• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಲಿಗೆ ಹರಿಬಿಟ್ಟರೆ ಹುಷಾರ್‌!: ಕಂಗನಾಗೆ BJP ಚಾಟಿ

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
ನಾಲಿಗೆ ಹರಿಬಿಟ್ಟರೆ ಹುಷಾರ್‌!: ಕಂಗನಾಗೆ BJP ಚಾಟಿ
Share on WhatsAppShare on FacebookShare on Telegram

ನವದೆಹಲಿ: “ನೀವು ನಾಲಿಗೆ ಹರಿಬಿಟ್ಟು ಪಕ್ಷಕ್ಕೆ ಮುಜುಗರ ತರುತ್ತಿದ್ದೀರಿ ಇದು ಸರಿ ಅಲ್ಲ. ಪಕ್ಷದ ಹಿತಾಸಕ್ತಿಗೆ ಧಕ್ಕೆಯಾಗುವಂಥ ಬೇಕಾಬಿಟ್ಟಿ ಹೇಳಿಕೆ ನೀಡ ಕೂಡದು” ಹೀಗೆಂದು ಬಾಲಿವುಡ್‌ Actress, ಸಂಸದೆ ಕಂಗನಾ ರಣೌತ್‌ಗೆ BJP ಹೈ ಕಮಾಂಡ್‌ ತರಾಟೆ ತೆಗದುಕೊಂಡಿದೆ.  

ADVERTISEMENT

ಹೌದು, ಸದಾ ವಿವಾದಗಳಿಂದಲೇ ಸುದ್ದಿಯಾಗುವ ಕಂಗನಾ, ಇತ್ತೀಚೆಗಷ್ಟೇ ರೈತಪ್ರತಿಭಟನೆ (Formers protest ) ವಿಚಾರದಲ್ಲೂ ನಾಲಿಗೆ ಹರಿಬಿಟ್ಟಿದ್ದರು. ಈ ಬಗ್ಗೆ ತೀವ್ರ ಆಕ್ಷೇಪವೂ ವ್ಯಕ್ತವಾಗಿತ್ತು. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಕೂಡ ಈ ಬಗ್ಗೆ ಕಿಡಿ ಕಾರಿದ್ದರು.

ನಟಿಯಾಗಿದ್ದಾಗಲೂ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿದ್ದ ಈಕೆ ಸಂಸದೆಯಾದ ಬಳಿಕವೂ ಬೇಕಾಬಿಟ್ಟಿ ಹೇಳಿಕೆ ನೀಡುತ್ತಾರೆ. ಇದರಿಂದ BJP ಘನತೆಗೆ ಧಕ್ಕೆಯಾಗುತ್ತಿದೆ ಎಂಬ ಮಾತೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಂಗನಾ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ BJP  ಹೈ ಕಮಾಂಡ್‌ನಿಂದ ಆಕೆಗೆ ಸಮನ್ಸ್‌ ಜಾರಿಗೊಳಿಸಿತ್ತು.

ಅದರಂತೆ  BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ದಿಲ್ಲಿಯ ಅವರ ನಿವಾಸದಲ್ಲಿ ಗುರುವಾರ ಕಂಗನಾ ಭೇಟಿಯಾಗಿದ್ದಾರೆ. ಬರೋಬ್ಬರಿ ಅರ್ಧ ಗಂಟೆಗಳ ಕಾಲ ಕಂಗನಾಗೆ ನಡ್ಡಾ ತರಾಟೆ ತೆಗೆದುಕೊಂಡಿದ್ದು, ವಿಧಾನಸಭೆ ಚುನಾವಣೆಗಳು ಹೊಸ್ತಿಲಿನಲ್ಲಿರುವಾಗ ಬೇಕಾಬಿಟ್ಟಿ ನಾಲಿಗೆ ಹರಿಬಿಟ್ಟು ನೀವು ಪಕ್ಷಕ್ಕೆ ಮುಜುಗರ ತರುತ್ತಿದ್ದೀರಿ, ಪಕ್ಷದ ಹಿತಾಸಕ್ತಿಗಳಿಗೆ ನಿಮ್ಮಿಂದ ಧಕ್ಕೆಯಾಗುತ್ತಿದೆ. ನಾಲಿಗೆಯನ್ನು ಹಿಡಿದಿಟ್ಟುಕೊಳ್ಳಿ ಎಂದು ಚಾಟಿ ಬೀಸಿದ್ದಾರೆ.

ಕಂಗನಾ ವಿವಾದ ಪ್ರಧಾನಿ ಮೋದಿ ಅವರ ಗಮನಕ್ಕೂ ಬಂದ ಹಿನ್ನೆಲೆಯಲ್ಲಿ ಅವರ ಆದೇಶದ ಮೇರೆಗೆ ವರಷ್ಠರು ಕಂಗನಾರನ್ನು ತರಾಟೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನು ಬುದ್ದಿಗೇಡಿ ಅಲ್ಲ, ತಪ್ಪಿನ ಅರಿವಾಗಿದೆ: ನಡ್ಡಾರನ್ನು ಭೇಟಿಯಾದ ಬಳಿಕ Media (ಮಾಧ್ಯಮಗಳ) ಎದುರು ಹೈ ಕಮಾಂಡ್‌ ತನಗೆ ಛೀಮಾರಿ ಹಾಕಿದ ವಿಚಾರವನ್ನುಕಂಗನಾ ಹೇಳಿಕೊಂಡಿದ್ದಾರೆ. ರೈತ ಪ್ರತಿಭಟನೆ ವಿಚಾರವಾಗಿ ಪಕ್ಷದ ವರಿಷ್ಠರು ನನ್ನನ್ನು ಕರೆದು ಛೀಮಾರಿ ಹಾಕಿದ್ದಾರೆ. ನನ್ನ ತಪ್ಪಿನಿಂದ ಇದಾಗಿದೆ. ನಾನೆಂದೂ ಪಕ್ಷದಲ್ಲಿ ನಾನು ಹೇಳಿದ್ದೇ ಅಂತಿಮ ಎನ್ನುವಂತೆ ಅಂದುಕೊಂಡಿಲ್ಲ, ಹಾಗೆ ಅಂದಕೊಳ್ಳುವಷ್ಟು ದಡ್ಡಿಯೂ ನಾನಲ್ಲ.ನನ್ನ ಹೇಳಿಕೆಗಳಿಂದ ಪಕ್ಷದ ನೀತಿ ಮತ್ತು ಘನತೆಗೆ ಧಕ್ಕೆಯಾಗಿದ್ದರೆ ನನ್ನಷ್ಟು ದುಃಖ ಪಡುವವರೂ ಯಾರಿಲ್ಲ. ಇನ್ನು ಮುಂದೆ ನನ್ನ ಹೇಳಿಕೆಗಳ ಬಗ್ಗೆ ಜಾಗ್ರತೆ ವಹಿಸುತ್ತೇನೆ ಎಂದಿದ್ದಾರೆ.

—

 ಕಂಗನಾ ಹೇಳಿದ್ದೇನು ? : ರೈತ ಪ್ರತಿಭಟನೆ ವೇಳೆ ಶವಗಳು ನೇತಾಡುತ್ತಿದ್ದವು, ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರಗಳೂ ನಡೆಯುತ್ತಿದ್ದವು. ಕೇಂದ್ರ ಸರ್ಕಾರ ಸರಿಯಾದ ಕ್ರಮ ತೆಗೆದುಕೊಳ್ಳದೇ ಇದ್ದಿದ್ದರೆ ಬಾಂಗ್ಲಾದೇಶದ ಪರಿಸ್ಥಿತಿಯೇ ಭಾರತಕ್ಕೂ ಬಂದಿರುತ್ತಿತ್ತು ಎಂದು ಕಂಗನಾ ಹೇಳಿದ್ದರು. ರೈತ ಪ್ರತಿಭಟನೆ ಕುರಿತು ಅವರು ನೀಡಿದ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

