• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಕಾರ್ಯಕರ್ತರಿಗೆ ಲಸಿಕೆ ಶಿಬಿರ: ಶಾಸಕ ರಘು ವಿರುದ್ಧ ಗಂಭೀರ ಆರೋಪ

Any Mind by Any Mind
June 1, 2021
in ರಾಜಕೀಯ
0
ಬಿಜೆಪಿ ಕಾರ್ಯಕರ್ತರಿಗೆ ಲಸಿಕೆ ಶಿಬಿರ: ಶಾಸಕ ರಘು ವಿರುದ್ಧ ಗಂಭೀರ ಆರೋಪ
Share on WhatsAppShare on FacebookShare on Telegram

ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಡ್‌ ಬ್ಲಾಕಿಂಗ್‌, ವ್ಯಾಕ್ಸಿನ್‌ ಬ್ಲಾಕಿಂಗ್‌ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂಬ ಆರೋಪಗಳು ಕೇಳಿ ಬಂದಿರುವ ಹೊತ್ತಿನಲ್ಲೇ ಮತ್ತೋರ್ವ ಬಿಜೆಪಿ ಶಾಸಕ ಸರ್ಕಾರದ ವತಿಯಿಂದ ಉಚಿತವಾಗಿ ವಿತರಿಸಬೇಕಾಗಿದ್ದ ಕೋವಿಡ್‌ ನಿರೋಧಕ ಲಸಿಕೆಗಳಿಗೆ ತನ್ನ ಚಿತ್ರ ಲಗತ್ತಿಸಿ, ಕಾರ್ಯಕರ್ತರಿಗೆ ವಿತರಿಸಿರುವುದಾಗಿ ವರದಿಯಾಗಿದೆ.

ADVERTISEMENT

ಸಿವಿ ರಾಮನ್‌ ನಗರ್‌ ಕ್ಷೇತ್ರದ ಶಾಸಕ ಎಸ್‌ ರಘು ಅವರ ನಿರ್ದೇಶನದ ಮೇರೆಗೆ ಮೇ 31ರಂದು ಭುವನೇಶ್ವರಿ ನಗರ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ವ್ಯಾಕ್ಸಿನೇಷನ್‌ ಪ್ರಕ್ರಿಯೆ ರದ್ದುಗೊಳಿಸಲಾಗಿದ್ದು, ಶಾಸಕ ರಘು ವತಿಯಿಂದ ಉಚಿತ ವ್ಯಾಕ್ಸಿನೇಷನ್‌ ಶಿಬಿರ ಎಂಬ ಬ್ಯಾನರ್‌ನೊಂದಿಗೆ ಸ್ಥಳೀಯ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ಲಸಿಕೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸ್ಥಳೀಯ ಜನರು ಹೇಳಿದ್ದಾರೆ. ಅದಾಗ್ಯೂ, ಲಸಿಕೆಗಳು ಸ್ಥಳೀಯರಿಗೆ ಲಭ್ಯವಾಗದೆ, ಶಾಸಕರ ಕುಟುಂಬಸ್ಥರಿಗೂ, ಅವರ ಬೆಂಬಲಿಗರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಾಕಕಿಸಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಬಿಜೆಪಿಯ ಇನ್ನೋರ್ವ ಶಾಸಕ ರವಿ ಸುಬ್ರಹ್ಮಣ್ಯ ಅವರು ಇಂತದ್ದೇ ಹಗರಣದಲ್ಲಿ ಭಾಗಿಯಾದ ಕುರಿತು ಆರೋಪಗಳು ಎದ್ದ ಬೆನ್ನಲ್ಲೇ ಶಾಸಕ ರಘು ಅವರ ಅಧಿಕಾರ ದುರ್ಬಳಕೆಯೂ ಬೆಳಕಿಗೆ ಬಂದಿದ್ದು, ಬಿಜೆಪಿಯು ಕರೋನಾ ಕಾಲದಲ್ಲೂ ತಮ್ಮ ಪ್ರಚಾರಕ್ಕಾಗಿ ಯಾವ ಹೇಸಿಗೆಗೂ ಇಳಿಯುತ್ತದೆ ಎಂಬ ಆರೋಪವನ್ನು ಸಾಬೀತು ಪಡಿಸಿದೆ.

ವ್ಯಾಕ್ಸಿನ್ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ದ ದೂರು ದಾಖಲು

ಈ ಕುರಿತು ನ್ಯೂಸ್‌ ಮಿನಿಟ್‌ ಜೊತೆ ಪ್ರತಿಕ್ರಿಯಿಸಿದ ಸ್ಥಳೀಯ ನಿವಾಸಿ ಮಂಜು, ತನ್ನ ವೃದ್ಧ ಪೋಷಕರಿಗೆ ಲಸಿಕೆ ಹಾಕಿಸಲು ನೋಂದಣಿ ಮಾಡಿದ್ದೆ. ಬೆಳಗ್ಗೆ 7 ರಿಂದ ಆಸ್ಪತ್ರೆಯಲ್ಲಿ ಕಾದಿದ್ದೇವೆ. 9:45 ರ ಹೊತ್ತಿಗೆ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಕಲ್ಯಾಣ ಮಂಟಪಕ್ಕೆ ತೆರಳುವಂತೆ ಸೂಚಿಸಲಾಯಿತು. ಮಧುಮೇಹದ ರೋಗಿಗಳಾಗಿರುವ ನನ್ನ ಪೋಷಕರನ್ನು ಇನ್ನಷ್ಟು ಕಾಯಿಸುವುದು ನನಗೆ ಇಷ್ಟವಿರಲಿಲ್ಲ, ಅಲ್ಲದೆ ಅಲ್ಲಿ ಸಾಮಾಜಿಕ ಅಂತರವನ್ನೂ ಕಾಪಾಡಿರಲಿಲ್ಲ. ನನ್ನ ಪೋಷಕರನ್ನು ನಾನು ಇದುವರೆಗೆ ಎಲ್ಲಿಯೂ ಹೊರಕ್ಕೆ ಬಿಟ್ಟಿರಲಿಲ್ಲ. ಇಷ್ಟೊಂದು ಅಸುರಕ್ಷಿತ ಪ್ರದೇಶದಲ್ಲಿ ಅವರನ್ನು ಇರಿಸುವುದು ನನಗೆ ಸೂಕ್ತವೆನಿಸಿಲ್ಲ ಎಂದು ತಮಗೆದುರಾದ ಅನಾನುಕೂಲವನ್ನು ತೋಡಿಕೊಂಡಿದ್ದಾರೆ.

ಜನರು ಇಷ್ಟೆಲ್ಲಾ ಕಷ್ಟದಲ್ಲಿರುವಾಗಲೂ ಸರ್ಕಾರ ಏನೋ ಮಾಡುತ್ತಿದೆ. ಸಚಿವರು ಏನೋ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ತಮ್ಮ ಕುರ್ಚಿ ಉಳಿಸಲು ಹರಸಾಹಸ ಪಡುತ್ತಿದ್ದಾರೆ. ಮುಖ್ಯಮಂತ್ರಿಯನ್ನು ಇಳಿಸಲು ಇತರೆ ನಾಯಕರು ಶ್ರಮಿಸುತ್ತಿದ್ದಾರೆ. ರವಿ ಸುಬ್ರಹ್ಮಣ್ಯ, ಸತೀಶ್‌ ರೆಡ್ಡಿ, ರಘು ಮೊದಲಾದವರು ಕರೋನಾದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಾಗರಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Previous Post

ಅನಾರೋಗ್ಯದಿಂದ ಸಿದ್ದರಾಮಯ್ಯ ಮಣಿಪಾಲ್‌ ಆಸ್ಪತ್ರೆಗೆ ದಾಖಲು

Next Post

ಬ್ಲ್ಯಾಕ್ ಫಂಗಸ್: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿಯಿಂದ ತ್ರಿವಳಿ ಪ್ರಶ್ನೆ

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಬ್ಲ್ಯಾಕ್ ಫಂಗಸ್: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿಯಿಂದ ತ್ರಿವಳಿ ಪ್ರಶ್ನೆ

ಬ್ಲ್ಯಾಕ್ ಫಂಗಸ್: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿಯಿಂದ ತ್ರಿವಳಿ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada