ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರ ಬೆಳಗ್ಗೆ 9.30 ರಿಂದ 10 ಗಂಟೆಯ ವರೆಗೆ ಬೀದರ್ನಿಂದ ಚಾಮರಾಜನಗರದ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸುವ ಅಭಿಯಾನವನ್ನು ಸರ್ಕಾರ ಹಮ್ಮಿಕೊಂಡಿದೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಮತ್ತು ಅದನ್ನು ಹೆಚ್ಚು ಉತ್ತೇಜಿಸುವ ನಮ್ಮ ಸರ್ಕಾರದ ಬದ್ಧತೆಗೆ ಅನುಸಾರವಾಗಿ ಈ ಮಾನವ ಸರಪಳಿಯನ್ನು ಆಯೋಜಿಸಲಾಗುತ್ತಿದ್ದು, ಒಟ್ಟು 31 ಜಿಲ್ಲೆಗಳನ್ನು ಒಳಗೊಳ್ಳಲಿದೆ.
ಸುಮಾರು 2,500 ಕಿಲೋಮೀಟರ್ ಉದ್ದದ ಮಾನವ ಸರಪಳಿ ಇದಾಗಿರಲಿದೆ.ಸುಮಾರು 25 ಲಕ್ಷಕ್ಕೂ ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಪ್ರತಿ ಕಿಲೋಮೀಟರ್ ಗೆ 1,000 ಜನರು ಇರಲಿದ್ದಾರೆ. ಮಾನವ ಸರಪಳಿಯ ಜೊತೆಗೆ ರಾಜ್ಯಾದ್ಯಂತ ಹತ್ತು ಲಕ್ಷ ಸಸಿಗಳನ್ನೂ ನೆಡುವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.