10ನೇ ತರಗತಿ ಪ್ರಥಮ ಭಾಷೆಯ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲ ಎಂಬುದಾಗಿ ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟ ಪಡಿಸಿದೆ.
ಹೌದು , ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟು, ಹೆಡಗೆವಾರ್ ಸೇರಿಸಲಾಗಿದೆ ಎಂಬುದು ಸತ್ಯಕ್ಕೆ ದೂರವಾದಂತ ಮಾತು ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟೀಕರಣ ಬಿಡುಗಡೆ ಮಾಡಿದೆ.
ಈ ಬಗ್ಗೆ ಸ್ಪಷ್ಟೀಕರಣ ಬಿಡುಗಡೆ ಮಾಡಿರುವಂತ ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು, ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಿ, ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷೆಯಲ್ಲಿ ಸಮಿತಿಯನ್ನು ನೇಮಿಸಲಾಗಿತ್ತು. ಈ ಸಮಿತಿಯು 6 ರಿಂದ 10ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ 1 ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿರುತ್ತಾರೆ.
ಪ್ರಸ್ತುತ ಸುದ್ದಿ ಮಾಧ್ಯಮಗಳಲ್ಲಿ 10ನೇ ತರಗತಿ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದಲ್ಲಿದ್ದ ಭಗತ್ ಸಿಂಗ್ ಗದ್ಯವನ್ನು ಕೈಬಿಟ್ಟು, ಹೆಡಗೆವಾರ್ ಬಗ್ಗೆ ಗದ್ಯವನ್ನು ಸೇರಿಸಲಾಗಿದೆ ಎಂದು ಪ್ರಸಾರವಾಗಿರೋದು ಕಂಡು ಬಂದಿರುತ್ತದೆ. ವಾಸ್ತವವಾಗಿ 10ನೇ ತರಗತಿ ಪ್ರಥಮ ಭಾಷೆಯ ಕನ್ನಡ ಪಠ್ಯಪುಸ್ತಕದಿಂದ ಭಗತ್ ಸಿಂಗ್ ಗದ್ಯ ಪಾಠವನ್ನು ಕೈಬಿಟ್ಟರುವುದಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕವು ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.