• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇಗೂರು ಕೆರೆ ಶಿವನ ಮೂರ್ತಿ ವಿವಾದ: ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ನೀಡುವಂತೆ ಹೈಕೋರ್ಟ್ ಆದೇಶ

Any Mind by Any Mind
August 18, 2021
in ಕರ್ನಾಟಕ
0
ಬೇಗೂರು ಕೆರೆ ಶಿವನ ಮೂರ್ತಿ ವಿವಾದ: ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ನೀಡುವಂತೆ ಹೈಕೋರ್ಟ್ ಆದೇಶ
Share on WhatsAppShare on FacebookShare on Telegram

ಬೆಂಗಳೂರಿನ ಬೇಗೂರು ಕೆರೆಯಲ್ಲಿ ಪ್ರತಿಷ್ಟಾಪಿಸಿರುವ ಶಿವನ ಮೂರ್ತಿ ಪ್ರಕರಣದ ಕುರಿತಂತೆ ತನಿಖೆ ನಡೆಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಬೆಂಗಳೂರು ಸೌತ್ ಈಸ್ಟ್ ವಿಭಾಗದ ಡಿಸಿಪಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಆದೇಶ ನೀಡಿದೆಯೆಂದು ಕನ್ನಡ ಬಾರ್ & ಬೆಂಚ್ ವರದಿ ಮಾಡಿದೆ.

ADVERTISEMENT

ಪ್ರಕರಣದ ಕುರಿತಂತೆ ಅರ್ಜಿ ಸಲ್ಲಿಸಿರುವ ಪರಿಸರವಾದಿ ಸಂಸ್ಥೆಯ ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಬೆಂಗಳೂರಿನ ಸೌತ್ ಈಸ್ಟ್ ವಿಭಾಗ ಡಿಸಿಪಿಗೆ ತನಿಖೆಯ ಹೊಣೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಬಿಬಿಎಂಪಿ ನಿಲುವಿಗೆ ಆಕ್ಷೇಪ ಸಲ್ಲಿಸಿದ್ದಾರೆ. ಆಗ, “ಬಿಬಿಎಂಪಿ ಇದುವರೆಗೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿಲ್ಲ. ಒಂದೊಮ್ಮೆ ಹಾಗೆ ಮಾಡಿದರೆ ಅದರ ಪರಿಣಾಮ ಏನು ಎಂಬುದು ಬಿಬಿಎಂಪಿಗೆ ಗೊತ್ತಿದೆ. ನ್ಯಾಯಾಂಗ ನಿಂದನೆ ವಿಚಾರವನ್ನು ನಮಗೆ ಬಿಡಿ” ಎಂದು ಮುಖ್ಯ ನ್ಯಾಯಮೂರ್ತಿ ಓಕಾ ಹೇಳಿದ್ದಾರೆ.

ಬೇಗೂರು ಕೆರೆಯ ಶಿವ ಪ್ರತಿಮೆ ಅನಾವರಣದ ಹಿಂದೆ ಬಲಪಂಥೀಯ ಗುಂಪುಗಳ ಕೈವಾಡ!: ತನಿಖೆಗೆ ಹೈಕೊರ್ಟ್ ಸೂಚನೆ

ನ್ಯಾಯಾಲಯದ ಆದೇಶದಂತೆ ಯಥಾಸ್ಥಿತಿ ಕಾಪಾಡಲಾಗಿದೆ, ಶಿವನ ಪ್ರತಿಮೆಗೆ ಪರದೆ ಹಾಕಲಾಗಿದೆ ಎಂದು ಸರ್ಕಾರಿ ಅಧಿಕಾರಿ ವಿಜಯ್ ಕುಮಾರ್ ಪಾಟೀಲ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಕ್ರಮ ಕೈಗೊಳ್ಳಲಾಗುತ್ತಿರುವ ಮಾಹಿತಿಯನ್ನು ಬೆಂಗಳೂರು ಪೊಲೀಸ್ ಆಯುಕ್ತರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ಪ್ರಕರಣದ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಂತ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 2 ಕ್ಕೆ ಮುಂದೂಡಿದೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ ಬೇಗೂರು ಕೆರೆಯಲ್ಲಿ ಕೃತಕ ದ್ವೀಪ ಸೃಷ್ಟಿಸಿ ಶಿವನ ಮೂರ್ತಿ ಪ್ರತಿಷ್ಠಾಪಿಸಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಅಲ್ಲದೇ, ಕೆರೆಯ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆಯೂ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತ್ತು.

ಕೆರೆಯಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸಬಾರದು ಎಂದು ಹಲವು ಆದೇಶಗಳನ್ನು ಹೊರಡಿಸಲಾಗಿದ್ದರೂ ಹೀಗೆ ಮಾಡುತ್ತಿರುವುದು ಆಘಾತ ಉಂಟು ಮಾಡುತ್ತದೆ. ನ್ಯಾಯಾಲಯದ ಆದೇಶಗಳನ್ನು ಸಲೀಸಾಗಿ ನಿಷೇಧಿಸಲಾಗಿದೆ. ಒಂದುವೇಳೆ, ನ್ಯಾಯಾಲಯದ ಆದೇಶದಿಂದ ಯಾರಿಗಾದರೂ ಸಮಸ್ಯೆಯಾದರೆ ಅದಕ್ಕೆ ಶಾಸನಬದ್ಧವಾದ ಪರಿಹಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು.

HC ಆದೇಶವನ್ನು ಉಲ್ಲಂಘಿಸಿ ಬೇಗೂರು ಕೆರೆಯ ಶಿವನ ಮೂರ್ತಿ ಅನಾವರಣ!: ರಾಜ್ಯ ಸರ್ಕಾರ, BBMPಗೆ ಕೋರ್ಟ್ ತರಾಟೆ

ಬೇಗೂರಿನ ಕೆರೆಯಲ್ಲಿ ಬಿಬಿಎಂಪಿ ಅಕ್ರಮವಾಗಿ ಮಣ್ಣು ತುಂಬಿ ಕೃತಕ ದ್ವೀಪ ಸೃಷ್ಟಿಸಿ, ಅಲ್ಲಿ ಶಿವನ ಮೂರ್ತಿ ಪ್ರತಿಷ್ಟಾಪಿಸಿದೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಲಿಯೊ ಸಲ್ದಾನ ಎನ್ನುವವರು ನ್ಯಾಯಾಲಯದ ಮೊರೆ ಹೋಗಿದ್ದರು.
ನ್ಯಾಯಾಲಯವು ಶಿವನ ಮೂರ್ತಿ ಮುಚ್ಚುವಂತೆ ನಿರ್ದೇಶನ ನೀಡಿತ್ತು. ಆದರೆ, ಕೆಲವು ದಿನಗಳ ಹಿಂದೆ ಹಿಂದುತ್ವವಾದಿ ಕಾರ್ಯಕರ್ತರು ನ್ಯಾಯಾಲಯದ ಆದೇಶವನ್ನು ಮೀರಿ ಮೂರ್ತಿಗೆ ಸುತ್ತಿದ್ದ ಟರ್ಪಾಲನ್ನು ಬಿಚ್ಚಿದ್ದರು. ಅಲ್ಲದೆ, ಅರ್ಜಿದಾರರ ವಿರುದ್ಧ ಕೋಮು ನಿಂದಕ ಸಂದೇಶಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಕೆಲವು ಬೆದರಿಕೆಗಳೂ ಬಂದಿದೆಯೆಂದು ಎಂದು ಮೂಲಗಳು ಪ್ರತಿಧ್ವನಿಗೆ ತಿಳಿಸಿದೆ.

Previous Post

ಕಾಬೂಲ್‌ನಲ್ಲಿ ವಿಮಾನ ಟೇಕ್‌ಆಫ್‌ ವೇಳೆ ಸತ್ತವರ ಕುರಿತು ಯುಎಸ್ ವಿಶೇಷ ತನಿಖೆ

Next Post

‘ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆʼ – ಸಚಿವ ಮುರುಗೇಶ್ ಆರ್ ನಿರಾಣಿ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
‘ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆʼ – ಸಚಿವ ಮುರುಗೇಶ್ ಆರ್ ನಿರಾಣಿ

‘ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆʼ - ಸಚಿವ ಮುರುಗೇಶ್ ಆರ್ ನಿರಾಣಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada