
ಬಿಗ್ ಬಾಸ್ ಸೀಸನ್ 11 ರ ಮೂರನೇ ಸ್ಪರ್ಧಿ ಯಾರು ಎಂಬುದು ರಿವೀಲ್ ಆಗಿದ್ದು, ಕಳೆದ ವರ್ಷ ಕೇಸ್ ಒಂದರಲ್ಲಿ ಸಿಲುಕಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಭಾಷಣಗಳ ಮೂಲಕವೇ ಹಿಂದೂ ಫೈರ್ ಬ್ರ್ಯಾಂಡ್ ಎಂದು ಗುರುತಿಸಿಕೊಂಡಿದ್ದ ಚೈತ್ರಕ್ ಕುಂದಾಪುರ ವಾಂಚನೆ ಪ್ರಕರಣದಲ್ಲಿ ಕಂಬಿ ಎಣಿಸುವಂತಾಗಿತ್ತು.

ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ ಆರೋಪ ಅವರ ಮೇಲಿದೆ.ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಅಂತಾ ಚೈತ್ರಾ ಕುಂದಾಪುರ ನಂಬಿಸಿ 7 ಕೋಟಿ ರೂಪಾಯಿ ವಸೂಲಿ ಮಾಡಿದ್ರು ಎಂದು ದೂರು ದಾಖಲಾಗಿತ್ತು.
ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಒಟ್ಟು 8 ಮಂದಿ ವಿರುದ್ಧ ದೂರು ದಾಖಲಾದ ದಿನದಿಂದಲೇ ಚೈತ್ರಾ ಕುಂದಾಪುರ ತಲೆಮರೆಸಿಕೊಂಡಿದ್ದರು ನಂತರ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಮತ್ತು ಸಂಗಡಿಗರನ್ನು ಬಂಧಿಸಿದ್ದರು.ಈ ಪ್ರಕರಣದ ನಂತರ ಚೈತ್ರ ಕುಂದಾಪುರ ಸಂಪೂರ್ಣ ತೆರೆಮರೆಗೆ ಸರಿದಿದ್ದರು. ಆ ನಂತ್ರ ಇದೀಗ ಚೈತ್ರಾ ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.