• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್ ಸಂಕಷ್ಟದ ನಡುವೆ ಜಾಹಿರಾತಿಗಾಗಿ ಬರೋಬ್ಬರಿ 160 ಕೋಟಿ ವ್ಯಯಿಸಿದ ಯೋಗಿ ಸರ್ಕಾರ

Any Mind by Any Mind
July 22, 2021
in ದೇಶ, ರಾಜಕೀಯ
0
ಕೋವಿಡ್ ಸಂಕಷ್ಟದ ನಡುವೆ ಜಾಹಿರಾತಿಗಾಗಿ ಬರೋಬ್ಬರಿ 160 ಕೋಟಿ ವ್ಯಯಿಸಿದ ಯೋಗಿ ಸರ್ಕಾರ
Share on WhatsAppShare on FacebookShare on Telegram

ದೇಶದೆಲ್ಲೆಡೆ ಕೋವಿಡ್ ಕಾರಣದಿಂದ ಜನರು ಸಾಯುತ್ತಾ ಇದ್ದರೂ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ತನ್ನ ವರ್ಚನ್ನು ವೃದ್ದಿಸುವತ್ತ ಗಮನ ಹರಿಸಿತ್ತು. ಬರೋಬ್ಬರಿ 160.31 ಕೋಟಿ ಮೊತ್ತದ ಜಾಹಿರಾತು ನೀಡಿ, ಮುಂಬರುವ ಚುನಾವಣೆಗೆ ತಯಾರಿ ನಡೆಸುವಲ್ಲಿ ಸರ್ಕಾರ ತೊಡಗಿತ್ತು.

ADVERTISEMENT

ಉಮಾಶಂಕರ್ ದುಬೆ ಎಂಬ ಆರ್ ಟಿ ಐ ಕಾರ್ಯಕರ್ತರ ಅರ್ಜಿಗೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವು, ಈ ಅಧಿಕೃತ ಸಂಖ್ಯೆಯನ್ನು ನೀಡಿದೆ. ಏಪ್ರಿಲ್ 2020ರಿಂದ ಮಾರ್ಚ್ 2021ರ ವರೆಗೆ ಈ ಹಣವನ್ನು ವ್ಯಯಿಸಲಾಗಿದೆ.

ರಾಷ್ಟ್ರೀಯ ಸುದ್ದಿವಾಹಿಗಳಿಗೆ ರೂ. 88.68 ಕೋಟಿ ಹಾಗೂ ಪ್ರಾದೇಶಿಕ ಸುದ್ದಿವಾಹಿನಿಗಳಿಗೆ ರೂ 71.63 ಕೋಟಿ ರೂ ಮೌಲ್ಯದ ಜಾಹೀರಾತು ನೀಡಲಾಗಿದೆ. ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯ ಕುರಿತು ಅತೀ ಹೆಚ್ಚು ಹಣವನ್ನು ವ್ಯಯಿಸಲಾಗಿದೆ.

ನೆಟ್ವರ್ಕ್ 18 ಗ್ರೂಪ್ ಗೆ ಅತೀ ಹೆಚ್ಚು ಮೊತ್ತದ ಜಾಹಿರಾತನ್ನು ನೀಡಲಾಗಿದೆ. CNN News18, News18 India and News18 UP Uttarakhand ಚಾನೆಲ್ ಗಳ ಮೂಲಕ ನೆಟ್ವರ್ಕ್ 18 ಗ್ರೂಪ್ ಬರೋಬ್ಬರಿ ರೂ. 28.82 ಕೋಟಿ ಹಣ ಸಂಪಾದಿಸಿದೆ. ಇದರ ನಂತರ ಝೀ ಮೀಡಿಯಾ ಗ್ರೂಪ್ ಗೆ 23.84 ಕೋಟಿ, ಎಬಿಪಿ ಗ್ರೂಪ್ ಗೆ ರೂ. 18.19 ಕೋಟಿ ಹಾಗೂ ಇಂಡಿಯಾ ಟುಡೆ ಗ್ರೂಪ್ ಗೆ ರೂ. 10.64 ಕೋಟಿ ಮೊತ್ತದ ಜಾಹಿರಾತು ನೀಡಲಾಗಿದೆ.

ಸರ್ಕಾರ ನೀಡಿರುವ ಸಂಖ್ಯೆಗಳನ್ನು ನೋಡಿ ಚಕಿತರಾದ ಉಮಾಶಂಕರ್ ದುಬೆ ಅವರು, “ಇದು ಜನರ ತೆರಿಗೆಯ ಹಣ. ಈ ಹಣವನ್ನು ದುರುಪಯೋಗ ಮಾಡಬಾರದಿತ್ತು. ಅದು ಕುಡಾ ಕೋವಿಡ್ ನಂತಹ ಸಂದರ್ಭದಲ್ಲಿ ಜನರ ಸಹಾಯಕ್ಕೆ ವ್ಯಯಿಸಬೇಕಾದ ಹಣ ಇದು. ಇದನ್ನು ಜಾಹಿರಾತುಗಳಿಗಾಗಿ ವ್ಯಯಿಸಿ ಹೇಗೆ ಸ್ಪಷ್ಟನೆ ನಿಡಬಹುದು?” ಎಂದು ಪ್ರಶ್ನಿಸಿದ್ದಾರೆ.

ಇನ್ನು ಕೇವಲ ಮುಸ್ಲಿಂ ವಿರೋಧಿ ಹಾಗೂ ದ್ವೇಷಪೂರಿತ ಕಾರ್ಯಕ್ರಮಗಳನ್ನು ಬಿತ್ತರಿಸಲು ಹೆಸರುವಾಸಿಯಾಗಿರುವ ಸುದರ್ಶನ್ ನ್ಯೂಸ್ ಚಾನೆಲ್ ಗೆ ಕೂಡಾ 2.68 ಕೋಟಿ ಮೊತ್ತದ ಜಾಹಿರಾತು ನೀಡಲಾಗಿದೆ.

ಜಾಹಿರಾತುಗಳು ಕೇವಲ ಜಾಹಿರಾತಿನ ರೂಪದಲ್ಲಿ ಇರದೇ, ಸರ್ಕಾರದ ಪರವಾಗಿ ‘ವಾಸ್ತವಾಂಶ’ವನ್ನು ನಿರೂಪಿಸುವ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುವುದು, ಯೋಗಿ ಆದಿತ್ಯನಾಥ್ ಅವರ ಸಂದರ್ಶನದ ರೂಪದಲ್ಲಿಯೂ ಇದ್ದವು.

ಇಲ್ಲಿ ಗಮನಿಸಬೇಕಾದ ಅತೀ ಮುಖ್ಯ ವಿಚಾರವೆಂದರೆ, NDTV 24×7 ಮತ್ತು NDTV ಚಾನೆಲ್ ಗಳು ಕೋವಿಡ್ ನಿರ್ವಹಣೆ ವೈಫಲ್ಯದ ವಿರುದ್ದ ಸರಣಿ ವರದಿಗಳನ್ನು ಪ್ರಕಟಿಸಿದ ಕಾರಣಕ್ಕಾಗಿ ಅವರಿಗೆ ಬಿಡಿಗಾಸಿನ ಜಾಹಿರಾತನ್ನು ಕೂಡಾ ನೀಡಲಾಗಿಲ್ಲ. ಕೇವಲ ಸರ್ಕಾರದ ಪರವಾಗಿ ವರದಿ ಬಿತ್ತರಿಸುತ್ತಿದ್ದ ಚಾನೆಲ್ ಗಳಿಗೆ ಮಾತ್ರ ಮಣೆ ಹಾಕಲಾಗಿದೆ ಎಂಬ ಅಪವಾದವೂ ಕೇಳಿ ಬರುತ್ತಿದೆ.

Tags: TV AdsUPA GovernmentYogi Adityanath
Previous Post

ಪೇಗಾಸಸ್ ಲೀಕ್ಸ್: ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ತನಿಖೆಯ ಒತ್ತಡ

Next Post

ಸಿಎಂ ಬಿಎಸ್‌ವೈ ರಾಜೀನಾಮೆ ಫಿಕ್ಸ್; ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ; ದೋಸ್ತಿಗಳ ರಾಜಕೀಯ ಭವಿಷ್ಯ ಅತಂತ್ರ!

Related Posts

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
0

ಇಂದು ನೆಲಮಂಗಲದ (Nelamangala) ಬಳಿಯಿರೋ ನಗರೂರಿನಲ್ಲಿ ಸಿದ್ಧಗೊಂಡಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ‌ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಭಾಗಿಯಾಗಿದ್ದಾರೆ. ನಗರೂರಿನಲ್ಲಿ ಆರಂಭಿಸಿರುವ ಬಿಜಿಎಸ್ ಎಂಸಿಎಚ್...

Read moreDetails

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೇರಪ್ರಸಾರ

June 20, 2025
Next Post
ಸಿಎಂ ಬಿಎಸ್‌ವೈ ರಾಜೀನಾಮೆ ಫಿಕ್ಸ್; ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ; ದೋಸ್ತಿಗಳ ರಾಜಕೀಯ ಭವಿಷ್ಯ ಅತಂತ್ರ!

ಸಿಎಂ ಬಿಎಸ್‌ವೈ ರಾಜೀನಾಮೆ ಫಿಕ್ಸ್; ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ; ದೋಸ್ತಿಗಳ ರಾಜಕೀಯ ಭವಿಷ್ಯ ಅತಂತ್ರ!

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada