• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಬೆಂ.ಗ್ರಾ ಗೆಲ್ಲಲು ‘ಅಷ್ಟಪಾಲಕರ’ ನೇಮಕ.. ಡಿಕೆ ಬ್ರದರ್ಸ್ ತಂತ್ರಕ್ಕೆ ‘ಕೇಸರಿ’ ಪ್ರತಿತಂತ್ರ.. ಡಾ.ಮಂಜುನಾಥ್ ಜಯಕ್ಕೆ ವೋಟ್ ‘ಲೆಕ್ಕಾ’ಚಾರ ..!

ಪ್ರತಿಧ್ವನಿ by ಪ್ರತಿಧ್ವನಿ
March 23, 2024
in ಇತರೆ / Others, ರಾಜಕೀಯ
0
ಬೆಂ.ಗ್ರಾ ಗೆಲ್ಲಲು ‘ಅಷ್ಟಪಾಲಕರ’ ನೇಮಕ.. ಡಿಕೆ ಬ್ರದರ್ಸ್ ತಂತ್ರಕ್ಕೆ ‘ಕೇಸರಿ’ ಪ್ರತಿತಂತ್ರ.. ಡಾ.ಮಂಜುನಾಥ್ ಜಯಕ್ಕೆ ವೋಟ್ ‘ಲೆಕ್ಕಾ’ಚಾರ ..!
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾವು ಜೋರಿದೆ. ಡಿಕೆ ಬ್ರದರ್ಸ್ ಸೊಕ್ಕು ಅಡಗಿಸಲು ಮೈತ್ರಿ ಪಕ್ಷಗಳು ಒಗ್ಗಟ್ಟಾಗಿ ನಿಂತಿವೆ
ಬೆಂಗಳೂರು ಗ್ರಾಮಾಂತರ ಗೆಲ್ಲಲೇಬೇಕೆಂದು‌ ಪಣತೊಟ್ಟ ನಿಂತಿರುವ ಬಿಜೆಪಿ ಸಾಕಷ್ಟು ಮಾಸ್ಟರ್ ಪ್ಲಾನ್ ಹೆಣೆಯುತ್ತಿದೆ.
ಇದೇ ಕ್ಷೇತ್ರಕ್ಕೀಗ ಅಷ್ಟಪಾಲಕರನ್ನು ನೇಮಿಸಿ, ಬಿಜೆಪಿಯನ್ನು ಗೆಲುವಿನ ದಡ ಮುಟ್ಟಿಸಲು ತಂತ್ರ ಹೆಣೆದಿರುವ ಬಿಜೆಪಿ ನಾಯಕರು , ಶತಾಯಗತಾಯ ಗೆಲುವಿಗಾಗಿ ಶ್ರಮಿಸ್ತಿದ್ದಾರೆ. ಹಾಗಾದ್ರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಡಿಕೊಂಡಿರುವ ತಂತ್ರಗಾರಿಕೆಯಾದ್ರೂ ಏನು?
ಪ್ರತಿಧ್ವನಿ ಬಿಚ್ಚಿಡುತ್ತಿದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಗೆಲ್ಲಲು ಬಿಜೆಪಿ ಮಾಡಿಕೊಂಡಿರುವ ತಂತ್ರಗಾರಿಕೆಯ ಇನ್‌ಸೈಡ್ ಸ್ಟೋರಿಯನ್ನು.

ADVERTISEMENT

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ,‌ ವಿಸ್ತೀರ್ಣ ಹಾಗೂ ಜನಸಂಖ್ಯೆ ಎರಡಲ್ಲೂ ಅತ್ಯಂತ ದೊಡ್ಡ ಕ್ಷೇತ್ರ ಎಂಬ ಹೆಗ್ಗಳಿಕೆ ಹೊಂದಿದೆ. 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕ.ಹೀಗಾಗಿ, ಸದ್ಯ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಅಖಾಡಕ್ಕಿಳಿಸಿ ರಾಜಕೀಯ ಮೇಲಾಟ ನಡೆಸಲಾಗ್ತಿದೆ.ಡಾ.ಸಿ.ಎನ್.ಮಂಜುನಾಥ್ ಗೆಲುವಿಗಾಗಿ ಅವಿರತವಾಗಿ ಶ್ರಮಿಸಲು ವೇದಿಕೆ ಸಿದ್ಧಪಡಿಸುತ್ತಿರುವ ಬಿಜೆಪಿ ನಾಯಕರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಿಗೂ 8 ಶಾಸಕರುಗಳನ್ನು ನೇಮಿಸಿ, ಅಷ್ಟಪಾಲಕರಂತೆ ಕಾರ್ಯನಿರ್ವಹಿಸುವಂತೆ ಬಿಜೆಪಿ ಹೈಕಮಾಂಡ್ ತಂತ್ರ ಹೆಣೆದಿದೆ.


ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ, ಅನೇಕಲ್, ರಾಮನಗರ, ಕನಕಪುರ, ಚನ್ನಪಟ್ಟಣ, ‌ಮಾಗಡಿ ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಬ್ಬೊಬ್ಬ ಬಿಜೆಪಿ ಶಾಸಕರ ನಿಯೋಜನೆಗೆ ನಿರ್ಧಾರ ಮಾಡಲಾಗಿದೆ.ಚುನಾವಣೆ ಮುಗಿಯುವವರೆಗೂ ಆಯಾ ಕ್ಷೇತ್ರದಲ್ಲಿ ಶಾಸಕರುಗಳು ಹಗಲಿರುಳು ಕಾರ್ಯನಿರ್ವಹಣೆ ಮಾಡಬೇಕು.ಅದರಲ್ಲೂ ಪ್ರಮುಖವಾಗಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಂ‌.ಕೃಷ್ಣಪ್ಪ ಜನಪ್ರತಿನಿಧಿಯಾಗಿದ್ದು, ಅವರ ಕ್ಷೇತ್ರದಲ್ಲಿ 7 ಲಕ್ಷ ಮತಗಳಿದೆ. ಇದರಲ್ಲಿ ಶೇ.90% ಕ್ಕೂ ಹೆಚ್ಚು ಮತ ಚಲಾವಣೆಯಾಗುವಂತೆ ನೋಡಿಕೊಂಡು ಡಾ.ಸಿ.ಎನ್. ಮಂಜುನಾಥ್‌ಗೆ ದೊಡ್ಡ ಪ್ರಮಾಣದ ಮತಗಳನ್ನು ಲೀಡ್ ಆಗಿ ಕೊಡಿಸಬೇಕು ಅಂತ ಸೂಚನೆ ನೀಡಲಾಗಿದೆ.ಇತ್ತ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಶಾಸಕ ಮುನಿರತ್ನ ಜನಪ್ರತಿಯಾಗಿದ್ದು, ಅವರ ಕ್ಷೇತ್ರದಲ್ಲಿ 5 ಲಕ್ಷ ಮತದಾರರಿದ್ದಾರೆ.
ಈ ಕ್ಷೇತ್ರದಲ್ಲೂ ಕೂಡ ಶೇ.90% ಕ್ಕಿಂತ ಹೆಚ್ಚು ಮತಗಳ ಲೀಡ್ ಮಂಜುನಾಥ್ ಪರ ಚಲಾವಣೆಯಾಗುವಂತೆ ನೋಡಿಕೊಳ್ಳುವುದರೊಂದಿಗೆ ಲೀಡ್ ಕೊಡಿಸಲೇಬೇಕು. ಅನೇಕಲ್‌ನಲ್ಲಿ 4 ಲಕ್ಷ ಮತಗಳಿದೆ.


ಇಲ್ಲೂ ಕೂಡ ಡಾ.ಮಂಜುನಾಥ್‌ಗೆ ಲೀಡ್ ಕೊಡಿಸಲೇಬೇಕು.ಈ ಮೂರು ಕ್ಷೇತ್ರಗಳಲ್ಲೇ ಲೆಕ್ಕ ಹಾಕಿದ್ರೆ, 7+5+4 =16 ಲಕ್ಷ ಮತಗಳಾಗುತ್ತದೆ.
ಜೊತೆಗೆ ರಾಜರಾಜೇಶ್ವರಿನಗರ, ಬೆಂಗಳೂರು ದಕ್ಷಿಣ ಮತ್ತು ಅನೇಕಲ್ ಭಾಗಗಳಲ್ಲಿ ನಗರಗಳೇ ಹೆಚ್ಚಾಗಿದ್ದು, ಬಿಜೆಪಿ ಬೆಂಬಲಿಸುವ ಮತಗಳಿದೆ. ಇಲ್ಲಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಈ 3 ಕ್ಷೇತ್ರಗಳಲ್ಲೂ ಬಿಜೆಪಿ ‌ಮತಗಳನ್ನು ಲೀಡ್ ಆಗಿ ಮಾಡಿಕೊಳ್ಳಲೇಬೇಕು.ಇದನ್ನು ಹೊರತುಪಡಿಸಿ, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಸರಾಸರಿಯಾಗಿ 2 ರಿಂದ 2.5 ಲಕ್ಷ ಮತಗಳಿದೆ.ಇದನ್ನು ಕ್ರೂಢಿಕರಣ ಮಾಡಿದ್ರೆ 2.5X5=12.50 (ಹನ್ನೆರಡು ಲಕ್ಷದ ಐವತ್ತು ಸಾವಿರ ಮತಗಳು) ಆಗಲಿದೆ.ಈ 5 ಕ್ಷೇತ್ರಗಳ ಪೈಕಿ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಪಿ. ಯೋಗೇಶ್ವರ್ ಜುಗಲ್‌ಬಂದಿ ವರ್ಕ್‌ಔಟ್ ಮಾಡಬೇಕು.
ಇತ್ತ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೊದಲಿನಿಂದಲೂ ಬಿಜೆಪಿಗೆ ಲೋಕಸಭಾ ಚುನಾವಣೆ ಅಂದರೆ ಲೀಡ್ ಬರುತ್ತಲೇ ಇದೆ.
ಇದನ್ನೇ ಈಗಲೂ ಮುಂದುವರೆಸಿದ್ರೆ, ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಪ್ರಯತ್ನ ಮಾಡಿದ್ರೆ, ಮಂಜುನಾಥ್‌ಗೆ ಗೆಲುವಿನ ಹಾದಿ ಸುಲಭವಾಗಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿರುವ ಬಿಜೆಪಿ ನಾಯಕರು ಎಲ್ಲಾ ನಾಯಕರಿಗೂ ಗ್ರೌಂಡ್ ಗೆ ಇಳಿದು ಕೆಲಸ ಮಾಡುವಂತೆ ಸೂಚಿಸಿದ್ದಾರೆ.
ಇನ್ನು ಇದೇ ಕಾರಣಕ್ಕೆ ನಗರ ಪ್ರದೇಶಗಳಲ್ಲಿನ ಮತಗಳು ಚದುರಿ ಹೋಗಬಾರದೆಂಬ ಕಾರಣವನ್ನು ಮುಂದಿಟ್ಟುಕೊಂಡು ದೇವೇಗೌಡರ ಅಳಿಯ ಡಾ.ಮಂಜುನಾಥ್‌ರನ್ನು ಬಿಜೆಪಿ ಚಿಹ್ನೆಯಡಿಯಲ್ಲಿ ಕಣಕ್ಕಿಳಿಸುತ್ತಿರುವುದು ಇಲ್ಲಿ ಗಮನಿಸಲೇಬೇಕಾದ ಅಂಶ ಎನ್ನಲಾಗಿದೆ.
ಪ್ರಬಲ ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕವಾಗಿರುವ ಕ್ಷೇತ್ರದಲ್ಲಿ ಒಕ್ಕಲಿಗ v/s ಒಕ್ಕಲಿಗ ಅಖಾಡ ನಿರ್ಮಿಸಿ ರಾಜಕೀಯವಾಗಿ ಜಿದ್ದಾಜಿದ್ದಿನ ಕ್ಷೇತ್ರವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಮಾರ್ಪಾಡು ಮಾಡಿ, ಸ್ವಲ್ಪ ತಂತ್ರಗಾರಿಕೆ ಮಾಡಿದ್ರೆ‌ ಮಂಜುನಾಥ್ ಗೆಲುವು ಸುಲಭ ಎಂಬುದನ್ನು ಅರಿತಿರುವ ಬಿಜೆಪಿ ಸಾಕಷ್ಟು ವರ್ಕೌಟ್ ಮಾಡಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 8 ವಿಧಾನಸಭಾ ಕ್ಷೇತ್ರಗಳಿಗೂ ಅಷ್ಟಪಾಲಕರನ್ನು ನೇಮಿಸಲು ಸಜ್ಜಾಗಿದೆ. ಈ ಮೂಲಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ತಂತ್ರ ಹೆಣೆಯುತ್ತಿದೆ.

Tags: # hdkumaraswamyBJPCMSiddaramaiahCongress PartyDKSureshdrmanjunathhddevegowdaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Donald Trump Is Sworn In as President, Capping His Swift Ascent

Next Post

ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:

Related Posts

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
0

ಬೆಂಗಳೂರು: ನೋಂದಾಯಿತ ಕಟ್ಟಡ ಕಾರ್ಮಿಕರ ಆರೋಗ್ಯ ಕಾಪಾಡಲು ನಡೆಸುವ ಪ್ರಿವೆಂಟಿವ್‌ ಹೆಲ್ತ್‌ ಕೇರ್‌ ಯೋಜನೆಯಡಿ ಪರೀಕ್ಷೆಗಳನ್ನು ನಿಯಮಾನುಸಾರ ನಡೆಸಲಾಗುತ್ತದೆ. ಅಕ್ರಮ ನಡೆದಿರುವ ದೂರುಗಳಿದ್ದರೆ ತನಿಖೆ ನಡೆಸಲಾಗುವುದು ಎಂದು...

Read moreDetails
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
Next Post
ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:

ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು:

Please login to join discussion

Recent News

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada