇದೀಗ

ನಗಿಸ್ಬಿಟ್ಟು ಅಳಸ್ಥಾರೆ ಗೋಲ್ಡನ್ ಸ್ಟಾರ್ ಗಣೇಶ್ | Galipata 2 | Nawaz | Ganesh

by ಪ್ರತಿಧ್ವನಿ
August 12, 2022
ಬ್ಲ್ಯಾಕ್ ಮ್ಯಾಜಿಕ್ ನಿಮ್ಮಕೆಟ್ಟ ದಿನಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ : ನರೇಂದ್ರ ಮೋದಿ
ದೇಶ

ಬ್ಲ್ಯಾಕ್ ಮ್ಯಾಜಿಕ್ ನಿಮ್ಮಕೆಟ್ಟ ದಿನಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ : ನರೇಂದ್ರ ಮೋದಿ

by ಪ್ರತಿಧ್ವನಿ
August 10, 2022
Next Post
ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಈಗಾಗಲೇ ಗೆದ್ದಾಗಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಷ್ಟ್ರಪತಿ ಚುನಾವಣೆ; ದ್ರೌಪದಿ ಮುರ್ಮು ಈಗಾಗಲೇ ಗೆದ್ದಾಗಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಇಂಗ್ಲೆಂಡ್‌ ಟೆಸ್ಟ್‌ ನಿಂದ ರೋಹಿತ್‌ ಶರ್ಮ ಔಟ್:‌ ಜಸ್‌ ಪ್ರೀತ್‌ ಬುಮ್ರಾ ನಾಯಕ!

ಇಂಗ್ಲೆಂಡ್‌ ಟೆಸ್ಟ್‌ ನಿಂದ ರೋಹಿತ್‌ ಶರ್ಮ ಔಟ್:‌ ಜಸ್‌ ಪ್ರೀತ್‌ ಬುಮ್ರಾ ನಾಯಕ!

ಕೋವಿಡ್ ಹೆಚ್ಚಳ : TAC ನಿಂದ ಮಾಸ್ಕ್ ಕಡ್ಡಾಯಕ್ಕೆ ಸೂಚನೆ : ಆರೋಗ್ಯ ಇಲಾಖೆ ದಂಡ ಪ್ರಯೋಗಕ್ಕೆ‌ ಚಿಂತನೆ !

ಕೋವಿಡ್ ಹೆಚ್ಚಳ : TAC ನಿಂದ ಮಾಸ್ಕ್ ಕಡ್ಡಾಯಕ್ಕೆ ಸೂಚನೆ : ಆರೋಗ್ಯ ಇಲಾಖೆ ದಂಡ ಪ್ರಯೋಗಕ್ಕೆ‌ ಚಿಂತನೆ !

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist