• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾನುವಾರ ಕೋವಿಡ್ ಪಾಸಿಟಿವ್, ಸೋಮವಾರ ಕೋವಿಡ್ ನೆಗೆಟಿವ್- ಇದು ಬಿಹಾರ ಸ್ಪೀಕರ್ ಕತೆ

Shivakumar A by Shivakumar A
August 9, 2022
in ದೇಶ, ರಾಜಕೀಯ
0
ಭಾನುವಾರ ಕೋವಿಡ್ ಪಾಸಿಟಿವ್, ಸೋಮವಾರ ಕೋವಿಡ್ ನೆಗೆಟಿವ್- ಇದು ಬಿಹಾರ ಸ್ಪೀಕರ್ ಕತೆ
Share on WhatsAppShare on FacebookShare on Telegram

ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಬೃಹನ್ನಾಟಕದ ವೇದಿಕೆಯಲ್ಲಿ ಬಿಜೆಪಿ ಶಾಸಕ ಮತ್ತು ಬಿಹಾರ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರ ಪಾತ್ರವೂ ಜನಮೆಚ್ಚುಗೆ ಗಳಿಸಿದೆ. ನಿತೀಶ್ ಕುಮಾರ್ ಮೈತ್ರಿಕೂಟವನ್ನು ಬದಲಾಯಿಸುವ ನಿರ್ಧಾರ ಪ್ರಕಟಿಸಿದ ಕೂಡಲೇ ವಿಜಯ್ ಕುಮಾರ್ ಅವರು ಕೋವಿಡ್’ನಿಂದ ಗುಣಮುಖರಾಗಿದ್ದಾರೆ. ಅದೂ ಕೂಡಾ ಕೇವಲ ಒಂದು ದಿನದಲ್ಲಿ. 

ADVERTISEMENT

ಇದು ಆಶ್ಚರ್ಯವೆನಿಸಿದರೂ ಸತ್ಯ. ಜನಸಾಮಾನ್ಯರಿಗೆ ಕೋವಿಡ್ ತಗುಲಿದರೆ ಒಂದು ವಾರ ಐಸೋಲೇಷನ್, ಸಾಮಾಜಿಕ ಅಂತರ, ಮಾಸ್ಕ್ ಮುಂತಾದ ಮುಂಜಾಗ್ರತಾ ನಿಯಮಗಳ ಪಟ್ಟಿಯನ್ನು ಸರ್ಕಾರ ಈಗಾಗಲೇ ನೀಡಿದೆ. ಆದರೆ, ಇವೆಲ್ಲಾ ನಿಯಮಗಳು ರಾಜಕಾರಣಿಗಳಿಗೆ ಮಾತ್ರ ಅನ್ವಯಿಸುವುದಿಲ್ಲ ಎಂಬುದನ್ನು ಬಿಹಾರದ ಘಟನೆ ಮತ್ತೊಮ್ಮೆ ಸಾಬೀತು ಮಾಡಿದೆ. 

ಆದದ್ದೇನೆಂದರೆ, ಆಗಸ್ಟ್ 7ರಂದು ಸಂಜೆ ಮೂರು ಗಂಟೆಯ ವೇಳೆಗೆ ವಿಜಯ್ ಕುಮಾರ್ ಸಿನ್ಹಾ ಅವರು ಟ್ವೀಟ್ ಮಾಡಿ, ನಾನು ಅಸ್ವಸ್ಥನಾಗಿರುವ ಕಾರಣ ಕೋವಿಡ್ ಪರೀಕ್ಷೆ ಮಾಡಿದ್ದೆ. ಅದರ ವರದಿಯ ಪ್ರಕಾರ ನನಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ನಿಯಮಗಳ ಪ್ರಕಾರ ನಾನು ಐಸೋಲೇಷನ್’ಗೆ ತೆರಳುತ್ತಿದ್ದೇನೆ. ನನ್ನ ಜೊತೆ ಯಾರೆಲ್ಲಾ ಸಂಪರ್ಕದಲ್ಲಿ ಇದ್ದೀರಿ ದಯವಿಟ್ಟು ನೀವೂ ಕೋವಿಡ್ ಪರೀಕ್ಷೆ ಮಾಡಿಸಿ ಎಂದು ಕಳಕಳಿ ವ್ಯಕ್ತಪಡಿಸಿದ್ದರು. 

तबियत अस्वस्थ होने पर मैंने अपनी कोरोना जाँच करायी थी जिसकी रिपोर्ट पोजिटिव आने पर मैं कोविड प्रोटोकॉल का पालन कर रहा हूँ।मेरे संपर्क में आये लोगों से अपील है कि वह भी अपनी जाँच करा लें। कोरोना से डरना नहीं बल्कि सजग और सतर्क रहकर कोरोना को हराना है और समाज को स्वस्थ बनाना है।

— Vijay Kumar Sinha (मोदी का परिवार) (@VijayKrSinhaBih) August 7, 2022

ಆದರೆ, ಆಗಸ್ಟ್ 8ರಂದು ಸಂಜೆ ಏಕಾಏಕಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಿರುವ ವಿಜಯ್ ಕುಮಾರ್ ಸಿನ್ಹಾ, ಕೋವಿಡ್ ನೆಗೆಟಿವ್ ವರದಿ ತರಿಸಿಕೊಂಡಿದ್ದಾರೆ. 

ಈ ಕುರಿತಾಗಿ ಮತ್ತೆ ಟ್ವೀಟ್ ಮಾಡಿರುವ ಅವರು, “ದೇವರ ಅದಮ್ಯ ಕೃಪೆಯಿಂದ ಹಾಗು ನನ್ನ ಹಿತೈಷಿಗಳ ಹಾರೈಕೆಯಿಂದ ಇವತ್ತಿನ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ನಾನು ಮತ್ತೆ ‘ಕರ್ಮಪಥ’ಕ್ಕೆ ಮರಳುತ್ತಿದ್ದೇನೆ,” ಎಂದಿದ್ದಾರೆ. 

ईश्वर की असीम कृपा और आप सभी के स्नेहाशीष से आज मेरी कोरोना जाँच रिपोर्ट निगेटिव आयी है जिससे मैं पुनः अपने कर्म पथ पर लौट रहा हूँ।कोरोना से डरना नहीं बल्कि सजग और सतर्क रहकर इसे हराना है और समाज को स्वस्थ बनाना है।

— Vijay Kumar Sinha (मोदी का परिवार) (@VijayKrSinhaBih) August 8, 2022

ಬಿಜೆಪಿಯ ಮಂಗಲ್ ಪಾಂಡೆ ಬಿಹಾರ ರಾಜ್ಯದ ಆರೋಗ್ಯ ಮಂತ್ರಿಯಾಗಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರೇ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರುತ್ತಿರುವುದು ಚರ್ಚೆಗೆ ಕಾರಣವಾಗಿದೆ. 

ಜೆಡಿಯು ಮತ್ತಿ ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳುವ ಸಂದರ್ಭದಲ್ಲಿ ವಿಜಯ್ ಕುಮಾರ್ ಸಿನ್ಹಾ ಅವರ ಪಾತ್ರ ಮಹತ್ವದ್ದಾಗಿದೆ. ಮಹಾಘಟಬಂಧನ್ ಸರ್ಕಾರ ಮತ್ತೆ ಅಸ್ಥಿತ್ವಕ್ಕೆ ಬರಬೇಕಾದರೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ, ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಅವರು ಕೋವಿಡ್ ನೆಪವೊಡ್ಡಿ ಮನೆಯಲ್ಲಿ ಕುಳಿತುಕೊಂಡರೆ, ಅವರ ಸ್ಥಾನದಲ್ಲಿ ಉಪಸಭಾಪತಿಯಾದ ಜೆಡಿಯುನ ಮಹೇಶ್ವರ್ ಹಝಾರಿ ಬರಲಿದ್ದಾರೆ. 

ಈ ಕಾರಣಕ್ಕೆ ಸ್ಪೀಕರ್ ಸ್ಥಾನವನ್ನು ಮುಂದಿಟ್ಟುಕೊಂಡು ಬಿಜೆಪಿ ತನ್ನ ತಂತ್ರಗಾರಿಕೆಯನ್ನು ಮುಂದಿವರೆಸಲು ಪ್ರಯತ್ನಿಸುತ್ತಿದೆ. ಹಾಗಾಗಿ ಕೋವಿಡ್ ಪೀಡಿತ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರನ್ನು ಏಕಾಏಕಿ ಕೋವಿಡ್ ಮುಕ್ತರನ್ನಾಗಿಸಿದೆ ಎಂಬುದಂತು ಸ್ಪಷ್ಟ. 

ಈಗಾಗಲೇ ಆರ್ ಜೆಡಿಯ 18 ಶಾಸಕರು ಸದನದಲ್ಲಿ ಅತಿರೇಕದ ವರ್ತನೆ ತೋರಿದ ಆರೋಪಕ್ಕೆ ಗುರಿಯಾಗಿದ್ದಾರೆ. ಅವರ ವಿರುದ್ದ ಶಿಸ್ತು ಸಮಿತಿ ವರದಿಯನ್ನೂ ನೀಡಿದೆ. ಈ ವರದಿಯ ಆಧಾರದ ಮೇಲೆ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಿ ಬಹುಮತ ಸಾಬೀತು ಪ್ರಕ್ರಿಯೆಯಿಂದ ಹೊರಗಿರಿಸುವ ಸಾಧ್ಯತೆಗಳೂ ಇವೆ. 

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಸಿಎಂ ಸ್ಥಾನದಿಂದ ಬೊಮ್ಮಾಯಿ ಬದಲಾವಣೆ: ಬಿಜೆಪಿ ಮಾಜಿ ಶಾಸಕ ಸುರೇಶ್‌ ಗೌಡ

Next Post

ಶುರುವಾಗಿದೆ 1975 ಲವ್‌ ಟ್ರ್ಯಾಕ್‌

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಶುರುವಾಗಿದೆ 1975 ಲವ್‌ ಟ್ರ್ಯಾಕ್‌

ಶುರುವಾಗಿದೆ 1975 ಲವ್‌ ಟ್ರ್ಯಾಕ್‌

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada