• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಂದಿಗ್ರಾಮ: ಮತ ಮರು ಎಣಿಕೆಯ ಬೇಡಿಕೆಯನ್ನು ನಿರಾಕರಿಸಿದ ಚುನಾವಣಾ ಆಯೋಗ- TMCಗೆ ಹಿನ್ನಡೆ

Any Mind by Any Mind
May 3, 2021
in ದೇಶ
0
ನಂದಿಗ್ರಾಮ: ಮತ ಮರು ಎಣಿಕೆಯ  ಬೇಡಿಕೆಯನ್ನು ನಿರಾಕರಿಸಿದ ಚುನಾವಣಾ ಆಯೋಗ- TMCಗೆ ಹಿನ್ನಡೆ
Share on WhatsAppShare on FacebookShare on Telegram

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾದ ನಂದಿಗ್ರಾಮದಲ್ಲಿ ಮತ ಮರು ಎಣಿಕೆ ನಡೆಸಬೇಕು ಎಂಬ ಟಿಎಂಸಿಯ ಬೇಡಿಕೆಯನ್ನು ಭಾರತೀಯ ಚುನಾವಣಾ ಆಯೋಗವು ನಿರಾಕರಿಸಿದೆ.

ADVERTISEMENT

ಟಿಎಂಸಿ ಮಾಜಿ ನಾಯಕ, ಬಿಜೆಪಿ ಅಭ್ಯರ್ಥಿ ಅಧಿಕಾರಿ ಸುವೆಂದು ನಂದಿಗ್ರಾಮದಲ್ಲಿ ಮಮತಾ ವಿರುದ್ಧ ಕೇವಲ 1,756 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಟಿಎಂಸಿ ಭಾರೀ ಬಹುಮತ ಸಾಧಿಸಿದ್ದರೂ, ಪಕ್ಷದ ಮುಖ್ಯಸ್ಥೆ ಮಮತಾ ಅವರೇ ಚುನಾವಣೆಯಲ್ಲಿ ಸೋತಿದ್ದು ಟಿಎಂಸಿಗೆ ಭಾರಿ ಹಿನ್ನಡೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಟಿಎಂಸಿ ನಾಯಕರಾದ ರಾಜ್ಯ ಸಭಾ ಸದಸ್ಯ ಡೆರೆಕ್ ಒಬ್ರಿಯಾನ ನೇತೃತ್ವದ ನಿಯೋಗವೊಂದು ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿ ಮಾಡಿ ನಂದಿಗ್ರಾಮದಲ್ಲಿ ಮರು ಮತ ಎಣಿಕೆಗೆ ಮನವಿ ಸಲ್ಲಿಸಿತ್ತು.

ನಂದಿಗ್ರಾಮದ ಮತ ಎಣಿಕೆ ವೇಳೆ ಅಕ್ರಮ ನಡೆದಿದೆ. ಹಾಗಾಗಿ ಆ ಕ್ಷೇತ್ರದ ಮತಗಳನ್ನು ಮರು ಎಣಿಕೆ ಮಾಡಬೇಕೆಂದು ನಿಯೋಗವು ಚುನಾವಣಾ ಆಯೋಗಕ್ಕೆ ಹೇಳಿತ್ತು.
ನಂದಿಗ್ರಾಮದಲ್ಲಿ ಮಮತಾ ಅವರನ್ನು ಆರಂಭದಲ್ಲಿ 1,200 ಮತಗಳಿಂದ ವಿಜೇತರೆಂದು ಘೋಷಿಸಲಾಗಿತ್ತು ಆದರೆ ಕೆಲವು ನಿಮಿಷಗಳ ನಂತರ ಸುವೇಂದು ನಂದಿಗ್ರಾಮದಲ್ಲಿ 1,756 ಮತಗಳಿಂದ ಜಯಗಳಿಸಿದ್ದಾರೆ ಎಂದು ಘೋಷಿಸಲಾಯಿತು. ಇದು ಸಾಕಷ್ಟು ಗೊಂದಲಗಳಿಗೆ ಕಾರಣವಾಗಿತ್ತು. ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಂತಾ ಬ್ಯಾನರ್ಜಿ ಫಲಿತಾಂಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆಯೆಂದು ಅವರೂ ಶಂಕೆ ವ್ಯಕ್ತಪಡಿಸಿದ್ದರು.

ದೊಡ್ಡ ವಿಜಯಕ್ಕಾಗಿ ನಂದಿಗ್ರಾಮವನ್ನು ತ್ಯಾಗ ಮಾಡಬೇಕಾಗಿ ಬಂತು. ನಾವು ಇಡೀ ರಾಜ್ಯವನ್ನೇ ಗೆದ್ದಿದ್ದೇವೆ. ನಂದಿಗ್ರಾಮದ ಮತದಾರರ ತೀರ್ಪನ್ನು ನಾವು ಗೌರವಿಸುತ್ತೇವೆ. ಮತ ಎಣಿಕೆ ವೇಳೆ ಅಕ್ರಮ ನಡೆದಿರುವುದಾಗಿ ಆರೋಪ ಕೇಳಿ ಬಂದಿರುವುದರಿಂದ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮಮತಾ ಬ್ಯಾನರ್ಜಿಯವರು ತಿಳಿಸಿದ್ದರು.

ಈ ನಡುವೆ, ನಂದಿಗ್ರಾಮದ ಮತದಾರರಿಗೆ ಧನ್ಯವಾದ ತಿಳಿಸಿದ ಅಧಿಕಾರಿ ಸುವೆಂದು, ನಂದಿಗ್ರಾಮದ ಮಹಾನ್ ಜನರಿಗೆ ಅವರ ಪ್ರೀತಿ, ವಿಶ್ವಾಸ, ಆಶೀರ್ವಾದ ಮತ್ತು ಬೆಂಬಲಕ್ಕಾಗಿ ಮತ್ತು ನನ್ನನ್ನು ಅವರ ಪ್ರತಿನಿಧಿಯಾಗಿ ಮತ್ತು ನಂದಿಗ್ರಾಮದ ಶಾಸಕರಾಗಿ ಆಯ್ಕೆ ಮಾಡಿದ್ದಕ್ಕಾಗಿ ನನ್ನ ಪ್ರಾಮಾಣಿಕ ಧನ್ಯವಾದಗಳು. ಅವರಿಗೆ ಸೇವೆ ಸಲ್ಲಿಸುವುದು ಮತ್ತು ಅವರ ಕಲ್ಯಾಣಕ್ಕಾಗಿ ಕೆಲಸ ಮಾಡುವುದು ನನ್ನ ಎಂದಿಗೂ ಮುಗಿಯದ ಬದ್ಧತೆಯಾಗಿದೆ. ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ! ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಮಮತಾ, ನಂದಿಗ್ರಾಮ ನನಗೆ ಒಂದು ವಿಷಯವೇ ಅಲ್ಲ. ನಾನು ಹಲವಾರು ಕ್ಷೇತ್ರ ಗೆದ್ದುಕೊಂಡಿದ್ದೇನೆ. ಆದರೆ ನಂದಿಗ್ರಾಮದಲ್ಲಿ ಏನೋ ತಪ್ಪು ನಡೆದಿದೆ. ಇವಿಎಂ ತಿರುಚಲ್ಪಟ್ಟಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ಸರ್ವರ್ ಡೌನ್ ಆಗಿತ್ತು. ಎಲ್ಲಾ ಕಡೆಯೂ ನಾವು ಗೆದ್ದಿದ್ದೇವೆ. ಆದರೆ, ಅಲ್ಲಿ ಮಾತ್ರ ಸೋತಿದ್ದೇವೆ. ಚುನಾವಣಾ ಆಯೋಗವು ಬಿಜೆಪಿ ವಕ್ತಾರರಂತೆ ವರ್ತಿಸಿದೆ. ಮೂರು ಗಂಟೆಗಳ ಹಿಂದೆ ಒಂದು ರೀತಿ ಹೇಳಿ, ಈಗ ಬೇರೆಯೇ ರೀತಿ ಹೇಳುತ್ತಿದೆ ಎಂದು ಹೇಳಿದ್ದಾರೆ.

Previous Post

ಭಾರತದಲ್ಲಿ ಕರೋನಾ ವೈರಸ್ ನ ಟ್ರಿಪಲ್ ಮ್ಯೂಟಂಟ್ ಪತ್ತೆ :ವಿಜ್ಞಾನಿ ವಿನೋದ್ ಸ್ಕರಿಯಾ

Next Post

ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ.? ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ.? ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ.? ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada