ಬೆಂಗಳೂರು : ರಾಜ್ಯದ ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ ಆರೋಪದಲ್ಲಿ ಸಿದ್ದರಾಮಯ್ಯ ಆಪ್ತನ ವಿರುದ್ಧ ಪ್ರಾಸಿಕ್ಯೂಷನ್ಗೆ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಕೆಯಾಗಿದೆ.

ಮಾಜಿ ಸಚಿವರ ವಿರುದ್ಧ ಕಠಿಣ ನಿರ್ಧಾರ ಮಾಡಿರುವ ಲೋಕಾಯುಕ್ತ ಪೊಲೀಸರು ದೋಷಾರೋಪಣೆಯ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯಪಾಲರ ಬಳಿ ಅನುಮತಿ ಕೋರಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದೆ.
ಇದನ್ನೂ ಓದಿ : ದೇಶಾದ್ಯಂತ ವರುಣನ ಅಬ್ಬರ : 5 ಜನರ ಬಲಿ, ಜನ ಜೀವನ ಅಸ್ತವ್ಯಸ್ತ..!
ಪ್ರಮುಖವಾಗಿ ಸದ್ಯ ಬೆಂಗಳೂರಿನ ಚಾಮರಾಜಪೇಟೆಯ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದಕ್ಕೆ ಪುರಾವೆಗಳು ಲಭ್ಯವಾಗಿವೆ ಎಂದು ಪ್ರಾಸಿಕ್ಯೂಷನ್ನ ಮನವಿಯಲ್ಲಿ ಕೋರಲಾಗಿದೆ.
ಆದರೆ ಇದೀಗ ಇಡೀ ರಾಜ್ಯ ರಾಜಕಾರಣದ ಚಿತ್ತ ಲೋಕಭವನದತ್ತ ನೆಟ್ಟಿದ್ದು, ರಾಜ್ಯಪಾಲರು ಮಾಜಿ ಸಚಿವನ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ಯಾವ ನಿಲುವು ತಾಳಲಿದ್ದಾರೆ ಎನ್ನುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.






