• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗೊಂದಲದ ಬೆಂಗಳೂರು ಬಂದ್​.. ಇದ್ಯಾಕೆ ಈ ರೀತಿಯ ಗೊಂದಲ ಆಗಿದ್ದು..?

ಕೃಷ್ಣ ಮಣಿ by ಕೃಷ್ಣ ಮಣಿ
September 26, 2023
in Top Story, ಕರ್ನಾಟಕ
0
ಗೊಂದಲದ ಬೆಂಗಳೂರು ಬಂದ್​.. ಇದ್ಯಾಕೆ ಈ ರೀತಿಯ ಗೊಂದಲ ಆಗಿದ್ದು..?
Share on WhatsAppShare on FacebookShare on Telegram

ಇವತ್ತು ಬೆಂಗಳೂರು ಬಂದ್​.. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯ ಬಂದ್​ಗೆ ಕರೆ ಕೊಡಲಾಗಿತ್ತು. ಆ ಬಳಿಕ ಬೆಂಗಳೂರು ಬಂದ್​ಗೆ ಕರೆ ನೀಡಲಾಯ್ತು. ಜಲಸಂರಕ್ಷಣಾ ಸಮಿತಿ ನೀಡಿರುವ ಬಂದ್​ ಕರೆ ಸಾಕಷ್ಟು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಬಂದ್​ ಬಹುತೇಕ ಯಶಸ್ವಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದರಲ್ಲೂ ಬಂದ್​ಗೆ ಬಿಎಂಟಿಸಿ ಸಿಬ್ಬಂದಿ ಕೈ ಜೋಡಿಸರುವುದು ಬಂದ್​ ಯಶಸ್ವಿಯಾಗಲು ಸಹಕಾರಿ ಆಗಿದೆ ಎನ್ನಬಹುದು. ಆದರೆ ಬಿಎಂಟಿಸಿ ಅಧಿಕಾರಿಗಳು ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದು, ಬಂದ್​ ತಡೆಯುವ ಪ್ರಯತ್ನ ಮಾಡಲಾಗಿದೆ. ಈ ಪ್ರಯತ್ನ ಯಶಸ್ವಿಯಾದರೆ ಬಂದ್​ ನೀರಸ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ADVERTISEMENT

ಹೋರಾಟಗಾರರ ಪ್ರತಿಷ್ಠೆಯಾದ ಕಾವೇರಿಗಾಗಿ ಬಂದ್​..!

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್​ ಹಾಗು ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಕಾವೇರಿಗಾಗಿ ಒಂದು ದಿನ ಬೆಂಗಳೂರು ಬಂದ್​ ಮಾಡುವ ನಿರ್ಧಾರ ಮಾಡಲಾಗಿತ್ತು. ಮಧ್ಯಪ್ರವೇಶ ಮಾಡಿದ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ ಹಾಗು ಕೆಲವು ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್​ ಬೇಡ, ಇಡೀ ಕರ್ನಾಟಕ ಬಂದ್​ ಮಾಡೋಣ ಎಂದು ತಿಳಿಸಿದ್ರು. ಇಬ್ಬರ ಉದ್ದೇಶವೂ ಕಾವೇರಿ ನೀರು ಕರ್ನಾಟಕದಿಂದ ತಮಿಳುನಾಡಿಗೆ ಹರಿಯುವುದನ್ನು ತಡೆಯುವುದೇ ಆಗಿತ್ತು. ಆದರೂ ಇಬ್ಬರೂ ಹೋರಾಟಗಾರರು ಬಂದ್​ನಲ್ಲೇ ಅಭದ್ರತೆ ಮೂಡುವಂತೆ ಮಾಡಿದ್ದು ಸಾರ್ವಜನಿಕರ ಬೇಸರಕ್ಕೆ ಕಾರಣವಾಯ್ತು. ಅದರಲ್ಲೂ ಕೆಲವೂ ಸಂಘಟನೆಗಳನ್ನು ಹೋರಾಟದಿಂದ ಹಿಂದೆ ಸರಿಯುವಂತೆ ಮಾಡಿದ್ದು, ಕನ್ನಡಪರ ಹೋರಾಟಗಾರರ ಮೇಲಿದ್ದ ಗೌರವಕ್ಕೆ ಚ್ಯುತಿ ತಂದಿದೆ ಎನ್ನಬಹುದು.

ಹೋರಾಟದಿಂದ ಹಿಂದೆ ಸರಿದಿದ್ದು ಯಾರು..? ಯಾಕೆ..

ಹೋಟೆಲ್​ ಮಾಲೀಕರ ಸಂಘ ಈ ಮೊದಲು ಬಂದ್​ಗೆ ಬೆಂಬಲ ನೀಡಿತ್ತು. ಮಂಗಳವಾರ ಬೆಂಗಳೂರು ಬಂದ್​ ಆಚರಣೆ ಮಾಡಲು ಎಲ್ಲಾ ರೀತಿಯ ಬೆಂಬಲ ನೀಡಲಿದ್ದೇವೆ ಎಂದು ಘೋಷಣೆ ಮಾಡಿತ್ತು. ಆದರೆ ಪ್ರವೀಣ್​ ಶೆಟ್ಟಿ ಸೇರಿದಂತೆ ಹಲವಾರು ಸಂಘಟನೆಯ ನಾಯಕರು ಶುಕ್ರವಾರ ಕರ್ನಾಟಕ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದ ಬಳಿಕ ಮಂಗಳವಾರದ ಬಂದ್​ಗೆ ಬೆಂಬಲ ನೀಡದೆ ಇರಲು ನಿರ್ಧಾರ ಮಾಡಲಾಗಿದೆ. ಇನ್ನು ಓಲಾ, ಊಬರ್​ ಸಂಘಟನೆ ಕೂಡ ಕರ್ನಾಟಕ ಬಂದ್​ಗೆ ಬಂಬಲ ನೀಡಲು ನಿರ್ಧಾರ ಮಾಡಿದ್ದು, ಬೆಂಗಳೂರು ಬಂದ್​ನಿಂದ ಹಿಂದೆ ಸರಿಯುವ ನಿರ್ಧಾರ ಮಾಡಲಾಗಿದೆ. ಬೀದಿ ವ್ಯಾಪಾರಿಗಳ ಸಂಘಟನೆಯೂ ಕೂಡ ಕರ್ನಾಟಕ ಬಂದ್​ಗೆ ಬೆಂಬಲ ಎಂದಿದೆ. ಇದೀಗ ಕನ್ನಡ ಸಂಘಟನೆಗಳ ಉದ್ದೇಶ ಬೆಂಗಳೂರು ಬಂದ್​ ಹಾಳು ಮಾಡುವುದಾಗಿತ್ತಾ..? ಅನ್ನೋ ಅನುಮಾನ ಬರುತ್ತಿದೆ.

ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ.. ಬಂದ್​ಗಿಲ್ಲ ಅನುಮತಿ..

ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಅದರಂತೆ ಬೆಂಗಳೂರು ಬಂದ್​ ನಡೆಯುತ್ತದೆ. ಒಂದೆರಡು ಕಡೆ ಕಲ್ಲೆಸೆತ ಪ್ರಕರಣಗಳು ನಡೆದರೆ ಬಹುತೇಕ ಸಂಚಾರ ಸ್ತಬ್ಧ ಆಗಲಿದೆ. ಇದೇ ಕಾರಣಕ್ಕಾಗಿ ಬೆಂಗಳೂರು ಜಿಲ್ಲಾಧಿಕಾರಿ ಎಲ್ಲಾ ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ. ಇನ್ನೂ ಮೈಸೂರು ವಿವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯ ಕೂಡ ಪರೀಕ್ಷೆ ಮುಂದೂಡಿದೆ. ಇನ್ನು ಬೆಂಗಳೂರು ಪೊಲೀಸರು ಬಂದ್​ಗೆ ಸಕಲ ತಯಾರಿ ಮಾಡಿಕೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್​ ಮಾಡಿಕೊಂಡಿದ್ದು, ನಗರದಾದ್ಯಂತ 144 ಸೆಕ್ಷನ್​ ಜಾರಿ ಮಾಡಿದ್ದಾರೆ. ಗುಂಪು ಸೇರುವುದು ಸೇರಿದಂತೆ ಮೆರವಣಿಗೆಯನ್ನು ನಿಷೇಧಿಸಿದ್ದಾರೆ. ಆದರೂ ಹೋರಾಟ ನಡೆಯುತ್ತೆ, ಸರ್ಕಾರ ರೈತರ ಮೇಲೆ ಕೇಸ್​ ಹಾಕಲಿದೆ. ನಾಯಕರ ಪ್ರತಿಷ್ಠೆ ಬೆಂಗಳೂರು ಬಂದ್​ನ ಗೊಂದಲಕ್ಕೆ ಕಾರಣವಾಗಿದ್ದು, ಮುಂದಾದರೂ ರಾಜ್ಯದ ವಿಚಾರ ಬಂದಾಗ ಒಟ್ಟಾಗುವುದನ್ನು ಕಲಿಯಬೇಕಿದೆ.

Previous Post

ಕೇರಳದಲ್ಲಿ ಯೋಧನ ಅಪಹರಿಸಿ ಹಲ್ಲೆ: ಪಿಎಫ್‌ಐ ಕಾರ್ಯಕರ್ತರ ಕೈವಾಡ ಶಂಕೆ

Next Post

ಲೋಕಸಭೆಗೆ ಅಸ್ತ್ರ ಆಯಿತೇ ಕಾವೇರಿದ ಹೋರಾಟ..? ಕನ್ನಡಿಗರಿಗೆ ಲಾಭ ತರುತ್ತಾ..?

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಲೋಕಸಭೆಗೆ ಅಸ್ತ್ರ ಆಯಿತೇ ಕಾವೇರಿದ ಹೋರಾಟ..? ಕನ್ನಡಿಗರಿಗೆ ಲಾಭ ತರುತ್ತಾ..?

ಲೋಕಸಭೆಗೆ ಅಸ್ತ್ರ ಆಯಿತೇ ಕಾವೇರಿದ ಹೋರಾಟ..? ಕನ್ನಡಿಗರಿಗೆ ಲಾಭ ತರುತ್ತಾ..?

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada