ಭಾರೀ ಮಳೆಯಿಂದ ಬೆಂಗಳೂರು- ಮೈಸೂರು ಹೆದ್ದಾರಿ ಬಹುತೇಕ ಜಲಾವೃತಗೊಂಡಿದ್ದು, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.
ಬೆಂಗಳೂರು, ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರುರಿಂದ ಬಿಡದಿ ವರೆಗೂ ವಾಹನ ಸಾಲುಗಟ್ಟಿ ನಿಂತಿವೆ.
ರಾಮನಗರದಲ್ಲಿ 2 ದಶಕದಲ್ಲೇ ಅತೀ ಹೆಚ್ಚು ಮಳೆಯಾಗಿದ್ದರಿಂದ ಕಣ್ವ ಜಲಾಶಯ ತುಂಬಿ ಹರಿಯುತ್ತಿದ್ದರೆ, ರಾಮನಗರದಲ್ಲಿ ಕೆರೆ ಜಲಪಾತ ಮಾದರಿಯಲ್ಲಿ ಧುಮ್ಮಿಕ್ಕಿ ಹರಿಯುತ್ತಿದೆ. ಇದರಿಂದ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ರಾತ್ರಿಯೀಡಿ ಸುರಿದ ಮಳೆಯಿಂದ ಚನ್ನಪಟ್ಟಣದಲ್ಲಿ ಕೂಡ ರಸ್ತೆಗಳು ಜಲಾವೃತಗೊಂಡಿದ್ದು, ರೈಲ್ವೆ ನಿಲ್ದಾಣದಲ್ಲಿ ನೀರು ತುಂಬಿಕೊಂಡಿದ್ದು, ರೈಲ್ವೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ.