• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೇಗೂರು ಕೆರೆ ಶಿವನ ಮೂರ್ತಿ ವಿವಾದ: ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ನೀಡುವಂತೆ ಹೈಕೋರ್ಟ್ ಆದೇಶ

Any Mind by Any Mind
August 18, 2021
in ಕರ್ನಾಟಕ
0
ಬೇಗೂರು ಕೆರೆ ಶಿವನ ಮೂರ್ತಿ ವಿವಾದ: ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ನೀಡುವಂತೆ ಹೈಕೋರ್ಟ್ ಆದೇಶ
Share on WhatsAppShare on FacebookShare on Telegram

ಬೆಂಗಳೂರಿನ ಬೇಗೂರು ಕೆರೆಯಲ್ಲಿ ಪ್ರತಿಷ್ಟಾಪಿಸಿರುವ ಶಿವನ ಮೂರ್ತಿ ಪ್ರಕರಣದ ಕುರಿತಂತೆ ತನಿಖೆ ನಡೆಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವಂತೆ ಬೆಂಗಳೂರು ಸೌತ್ ಈಸ್ಟ್ ವಿಭಾಗದ ಡಿಸಿಪಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಆದೇಶ ನೀಡಿದೆಯೆಂದು ಕನ್ನಡ ಬಾರ್ & ಬೆಂಚ್ ವರದಿ ಮಾಡಿದೆ.

ADVERTISEMENT

ಪ್ರಕರಣದ ಕುರಿತಂತೆ ಅರ್ಜಿ ಸಲ್ಲಿಸಿರುವ ಪರಿಸರವಾದಿ ಸಂಸ್ಥೆಯ ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು ಬೆಂಗಳೂರಿನ ಸೌತ್ ಈಸ್ಟ್ ವಿಭಾಗ ಡಿಸಿಪಿಗೆ ತನಿಖೆಯ ಹೊಣೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಬಿಬಿಎಂಪಿ ನಿಲುವಿಗೆ ಆಕ್ಷೇಪ ಸಲ್ಲಿಸಿದ್ದಾರೆ. ಆಗ, “ಬಿಬಿಎಂಪಿ ಇದುವರೆಗೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿಲ್ಲ. ಒಂದೊಮ್ಮೆ ಹಾಗೆ ಮಾಡಿದರೆ ಅದರ ಪರಿಣಾಮ ಏನು ಎಂಬುದು ಬಿಬಿಎಂಪಿಗೆ ಗೊತ್ತಿದೆ. ನ್ಯಾಯಾಂಗ ನಿಂದನೆ ವಿಚಾರವನ್ನು ನಮಗೆ ಬಿಡಿ” ಎಂದು ಮುಖ್ಯ ನ್ಯಾಯಮೂರ್ತಿ ಓಕಾ ಹೇಳಿದ್ದಾರೆ.

ಬೇಗೂರು ಕೆರೆಯ ಶಿವ ಪ್ರತಿಮೆ ಅನಾವರಣದ ಹಿಂದೆ ಬಲಪಂಥೀಯ ಗುಂಪುಗಳ ಕೈವಾಡ!: ತನಿಖೆಗೆ ಹೈಕೊರ್ಟ್ ಸೂಚನೆ

ನ್ಯಾಯಾಲಯದ ಆದೇಶದಂತೆ ಯಥಾಸ್ಥಿತಿ ಕಾಪಾಡಲಾಗಿದೆ, ಶಿವನ ಪ್ರತಿಮೆಗೆ ಪರದೆ ಹಾಕಲಾಗಿದೆ ಎಂದು ಸರ್ಕಾರಿ ಅಧಿಕಾರಿ ವಿಜಯ್ ಕುಮಾರ್ ಪಾಟೀಲ್ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಕ್ರಮ ಕೈಗೊಳ್ಳಲಾಗುತ್ತಿರುವ ಮಾಹಿತಿಯನ್ನು ಬೆಂಗಳೂರು ಪೊಲೀಸ್ ಆಯುಕ್ತರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ಪ್ರಕರಣದ ಸಂಬಂಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪಂತ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 2 ಕ್ಕೆ ಮುಂದೂಡಿದೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ ಬೇಗೂರು ಕೆರೆಯಲ್ಲಿ ಕೃತಕ ದ್ವೀಪ ಸೃಷ್ಟಿಸಿ ಶಿವನ ಮೂರ್ತಿ ಪ್ರತಿಷ್ಠಾಪಿಸಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಅಲ್ಲದೇ, ಕೆರೆಯ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆಯೂ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿತ್ತು.

ಕೆರೆಯಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸಬಾರದು ಎಂದು ಹಲವು ಆದೇಶಗಳನ್ನು ಹೊರಡಿಸಲಾಗಿದ್ದರೂ ಹೀಗೆ ಮಾಡುತ್ತಿರುವುದು ಆಘಾತ ಉಂಟು ಮಾಡುತ್ತದೆ. ನ್ಯಾಯಾಲಯದ ಆದೇಶಗಳನ್ನು ಸಲೀಸಾಗಿ ನಿಷೇಧಿಸಲಾಗಿದೆ. ಒಂದುವೇಳೆ, ನ್ಯಾಯಾಲಯದ ಆದೇಶದಿಂದ ಯಾರಿಗಾದರೂ ಸಮಸ್ಯೆಯಾದರೆ ಅದಕ್ಕೆ ಶಾಸನಬದ್ಧವಾದ ಪರಿಹಾರಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿತ್ತು.

HC ಆದೇಶವನ್ನು ಉಲ್ಲಂಘಿಸಿ ಬೇಗೂರು ಕೆರೆಯ ಶಿವನ ಮೂರ್ತಿ ಅನಾವರಣ!: ರಾಜ್ಯ ಸರ್ಕಾರ, BBMPಗೆ ಕೋರ್ಟ್ ತರಾಟೆ

ಬೇಗೂರಿನ ಕೆರೆಯಲ್ಲಿ ಬಿಬಿಎಂಪಿ ಅಕ್ರಮವಾಗಿ ಮಣ್ಣು ತುಂಬಿ ಕೃತಕ ದ್ವೀಪ ಸೃಷ್ಟಿಸಿ, ಅಲ್ಲಿ ಶಿವನ ಮೂರ್ತಿ ಪ್ರತಿಷ್ಟಾಪಿಸಿದೆ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಲಿಯೊ ಸಲ್ದಾನ ಎನ್ನುವವರು ನ್ಯಾಯಾಲಯದ ಮೊರೆ ಹೋಗಿದ್ದರು.
ನ್ಯಾಯಾಲಯವು ಶಿವನ ಮೂರ್ತಿ ಮುಚ್ಚುವಂತೆ ನಿರ್ದೇಶನ ನೀಡಿತ್ತು. ಆದರೆ, ಕೆಲವು ದಿನಗಳ ಹಿಂದೆ ಹಿಂದುತ್ವವಾದಿ ಕಾರ್ಯಕರ್ತರು ನ್ಯಾಯಾಲಯದ ಆದೇಶವನ್ನು ಮೀರಿ ಮೂರ್ತಿಗೆ ಸುತ್ತಿದ್ದ ಟರ್ಪಾಲನ್ನು ಬಿಚ್ಚಿದ್ದರು. ಅಲ್ಲದೆ, ಅರ್ಜಿದಾರರ ವಿರುದ್ಧ ಕೋಮು ನಿಂದಕ ಸಂದೇಶಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಕೆಲವು ಬೆದರಿಕೆಗಳೂ ಬಂದಿದೆಯೆಂದು ಎಂದು ಮೂಲಗಳು ಪ್ರತಿಧ್ವನಿಗೆ ತಿಳಿಸಿದೆ.

Previous Post

ಕಾಬೂಲ್‌ನಲ್ಲಿ ವಿಮಾನ ಟೇಕ್‌ಆಫ್‌ ವೇಳೆ ಸತ್ತವರ ಕುರಿತು ಯುಎಸ್ ವಿಶೇಷ ತನಿಖೆ

Next Post

‘ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆʼ – ಸಚಿವ ಮುರುಗೇಶ್ ಆರ್ ನಿರಾಣಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
‘ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆʼ – ಸಚಿವ ಮುರುಗೇಶ್ ಆರ್ ನಿರಾಣಿ

‘ಹಿಂದೂ ದೇವತೆಗಳಿಗೆ ನಾನು ಅಪಮಾನ ಮಾಡಿಲ್ಲ. ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆʼ - ಸಚಿವ ಮುರುಗೇಶ್ ಆರ್ ನಿರಾಣಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada