Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬೆಂಗಳೂರಿನ ಮಳೆ ಬಾಧಿತ ಸ್ಥಳಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ

ಪ್ರತಿಧ್ವನಿ

ಪ್ರತಿಧ್ವನಿ

August 31, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

ಕಾವೇರಿ ಬಿಕ್ಕಟ್ಟು ಬಗೆಹರಿಸಲು ರಾಜ್ಯಗಳ ನಡುವೆ ಒಮ್ಮತ ಮೂಡಬೇಕು: ಎಚ್‌ಡಿ ದೇವೇಗೌಡ

ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ
ನಾಳೆ ಮಧ್ಯಾಹ್ನ 3.30 ಗಂಟೆಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ತಿಳಿಸಿದರು.

ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಬೆಂಗಳೂರು ನಗರದ ಬೊಮ್ಮನಹಳ್ಳಿ, ಮಹದೇವಪುರ ವಲಯಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಈ ಎರಡು ವಲಯಗಳಲ್ಲಿ ತೀವ್ರ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಲಾಗಿದೆ.

ಕೆಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಯಾಗಿದೆ. ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಬಹಳ ದೊಡ್ಡ ಪ್ರಮಾಣದ ಹಾನಿಯಾಗಿದೆ. ಓಆರ್ ಆರ್ ರಸ್ತೆಯಲ್ಲಿ ನೀರು ನಿಂತು, ಕೆಳಗಿನ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ಜನವಸತಿಗೆ ತೊಂದರೆಯಾಗಿದೆ. ಈ ಎಲ್ಲಾ ವಿಚಾರಗಳನ್ನು ಪರಿಶೀಲಿಸಿದಾಗ, ಮಹದೇವಪುರ ವಲಯದಲ್ಲಿ 9 ಕಡೆ, ಹಾಗೂ ಬೊಮ್ಮನಹಳ್ಳಿಯಲ್ಲಿ 11 ಕಡೆ ತೊಂದರೆಯಾಗಿದೆ. ಅಲ್ಲಿನ ಸವಳಕೆರೆ ತುಂಬಿ ಹರಿದಿದ್ದು, ಬಹಳ ಸಮಸ್ಯೆಯಾಗಿದೆ. ಓ.ಆರ್.ಆರ್. ರಸ್ತೆಯಾಗುವ ಹಂತದಲ್ಲಿ ಮುಖ್ಯ ಕಾಲುವೆ ಒಂದೆಡೆ ಕಟ್ಟಿಕೊಂಡಿದೆ. ನೀರು ನಿಲ್ಲಲು ಇರುವ ಎಲ್ಲಾ ಅಡೆತಡೆಗಳನ್ನು ಸಂಪೂರ್ಣವಾಗಿ ತೆಗೆದು, ಪೈಪ್ ಲೈನ್ ಅಳವಡಿಸಬೇಕು. ಹಾಗೂ ಓ.ಆರ್.ಆರ್ ರಸ್ತೆಯಲ್ಲಿ ನಿಂತಿತ್ತುವ ನೀರನ್ನು ಹೊರಚೆಲ್ಲಬೇಕೆಂದು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ಸೂಚಿಸಿದರು.

ಹಲವು ಬಡಾವಣೆಗಳಲ್ಲಿ ನೀರು ನಿಂತಿದೆ. ಅಲ್ಲಿ ಚರಂಡಿಗಳ ಮುಂದುವರಿಕೆ ಇಲ್ಲ. ಮುಖ್ಯ ಚರಂಡಿ ಬಡಾವಣೆಯಲ್ಲಿ ಬಂದು ನಿಂತಿದೆ. ಅದನ್ನೂ ಕೂಡ ತೆರವು ಮಾಡಿ ನೀರಿಗೆ ತನ್ನದೇ ಸಹಜ ಮಾರ್ಗಗಳನ್ನು ಸರಿ ಪಡಿಸಲು ಸೂಚಿಸಲಾಗಿದೆ ಎಂದರು.

ಬೊಮ್ಮನಹಳ್ಳಿಯಲ್ಲಿಯೂ ಕೆಲಸ ಪ್ರಾರಂಭವಾಗಿದ್ದು, ನೀರು ನಿಂತಿರುವಲ್ಲಿ ನೀರು ಹೊರಹಾಕಲು ಸೂಚಿಸಲಾಗಿದೆ. 125 ಕ್ಕಿಂತ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ವರಿಗೆ ಪರಿಹಾರ ನೀಡಲು ಕಂದಾಯ ಸಚಿವರು ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದರು.

1500 ಕೋಟಿ ರೂ.ಗಳನ್ನು ರಾಜ ಕಾಲುವೆ ನಿರ್ಮಾಣ ಕಾರ್ಯಕ್ಕೆ ನೀಡಿದ್ದು, ಅವುಗಳ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ಗಳು ಪ್ರಾರಂಭವಾಗಬೇಕು. ಕಳೆದ 6 ತಿಂಗಳಿಂದ ನಿರಂತರವಾಗಿ ಮಳೆ ಬಂದದ್ದರಿಂದ ಸಮಸ್ಯೆಯಾಗಿದೆ. ಕಳೆದ 3 ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಈ ತಿಂಗಳು ಹಾಗೂ ಈ ವಾರ ಅತಿ ಹೆಚ್ವು ಮಳೆಯಾಗಿದ್ದರಿಂದ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ತುಂಬಿರುವ ನೀರು ಹಾಗೂ ಮಳೆ ನೀರು ಇಷ್ಟು ಅನಾಹುತಕ್ಕೆ ಕಾರಣವಾಗಿದೆ. ಹಿಂದೆಂದೂ ಈ ಪರಿಸ್ಥಿತಿ ಇರಲಿಲ್ಲ. ಕಳೆದ ಬಾರಿ ಯಲಹಂಕ, ಮಲ್ಲೇಶ್ವರಂ ಭಾಗದಲ್ಲಿ ಆಗಿದ್ದ ತೊಂದರೆ ಸರಿಪಡಿಸಿದ್ದರಿಂದ ಈ ಬಾರಿ ಸಮಸ್ಯೆಯಾಗಿಲ್ಲ. ಹಿಂದೆ ಈ ಭಾಗದಲ್ಲಿ ಕೆರೆಗಳು ತುಂಬಿದ್ದರಿಂದ ಸಮಸ್ಯೆಯಾಗಿದೆ. ಬರುವ ದಿನಗಳಲ್ಲಿ ಎಲ್ಲಾ ಅಡೆತಡೆ ನಿವಾರಿಸಲು ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿ ಅನುದಾನ ಅಗತ್ಯವಿದ್ದರೆ, ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ನಾಳೆ ಪರೀಕ್ಷೆ ಮಾಡಿ ಸ್ಥಳದಲ್ಲಿಯೇ ಸೂಚನೆ ನೀಡಲಾಗುವುದು. ಯಲಹಂಕದಲ್ಲಿ ಕೆಲಸ ಮಾಡಿದ್ದರಿಂದ ಈ ಬಾರಿ ತೊಂದರೆಯಾಗಿಲ್ಲ. ಕೆ.ಆರ್.ಪುರಂ ನಲ್ಲಿ ರೈಲ್ವೆ ಅನುಮತಿ ಪಡೆದು ಟೆಂಡರ್ ಕರೆದು ಕೆಲಸ ಪ್ರಾರಂಭವಾಗುತ್ತಿದೆ. ಹೊಸಕೆರೆಹಳ್ಳಿಯಲ್ಲಿಯೂ ಕೆಲಸ ಪ್ರಾರಂಭವಾಗಿದೆ. ಆಡಳಿತಾತ್ಮಕ ಅನುಮೋಡನೆಗಳನ್ನು ನೀಡಿ, ಅನುದಾನ ಬಿಡುಗಡೆಯೂ ಆಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಳ್ಳಂದೂರು ಇಕೊಸ್ಪೇಸ್ ಹಾಗೂ ಆರ್ಎಂಝಡ್ ಪ್ರದೇಶದಲ್ಲಿ ನೀರು ಸಂಗ್ರಹವನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು. ತುರ್ತಾಗಿ ನೀರು ಸಂಗ್ರಹವಾಗಿರುವುದನ್ನು ತೆರವುಗೊಳಿಸಿ. ರೇನ್ಬೋ ಲೇಔಟ್ ನಲ್ಲಿ ನೀರು ತೆಗೆದು, ಮಳೆನೀರುಗಾಲುವೆ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಿಸಲಾಗಿದೆ ಎಂದರು.

ಎಲ್ಲ ವಲಯಗಳ ಜಂಟಿ ಆಯುಕ್ತರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಜಲಮಂಡಳಿ, ಬೆಸ್ಕಾಂ ನೊಂದಿಗೆ ಸಮನ್ವಯ ವಹಿಸಿ ಕೆಲಸ ಮಾಡುವಂತೆ ಸೂಚಿಸಿದೆ ಎಂದರು.

ಮಳೆಯಾಗುತ್ತಿರುವ ಸಂದರ್ಭದಲ್ಲಿ ಸಂಚಾರ ಪೊಲೀಸರು ಸಕ್ರಿಯರಾಗಿ, ಸುಗಮ ಸಂಚಾರವನ್ನು ಖಾತರಿಪಡಿಸಬೇಕು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದೆ ಎಂದು ತಿಳಿಸಿದರು.

RS 500
RS 1500

SCAN HERE

Pratidhvani Youtube

«
Prev
1
/
5516
Next
»
loading
play
Siddaramaiah | 3,000 ಕ್ಯೂಸೆಕ್ಸ್ ನೀರು ಬಿಡೋದನ್ನ ನಾವು ಚಾಲೆಂಜ್ ಮಾಡ್ತೀವಿ..!
play
LIVE: HD DeveGowda Press Meet | JDS | HD Kumaraswamy | Politics | Cauvery #pratidhvani #hddevegowda
«
Prev
1
/
5516
Next
»
loading

don't miss it !

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
September 21, 2023
ಸರ್ಕಾರದ ನಡೆಗೆ ಕಿಡಿಕಾರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Top Story

ಸರ್ಕಾರದ ನಡೆಗೆ ಕಿಡಿಕಾರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

by ಪ್ರತಿಧ್ವನಿ
September 25, 2023
ಕಾವೇರಿ ನೀರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ:  ಶಂಖ ಜಾಗಟೆ ಗಂಟೆ ನಾದದ ಮೂಲಕ ವಿನೂತನ ಪ್ರತಿಭಟನೆ‌
Top Story

ಕಾವೇರಿ ನೀರಿಗಾಗಿ ಬ್ರಾಹ್ಮಣ ಸಂಘದಿಂದ ಸಾಮೂಹಿಕ ಭಜನೆ: ಶಂಖ ಜಾಗಟೆ ಗಂಟೆ ನಾದದ ಮೂಲಕ ವಿನೂತನ ಪ್ರತಿಭಟನೆ‌

by ಪ್ರತಿಧ್ವನಿ
September 26, 2023
ಡಿಸಿಎಂ ಬಿಟ್ಟ ಅಸ್ತ್ರಕ್ಕೆ ಸಿಎಂ ಬ್ರಹ್ಮಾಸ್ತ್ರ ಬಳಕೆ.. ಕಾಂಗ್ರೆಸ್​ ಸುಟ್ಟು ಬಿಡುವ ಭೀತಿ..
Top Story

ಡಿಸಿಎಂ ಬಿಟ್ಟ ಅಸ್ತ್ರಕ್ಕೆ ಸಿಎಂ ಬ್ರಹ್ಮಾಸ್ತ್ರ ಬಳಕೆ.. ಕಾಂಗ್ರೆಸ್​ ಸುಟ್ಟು ಬಿಡುವ ಭೀತಿ..

by ಲಿಖಿತ್‌ ರೈ
September 21, 2023
ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ
Top Story

ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ

by ಪ್ರತಿಧ್ವನಿ
September 26, 2023
Next Post
ಏಷ್ಯಾಕಪ್: ಹಾಂಕಾಂಗ್ ವಿರುದ್ಧ ಭಾರತಕ್ಕೆ 40 ರನ್ ಜಯ

ಏಷ್ಯಾಕಪ್: ಹಾಂಕಾಂಗ್ ವಿರುದ್ಧ ಭಾರತಕ್ಕೆ 40 ರನ್ ಜಯ

ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ

ಇಂದು ಬೆಂಗಳೂರಿನ ಮಳೆ ಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಪರಿಶೀಲನೆ

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ; ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ; ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist