• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗಾಂಧಿ ಪರಿವಾರದ ನಿಷ್ಠರನ್ನು ಪ್ರಮುಖ ಹುದ್ದೆಗಳಿಂದ ದೂರವಿಡಿ : ಜಿ-23 ನಾಯಕರ ಆಗ್ರಹ

Any Mind by Any Mind
March 17, 2022
in ದೇಶ, ರಾಜಕೀಯ
0
ಗಾಂಧಿ ಪರಿವಾರದ ನಿಷ್ಠರನ್ನು ಪ್ರಮುಖ ಹುದ್ದೆಗಳಿಂದ ದೂರವಿಡಿ : ಜಿ-23 ನಾಯಕರ ಆಗ್ರಹ
Share on WhatsAppShare on FacebookShare on Telegram

ಪಂಚರಾಜ್ಯಗಳ ಚುನಾವಣೆಯಿಂದ ತೀವ್ರ ಮುಜುಗರಕ್ಕೆ ತುತ್ತಾಗಿರುವ ಕಾಂಗ್ರೆಸ್ನಲ್ಲಿ ಆಡಳಿತಾತ್ಮಕ ಸರ್ಜರಿ ನಡೆಸಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಈ ನಡುವೆ, ‘ಬಲಿಷ್ಠ ನಾಯಕತ್ವ’ಕ್ಕಾಗಿ ಹಿಂದಿನಿಂದಲೂ ಆಗ್ರಹಿಸುತ್ತಾ ಬಂದಿರುವ ಜಿ-23 ನಾಯಕರು, ಚುನಾವಣೆಯ ಸೋಲಿನ ಕುರಿತು ಸಭೆ ನಡೆಸಿದ್ದಾರೆ. ಈ ಸಭೆಯ ಪ್ರಮುಖಾಂಶಗಳ ಕುರಿತು ಚರ್ಚೆ ನಡೆಸಲು ಹಾಗೂ ದೇಶದ ಅತ್ಯಂತ ಹಿರಿಯ ರಾಜಕೀಯ ಪಕ್ಷವನ್ನು ಮತ್ತೆ ಬಲಿಷ್ಟವಾಗಿ ಕಟ್ಟುವ ಸಲುವಾಗಿ ಜಿ-23 ಗುಂಪಿನ ಪ್ರತಿನಿಧಿಯಾಗಿ ಕಾಂಗ್ರೆಸ್ ಹಿರಿಯ ಸದಸ್ಯ, ಮಾಜಿ ರಾಜ್ಯಸಭಾ ಸಂಸದ ಗುಲಾಂ ನಬಿ ಆಝಾದ್ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

ADVERTISEMENT

ಸದ್ಯಕ್ಕೆ ಪಕ್ಷವನ್ನು ಒಡೆಯುವ ನಿರ್ಧಾರವನ್ನು ಕೈಬಿಟ್ಟಿರುವ ಜಿ-23 ನಾಯಕರು, ಪಕ್ಷ ಒಡೆದಲ್ಲಿ ಅದನ್ನು ತಡೆದುಕೊಳ‌್ಳುವ ಶಕ್ತಿ ನಾಯಕರಿಗೆ ಇಲ್ಲ. ಪಕ್ಷವು ಮತ್ತಷ್ಟು ಪಾತಾಳಕ್ಕೆ ಇಳಿಯುವುದು ಖಚಿತವೆಂದು ‘ನಂಬಿರುವ’ ಇವರು, ಸಂಘಟಿತ ಹಾಗೂ ಎಲ್ಲರನ್ನೂ ಒಳಗೊಂಡ ನಾಯಕತ್ವ ಮತ್ತು ದೃಢ ನಿರ್ಧಾರ ಕೈಗೊಳ್ಳುವಿಕೆಯ ಪ್ರಸ್ತಾಪವನ್ನು ಸೋನಿಯಾ ಗಾಂಧಿ ಮುಂದಿಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಬೇಡಿಕೆಗಳಲ್ಲಿ ರಾಷ್ಟ್ರೀಯ ನಾಯಕತ್ವದ ಬದಲಾವಣೆಯ ಪ್ರಸ್ತಾಪವನ್ನೂ ಕೈಬಿಟ್ಟಿರುವ ಸಾಧ್ಯತೆಗಳಿವೆ.

ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪರಾಮರ್ಶೆ ನಡೆಸಲು ಕರೆದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಅವರ ಈ ‘ತ್ಯಾಗ’ವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ‘ಸರ್ವಾನುಮತದಿಂದ’ ತಿರಸ್ಕರಿಸಲಾಯಿತು, ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಸಭೆಯ ಬಳಿಕ ಹೇಳಿದ್ದರು.

Also Read : ಕಾಂಗ್ರೆಸ್ ಸೋಲನ್ನೇ ಕಾಯುತ್ತಿದ್ದ ‘ಜಿ-23’ ನಾಯಕರ ಗ್ಯಾಂಗ್ ಅಪ್

ರಾಜಿನಾಮೆ ಬದಲಾಗಿ, ಕಾಂಗ್ರೆಸ್ ಪಕ್ಷದೊಳಗೆ ಕೆಲವು ಬದಲಾವಣೆಗಳನ್ನು ತರಲು ನಿರ್ಧಾರ ಕೈಗೊಳ್ಳುವಂತೆ ಸೋನಿಯಾ ಗಾಂಧಿಯವರಿಗೆ ಸಿಡಬ್ಲ್ಯೂಸಿ ಸಭೆಯಲ್ಲಿ ಇತರ ಸದಸ್ಯರು ಮನವಿ ಮಾಡಿಕೊಂಡಿದ್ದರು. ಇದರ ಫಲವಾಗಿ, ಪಂಚರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ರಾಜಿನಾಮೆಯನ್ನು ಕೇಳಲಾಯಿತು. ಮುಂದುವರೆದು, ಇತರ ಬದಲಾವಣೆಗಳನ್ನು ಪಟ್ಟಿಮಾಡಲು ಜೈರಾಂ ರಮೇಶ್, ಅಜಯ್ ಮಾಕೆನ್, ಅವಿನಾಶ್ ಪಾಂಡೆ ಮತ್ತು ಜೀತೆಂದ್ರ ಸಿಂಗ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು. ಇವರೆಲ್ಲರೂ ಹಿಂದಿನಿಂದಲೂ ಗಾಂಧಿ ಪರಿವಾರದೊಂದಿಗೆ ಗುರುತಿಸಿಕೊಂಡವರು.

ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಅವಲೋಕಿಸಿರುವ ಜಿ-23 ನಾಯಕರು, ಕಾಂಗ್ರೆಸ್ ಪಕ್ಷದ ಆಯಕಟ್ಟಿನ ಸ್ಥಾನಗಳಿಗೆ ‘ಗಾಂಧಿ ಪರಿವಾರ’ಕ್ಕೆ ನಿಷ್ಠರಾಗಿರುವವರನ್ನು ಮಾತ್ರ ನೇಮಿಸುವುದನ್ನು ಟೀಕಿಸಿದೆ. ಗಾಂಧಿ ಪರಿವಾರಕ್ಕೆ ನಿಷ್ಠೆ ತೋರಿಸುವ ಸಲುವಾಗಿ, ರಾಷ್ಟ್ರ ನಾಯಕರನ್ನು ಎಲ್ಲಾ ತಪ್ಪುಗಳಿಂದಲೂ ದೂರವಿಟ್ಟು, ನಾಮ್ ಕೆ ವಾಸ್ತೆ ಬದಲಾವಣೆಗಳನ್ನು ಮಾತ್ರ ಸೂಚಿಸುವ ಅಪಾಯವಿದೆ ಎಂದು ಜಿ-23 ನಾಯಕರು ಆರೋಪಿಸಿದ್ದಾರೆ.

ಈ ಬಾರಿಯ ಜಿ-23 ಸಭೆಯಲ್ಲಿ ಹಳೆಯ ನಾಯಕರ ಜತೆ, ಗಾಂಧಿ ಪರಿವಾರದ ಆಪ್ತರಾಗಿದ್ದ ಮಣಿಶಂಕರ್ ಅಯ್ಯರ್ ಅವರು ಕೂಡಾ ಗುರುತಿಸಿಕೊಂಡಿದ್ದು ಆಶ್ಚರ್ಯಕ್ಕೆ ಕಾರಣವಾಗಿದೆ. ಇನ್ನುಳಿದಂತೆ ಈ ಸಭೆಯಲ್ಲಿ ಕಪಿಲ್ ಸಿಬಲ್, ಮನೀಶ್ ತಿವಾರಿ, ಆನಂದ್ ಶರ್ಮಾ, ಫೃಥ್ವಿರಾಜ್ ಚವ್ಹಾಣ್, ಭೂಪಿಂದರ್ ಹೂಡಾ, ರಾಜ್ ಬಬ್ಬರ್ ಹಾಗೂ ಶಂಕರ್ ಸಿಂಗ್ ವಘೇಲಾ ಅವರೂ ಹಾಜದ್ದರು.

ಈ ಹಿಂದೆ ಜಿ-23 ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಶಶಿ ತರೂರ್, ಈ ಬಾರಿ ಜಿ-23ಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಗುರುತಿಸಿಕೊಂಡಿದ್ದರು.

Tags: BJPCongress PartyCovid 19ಕರೋನಾಕೋವಿಡ್-19ಗಾಂಧಿ ಕುಟುಂಬಗಾಂಧಿ ಜಯಂತಿಗಾಂಧಿ ಪರಿವಾರಜಿ-23ನರೇಂದ್ರ ಮೋದಿಪ್ರಮುಖ ಹುದ್ದೆಪ್ರಿಯಾಂಕಾ ಗಾಂಧಿಬಿಜೆಪಿರಾಹುಲ್ ಗಾಂಧಿಸೋನಿಯಾ ಗಾಂಧಿ
Previous Post

ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರ ವಿರುದ್ಧ ಗುಡುಗಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Next Post

ಮೇಲ್ಮನೆಗೆ ಎಎಪಿ ಅಭ್ಯರ್ಥಿಯಾಗಿ Turbanoter ಹರ್ಭಜನ್ ಸಿಂಗ್!

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025

ನವೆಂಬರ್‌ ನಲ್ಲಿ ಡಿಕೆಶಿ ಸಿಎಂ ಸ್ಥಾನಕ್ಕೆ ಅಪಶಕುನನಾ..?

June 17, 2025
HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

June 17, 2025
Next Post
ಮೇಲ್ಮನೆಗೆ ಎಎಪಿ ಅಭ್ಯರ್ಥಿಯಾಗಿ Turbanoter ಹರ್ಭಜನ್ ಸಿಂಗ್!

ಮೇಲ್ಮನೆಗೆ ಎಎಪಿ ಅಭ್ಯರ್ಥಿಯಾಗಿ Turbanoter ಹರ್ಭಜನ್ ಸಿಂಗ್!

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada