• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಭದ್ರಾವತಿ ಉಕ್ಕು ಕಾರ್ಖಾನೆ ಮುಚ್ಚಿ ಆಸ್ತಿ ಹೊಡೆಯುವ ಹುನ್ನಾರ: ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
January 21, 2023
in ಕರ್ನಾಟಕ
0
ಭದ್ರಾವತಿ ಉಕ್ಕು ಕಾರ್ಖಾನೆ ಮುಚ್ಚಿ ಆಸ್ತಿ ಹೊಡೆಯುವ ಹುನ್ನಾರ: ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
Share on WhatsAppShare on FacebookShare on Telegram

ಶಿವಮೊಗ್ಗ: ಭದ್ರಾವತಿ ಉಕ್ಕಿನ ಕಾರ್ಖಾನೆಯ ಆಸ್ತಿ ಮೇಲೆ ರಾಜಕಾರಣಿಗಳ ಕಣ್ಣಿದೆ ಹಾಗಾಗಿ ಮುಚ್ಚುತ್ತಿದ್ದಾರೆ ಎಂದು ಕಾರ್ಖಾನೆ ಗುತ್ತಿಗೆ ನೌಕರರು ಆತಂಕ ವ್ಯಕ್ತಪಡಿಸಿದರು.

ADVERTISEMENT

ಕಾರ್ಖಾನೆ‌ ಮುಚ್ಚಲು ಬಿಡದಂತೆ ನಿರಂತರ ಹೋರಾಟ‌ ಆರಂಭಿಸಿರುವ ಗುತ್ತಿಗೆ ಕಾರ್ಮಿಕರ ಸಂಘದ ಹೋರಾಟಗಾರರು ಬಿಎಸ್ ಯಡಿಯೂರಪ್ಪ, ಸಂಸದ ಬಿವೈ ರಾಘವೇಂದ್ರ ಹಾಗೂ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಗುತ್ತಿಗೆ ಕಾರ್ಮಿಕರ ಸಂಘದ ರಾಕೇಶ್ ಮಾತನಾಡಿ, ಭದ್ರಾವತಿಯ ಈ ಪುರಾತನ ಕಾರ್ಖಾನೆಗೆ 1918ರಲ್ಲಿ ಅಡಿಪಾಯ ಹಾಕಲಾಯ್ತು. 1923ರಲ್ಲಿ ಉತ್ಪಾದನೆ ಆರಂಭವಾಯ್ತು.ಭದ್ರಾವತಿಯ ಜನರ ಒಳಿತಿಗಾಗಿ, ನಿರುದ್ಯೋಗ ಸಮಸ್ಯೆ ನಿವಾರಣೆ ಉದ್ದೇಶದಿಂದ ಅಂದು ದಿವಾನರಾಗಿದ್ದ ವಿಶ್ವೇಶ್ವರಯ್ಯನವರು ಒಡೆಯರ್ ಜೊತೆ ಈ ಕಾರ್ಖಾನೆ ಸ್ಥಾಪಿಸಿದರು. ಈಗ ನಾವು ನೂರು ವರ್ಷದ ಸಂಭ್ರಮದಲ್ಲಿದ್ದೇವೆ. ಆದರೆ ನಷ್ಟದ ನೆಪವೊಡ್ಡಿ ಕಾರ್ಖಾನೆ ಮುಗಿಸಲು ಹುನ್ನಾರ ನಡೆಸಿದ್ದಾರೆ. ಕಾರ್ಖಾನೆ ಆರಂಭವಾದ ಸಂದರ್ಭದಲ್ಲಿ ಈ ಸರ್ಕಲ್ ನಲ್ಲಿ ನಿಂತ್ರೆ 45 ನಿಮಿಷ ರಸ್ತೆ ಕ್ರಾಸ್ ಮಾಡಲು ಆಗುತ್ತಿರಲಿಲ್ಲ. ಅಷ್ಟುಉದ್ಯೋಗಿಗಳು ಓಡಾಡುತ್ತಿದ್ದರು. ಇಂತಹ ವೈಭೋಗದಲ್ಲಿದ್ದ ಭದ್ರಾವತಿಯನ್ನು, ಕೇಂದ್ರ ಸುಪರ್ದಿಗೆ ತೆಗೆದುಕೊಂಡು ನಾಶ ಮಾಡುತ್ತಿದೆ. ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಉಕ್ಕು ಪ್ರಾಧಿಕಾರಕ್ಕೆ ಇದನ್ನ ಪುನಶ್ಚೇತನಕ್ಕಾಗಿ ನೀಡಲಾಗಿತ್ತು. ಆದರೆ ಈತನಕ ಯಾವುದೇ ಬಂಡವಾಳ ಹಾಕಲಿಲ್ಲ. ಉತ್ತರ ಭಾರತದವರು ದಕ್ಷಿಣ ಭಾರತದವರಿಗೆ ಮಲತಾಯಿ ಧೋರಣೆ ಮಾಡಿಕೊಂಡು ಬಂದಿದ್ದಾರೆ. ಒಂದು ರೂಪಾಯಿ ಬಂಡವಾಳ ಹಾಕದೆ ಈ ಕಾರ್ಖಾನೆ ನಷ್ಟ ಅನುಭವಿಸಿದೆ ಎಂದು ಹೇಳುವುದು ಕಾರ್ಖಾನೆಯನ್ನು ವ್ಯವಸ್ಥಿತವಾಗಿ ಮುಚ್ಚುವ ಹುನ್ನಾರ. ಕಾರ್ಖಾನೆ ಮುಚ್ಚುವುದರ ಹಿಂದೆ ಇದಕ್ಕೆ ಸಂಬಂಧಿಸಿದ ಆಸ್ತಿಯ ಮೇಲೆ ರಾಜಕಾರಣಗಳ ಕಣ್ಣಿದೆ. ಆದರೆ ಒಂದಂತೂ ನಿಜ ಈ ಕಾರ್ಖಾನೆ ಮುಚ್ಚುವ ಹಂತಕ್ಕೆ ತೆಗೆದುಕೊಂಡು ಹೋದರೆ ಉಗ್ರ ಹೋರಾಟ ಮಾಡುತ್ತೇವೆ. ಭದ್ರಾವತಿಯ ಯಾವುದೇ ಚುನಾವಣೆ ಇರಬಹುದು ಸ್ಥಳೀಯ ಚುನಾವಣೆ ಆಗಿರಬಹುದು, ಲೋಕಸಭಾ ಚುನಾವಣೆ ಆಗಿರಬಹುದು ಮುಂಬರುವ ವಿಧಾನಸಭಾ ಚುನಾವಣೆಯೂ ಆಗಿರಬಹುದು ಎಲ್ಲಾ ಚುನಾವಣೆಗಳನ್ನ ನಾವು ಬಹಿಷ್ಕರಿಸುತ್ತೇವೆ. ಈ ಕಾರ್ಖಾನೆಯನ್ನು ಮುಚ್ಚಿ ಸುತ್ತಲ ಜಮೀನು ವಶಪಡಿಸಿಕೊಳ್ಳಲು, ಹುನ್ನಾರ ನಡೆದಿದೆ.‌ ಇದು ಲಾಭದಲ್ಲಿದ್ದರೂ, ಇನ್ನಷ್ಟು ಬಂಡವಾಳ ಹಾಕಿದರೆ ಇನ್ನಷ್ಟು ಲಾಭದ ಹಾದಿಯಲ್ಲಿ ಹೋಗುತ್ತೆ. ಆದರೆ ಅಂತ ಇಚ್ಛಾಶಕ್ತಿ ಆಳುವ ವರ್ಗಕ್ಕೆ ಇಲ್ಲ. ನಮ್ಮ ಗುತ್ತಿಗೆದಾರರ ಸಂಘದಿಂದ ಈ ಕಾರ್ಖಾನೆಯನ್ನು ಲಾಭದ ಮಾರ್ಗದಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ರಾಜಕಾರಣಿಗಳಿಗೆ ಈ ಕಾರ್ಖಾನೆಯ ನೆಲದ ಮೇಲೆ ಕಣ್ಣು ಇದೆ. ಕಾರ್ಖಾನೆ ಮೇಲೆ ಬಂಡವಾಳ ಹಾಕಿ ನಷ್ಟದಲ್ಲಿದ್ದರೆ ಬೇಕಾದರೆ ಮುಚ್ಚಲಿ ಆದರೆ ಒಂದೇ ರೂಪಾಯಿ ಬಂಡವಾಳ ಹಾಕದೆ ಲಾಭದಲ್ಲಿರುವ ಕಾರ್ಖಾನೆ ಹೇಗೆ ಮುಚ್ಚುತ್ತಾರೆ..? ಈಗಲೂ ಪುನಶ್ಚೇನಗೊಳಿಸಿ ಲಾಭ ತೆಗೆಯಬಹುದು. ಇಲ್ಲವಾದರೆ ಭದ್ರಾವತಿ ಸ್ಮಶಾನ ಆಗುತ್ತೆ‌. ನಮ್ಮ ಹೆಣವನ್ನೇ ಇಲ್ಲಿ ಹೂಳೋದು.‌ ಇವೆಲ್ಲದಕ್ಕೂ ರಾಜಕಾರಣಿಗಳೇ ಕಾರಣರಾಗುತ್ತಾರೆ ಎಂಪಿಎಂ ಕಾರ್ಖಾನೆ ಮುಚ್ಚಿದಾಗ್ಲೂ ಕೂಡ ಯಾರು ಸರಿಯಾಗಿ ಹೋರಾಟ ಮಾಡ್ಲಿಲ್ಲ. ಆದರೆ ಅದು ಇಲ್ಲಿ ಮರುಕಳಿಸಬಾರದು. ಆದರೆ ರಾಜಕಾರಣಿಗಳು ಹಿತಾಸಕ್ತಿ ತೋರಿಸಬೇಕು ಈ ಕಾರ್ಖಾನೆ ಪುನಃ ಚೆನ್ನಾಗಿ ನಡೆಯಬೇಕು. ಆದರೆ ರಾಜಕಾರಣಿಗಳು ಆಸಕ್ತಿ ತೋರಿಸಬೇಕು ಚುನಾವಣೆ ಬಂದಾಗ ಮಾತ್ರ ಕಾರ್ಖಾನೆಗಳು ನೆನಪಾಗುತ್ತವೆ ಎಂದರು. ಸದ್ಯ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಮಾತ್ರ ಕ್ರಮಕ್ಕೆ ಮುಂದಾಗಿದೆ. ಆದರೆ ಇಲ್ಲಿನ ಸಂಸದ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಕಾರ್ಖಾನೆಯನ್ನು ಪಡೆಯಲು ಕ್ರಮವಹಿಸಬೇಕು ಎಂದು ರಾಕೇಶ್ ಆಕ್ರೋಶ ವ್ಯಕ್ತಪಡಿಸಿದರು.

Previous Post

ನಾನು ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ: ಸಿದ್ದರಾಮಯ್ಯ

Next Post

| APPU | ಬಳ್ಳಾರಿಯಲ್ಲಿ 25 ಅಡಿ ಅಪ್ಪುವಿನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಅಭಿಮಾನಿಗಳು | ballari |

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
| APPU | ಬಳ್ಳಾರಿಯಲ್ಲಿ 25 ಅಡಿ ಅಪ್ಪುವಿನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಅಭಿಮಾನಿಗಳು | ballari |

| APPU | ಬಳ್ಳಾರಿಯಲ್ಲಿ 25 ಅಡಿ ಅಪ್ಪುವಿನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಅಭಿಮಾನಿಗಳು | ballari |

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada