ಶಿಕಾರಿಪುರದ(Shikaripura) ತಾಲ್ಲೂಕು(Taluk) ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ವಿ.ವೈ. ವಿಜಯೇಂದ್ರ(BYVijayendra) ಅವರು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಎಲ್ಲೆಡೆ ಬರಗಾಲ ಆವರಿಸಿದ್ದು, ಕುಡಿಯುವ ನೀರಿನ(Drinking Water) ಸಮಸ್ಯೆ, ರೈತರಿಗೆ ವಿದ್ಯುತ್(Electric) ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸೂಚಿಸಿದರು.
![](https://pratidhvani.com/wp-content/uploads/2024/02/Vijayendra-1-1024x683.jpg)
ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು, ಆರೋಗ್ಯ ಇಲಾಖೆ ಹಾಗೂ ಕ್ಷೇತ್ರದ ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ತುರ್ತಾಗಿ ಕೈಗೆತ್ತಿಕೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಯಿತು. ತಾಲ್ಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
#BYVijayendra #BJPMLA #Shikaripura #DrinkingWater #Meeting