ಕಾಂಗ್ರೆಸ್ ತೊರೆದ ನಂತರ ಗುಲಾಂ ನಬಿ ಆಜಾದ್ ಅವರು ಸೆಪ್ಟೆಂಬರ್ 4 ರಂದು ಜಮ್ಮುವಿನಲ್ಲಿ ರ್ಯಾಲಿಯನ್ನು ನಿಗದಿಪಡಿಸಿದ್ದಾರೆ. ಅದೇ ದಿನ ರಾಹುಲ್ ಗಾಂಧಿ ರಾಷ್ಟ್ರ ರಾಜಧಾನಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಜಮ್ಮು – ಕಾಶ್ಮೀರದಲ್ಲಿ ಆಜಾದ್ ಅವರ ಕಾರ್ಯಕ್ರಮದ ದಿನದಂದೇ ರಾಹುಲ್ ಗಾಂಧಿಯವರ ರ್ಯಾಲಿ ನಡೆಯುವರಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಕಾರ್ಯಕ್ರಮವೇ ನಡೆಯಲಿದೆ ಎನ್ನಲಾಗುತ್ತಿದೆ.
ವಿಧಾನಸಭೆ ಚುನಾವಣೆ ಘೋಷಣೆಯಾಗಲಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರದಲ್ಲೇ ತಮ್ಮದೇ ಆದ ಪಕ್ಷ ಸ್ಥಾಪಿಸುವುದಾಗಿ ಆಜಾದ್ ಅವರು ಈಗಾಗಲೇ ಹೇಳಿದ್ದಾರೆ.
ಆಜಾದ್ ಅವರ ಭಾನುವಾರದ ರ್ಯಾಲಿಗೂ ಮುಂಚಿತವಾಗಿ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ನಲ್ಲಿ 50ಕ್ಕೂ ಹೆಚ್ಚು ಮುಖಂಡರು ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಅಘಾತ ನೀಡಿದ್ದಾರೆ. ಕಾಂಗ್ರೆಸ್ ತೊರೆದ ಆಜಾದ್ ಅವರು ಆರೋಪಗಳ ಸುರಿಮಳೆ ಗೈದುದ್ದರಿಂದ ಮುಂಬರುವ ದಿನಗಳಲ್ಲಿ ಅವರು ರಾಹುಲ್ ಗಾಂಧಿಯ ಮೇಲಿನ ದಾಳಿಯನ್ನು ಹೆಚ್ಚಿಸಲಿದ್ದಾರೆ ಎಂದು ಸೂಚಿಸುತ್ತದೆ.