ರಾಜ್ಯ ರಾಜಕೀಯದಲ್ಲಿ ತೀವ್ರ ಗದ್ದಲ ಎಬ್ಬಿಸಿರುವ ಕಮಿಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮಾನಸಿಕ ಸ್ಥಿಮಿತವನ್ನ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
ಕೆಂಪಣ್ಣ ಹೋಗಿ ಮಾಜಿ ಸಿಎಂ ಸಿದ್ದರಾಮಯ್ಯರವರ ಮನೆಗೆ ಹೋಗಿ ಆಪಾದನೆ ಮಾಡಿದ್ದಾರೆ. ಎಲ್ಲಾ ಶಾಸಕರು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ ಎಲ್ಲಾ ಶಾಸಕರು ಅಂದರೆ ಅಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಒಳಗೊಂಡಿರುತಾರಲ್ವ ಎಂದು ಪ್ರಶ್ನಿಸಿದ್ದಾರೆ.
ಕಮಿಷನ್ ಆರೋಪ ಮಾಡಿರುವ ಕೆಂಪಣ್ಣ ದಾಖಲೆ ಒದಗಿಸಿದ್ದರೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಒಂದು ವೇಳೆ ನಿರಾಧಾರವಾಗಿ ಆರೋಪಿಸಿದ್ದರೆ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದಿದ್ದಾರೆ.