———

ಕಂಗನಾಗೆ EMERGENCY ಸಂಕಷ್ಟ

ಹೈ ಕಮಾಂಡ್‌ ತರಾಟೆ ಒಂದೆಡೆಯಾದರೆ ಮತ್ತೊಂದೆಡೆ ಕಂಗನಾ ನಟಿಸಿ, Action – cut ಹೇಳಿರುವ ಎಮರ್ಜೆನ್ಸಿ ಸಿನಿಮಾದ ರಿಲೀಸ್‌ಗೂ ಸಂಕಷ್ಟ ಎದುರಾಗಿದೆ. ಈ ಸಿನಿಮಾ ರಿಲೀಸ್‌ ಆಗಬಾರದು ಎಂದು ದಿಲ್ಲಿ ಶಿರೋಮಣಿ ಅಕಾಲಿ ದಳವು (SAD) ಕೇಂದ್ರೀಯ ಚಲನಚಿತ್ರ ಪ್ರಮಾಣೀಕರ ಮಂಡಳಿಯನ್ನು (CBFC) ಒತ್ತಾಯಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲ ಕಂಗನಾ ನಟಿಸಿರುವ ಈ ಸಿನಿಮಾ ಕೋಮುದ್ವೇಷವನ್ನು ಹೆಚ್ಚಿಸುವುದರ ಜತೆಗೆ ತಪ್ಪು ತಿಳುವಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲಿದೆ ಎಂದು SAD ಆರೋಪಿಸಿದೆ. September 6 ರಂದು EMERGENCY ತೆರೆ ಕಾರಣಲು ಸಿದ್ಧತೆಗಳು ನಡೆದಿವೆ.

Tags: BJPCongress Partyemergency kangana ranautkangana ranautkangana ranaut bjpkangana ranaut controversykangana ranaut interviewkangana ranaut latest newskangana ranaut mandikangana ranaut movieskangana ranaut new moviekangana ranaut newskangana ranaut on farmerskangana ranaut on farmers protestkangana ranaut on rahul gandhikangana ranaut podcastkangana ranaut slappedkangana ranaut speechkangana ranaut tweet on farmersmp kangana ranautಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಸಿದ್ದರಾಮಯ್ಯ ಪತ್ನಿಗೆ 15 ಸೈಟ್ ಅಚ್ಚರಿ ಮಾಹಿತಿ ಬಹಿರಂಗ ಪಡಿಸಿದ ವಿಜಯೇಂದ್ರ

Next Post

ಸಿದ್ದರಾಮಯ್ಯ ಅನ್ನ ಭಾಗ್ಯ ಕ್ಕು ಅನ್ನ ಸಿನಿಮಾಗು ಏನ್ ಸಂಬಂಧ…?

Related Posts

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
0

ನಾ ದಿವಾಕರ 1970ರ ದಶಕ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ನಿರ್ಣಾಯಕ ಪರ್ವ. ಸ್ವತಂತ್ರ ಭಾರತದ ಪ್ರಜಾಪ್ರಭುತ್ವದ ಕನಸುಗಳು ಭಗ್ನವಾಗುತ್ತಿರುವ ಆತಂಕಗಳು ಹೆಚ್ಚಾಗಿ ವ್ಯಕ್ತವಾಗತೊಡಗಿದ್ದು...

Read moreDetails
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

October 27, 2025
Next Post

ಸಿದ್ದರಾಮಯ್ಯ ಅನ್ನ ಭಾಗ್ಯ ಕ್ಕು ಅನ್ನ ಸಿನಿಮಾಗು ಏನ್ ಸಂಬಂಧ…?

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ
Top Story

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

by ಪ್ರತಿಧ್ವನಿ
October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ
Top Story

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

by ಪ್ರತಿಧ್ವನಿ
October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್
Top Story

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

by ಪ್ರತಿಧ್ವನಿ
October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ
Top Story

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

by ಪ್ರತಿಧ್ವನಿ
October 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada