ಆಟವಾಡುತ್ತಿದ್ದ 12 ವರ್ಷದ ಬಾಲಕ ಆಕಸ್ಮಿಕವಾಗಿ ಅಪಾರ್ಟ್ ಮೆಂಟ್ ನ 2ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಎಂಎಲ್ ಎ ಲೇಔಟ್ನ ಸಿವಿಕೆ ಮೀನಾಕ್ಷಿ ಅಪಾರ್ಟ್ ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 7ನೇ ತರಗತಿ ವಿದ್ಯಾರ್ಥಿ ಅದಿತ್ ಮೃತಪಟ್ಟ ಬಾಲಕ.
ಶನಿವಾರ ಆಗಿದ್ದರಿಂದ ಶಾಲೆಯಿಂದ ಮಧ್ಯಾಹ್ನ ಮರಳಿದ ನಂತರ 2ನೇ ಮಹಡಿಯ ಬಾಲ್ಕನಿಯಲ್ಲಿ ಅದಿತ್ ಆಟವಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.






