• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಟ್ ಕಾಯಿನ್ ಕೇಸ್: ಹ್ಯಾಕರ್ ಶ್ರೀಕಿ ಬಗ್ಗೆ ಮೋದಿಗೆ ಕಂಪ್ಲೈಂಟ್; ದೂರಿನಲ್ಲಿ ಏನಿದೆ?

ನಚಿಕೇತು by ನಚಿಕೇತು
November 17, 2021
in ದೇಶ, ರಾಜಕೀಯ
0
ಬಿಟ್ ಕಾಯಿನ್ ಕೇಸ್: ಹ್ಯಾಕರ್ ಶ್ರೀಕಿ ಬಗ್ಗೆ ಮೋದಿಗೆ ಕಂಪ್ಲೈಂಟ್; ದೂರಿನಲ್ಲಿ ಏನಿದೆ?
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲೀಗ ಬಿಟ್‌ಕಾಯಿನ್ ಬಿರುಗಾಳಿ ಎದ್ದಿದೆ. ಹ್ಯಾಕರ್ ಶ್ರೀಕಿಯಿಂದ ಶುರುವಾದ ಈ ಸುಂಟರಗಾಳಿ ಕ್ಷಣಕ್ಷಣಕ್ಕೂ ರೋಚಕ ಟ್ವಿಸ್ಟ್ ಮತ್ತು ಟರ್ನ್‌ಗಳನ್ನ ತೆಗೆದುಕೊಳ್ಳುತ್ತಿದೆ. ರಾಜ್ಯದಲ್ಲಿ ಸದ್ದು ಮಾಡಿದ್ದ ಹ್ಯಾಕರ್ ಶ್ರೀಕೃಷ್ಣನ ಲೀಲೆಗಳು ಸದ್ಯ ಪ್ರಧಾನಿ ಮೋದಿವರೆಗೂ ತಲುಪಿವೆ. ಇದುವೇ ಈಗ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿದೆ.

ADVERTISEMENT

ಕಳೆದ ಕೆಲ ದಿನಗಳ ಹಿಂದೆ ಕ್ರಿಪ್ಟೋ ಕರೆನ್ಸಿ ಹಗರಣದಲ್ಲಿ ರಾಜಕಾರಣಿಗಳ ಕೈಚಳಕವಿರೋ ಬಗ್ಗೆ ಮಾಧ್ಯಮಗಳು ರಿವೀಲ್‌ ಮಾಡಿದ್ದವು. ಜೊತೆಗೆ ಬಿಟ್‌ಕಾಯಿನ್‌ ಬಗೆಗಿನ ಮಾಹಿತಿಗಳನ್ನ ಒಂದೊಂದಾಗಿ ಬಯಲು ಮಾಡಿತ್ತು. ಇದೀಗ ಬಿಟ್‌ ಕಾಯಿನ್ ಬಯಲಾಟದಲ್ಲಿ ಹ್ಯಾಕರ್ ಶ್ರೀಕೃಷ್ಣನ ಲೀಲೆಗಳು ದಿನದಿನಕ್ಕೂ ಹೊಸ ಅವತಾರಗಳಾಗಿ ಬದಲಾಗ್ತಿವೆ. ಅಲ್ಲದೇ ಖತರ್ನಾಕ್ ಶ್ರೀಕೃಷ್ಣನ ಕಳ್ಳಾಟಗಳು ದೇಶದ ಪ್ರಧಾನಿವರೆಗೂ ತಲುಪಿವೆ. ಹ್ಯಾಕರ್ ಶ್ರೀಕಿಯ ಬಿಟ್‌ ಕಾಯಿನ್ ರಂಗಿನಾಟದ ಬಗ್ಗೆ ವಿಷಲ್ ಬ್ಲೋವರ್‌ ಕಾಯ್ದೆಯಡಿ ಪ್ರಧಾನಿ ಮೋದಿಗೆ ದೂರನ್ನ ನೀಡಲಾಗಿದೆ. ಇದೇ ದೂರಿನ ವಿವರಗಳನ್ನ ಕಾಂಗ್ರೆಸ್ನ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗಪಡಿಸಿದ್ದಾರೆ.

ಬಿಟ್‌ ಕಾಯಿನ್ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಗ್ಗೆ ಖುದ್ದು ಪ್ರಧಾನಿ ಮೋದಿಗೆ ದೂರನ್ನ ನೀಡಲಾಗಿದೆ. ಶ್ರೀಕಿ ತನ್ನ ಹ್ಯಾಕಿಂಗ್ ಕೈಚಳಕ ತೋರಿಸಿದ್ದರ ಬಗ್ಗೆ ದೂರನ್ನ ಕೊಡಲಾಗಿದೆ. ಇವನು ಮಾಡಿರೋ ಅಂತರಾಷ್ಟ್ರೀಯ ದೋಖಾ, ಬಿಟ್ಕಾಯಿನ್ ಹ್ಯಾಕಿಂಗ್ ಬಗ್ಗೆ ಸವಿವರವಾಗಿ ದೂರುದಾರರು ಉಲ್ಲೇಖಿಸಿದ್ದಾರೆ. ಅಲ್ಲದೇ ದೂರಿನಲ್ಲಿ ಕರ್ನಾಟಕದ ರಾಜಕಾರಣಿಗಳ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಇನ್ನು ದೂರಿನ ಪ್ರತಿಯನ್ನ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್, ಪ್ರಧಾನಿಯ ರಾಜಕೀಯ ಕಾರ್ಯದರ್ಶಿ, ಇ.ಡಿ ಮತ್ತು ಇಂಟೆಲಿಜೆನ್ಸ್‌ಗೆ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡಿರೋ ದೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಹೆಸರನ್ನ ಉಲ್ಲೇಖ ಮಾಡಲಾಗಿದೆ. ಜೊತೆಗೆ ಅವರು ಶ್ರೀಕಿ ಜೊತೆ ಸೇರಿ ಮಾಡಿರೋ ಹ್ಯಾಕಿಂಗ್ ದೋಖಾದ ಬಗ್ಗೆಯೂ ಉಲ್ಲೇಖಿಸಲಾಗಿದೆ.

ಪ್ರಧಾನಿಗೆ ನೀಡಿರೋ ದೂರಿನಲ್ಲಿ ರಾಜಕಾರಣಿಗಳ ಹೆಸರು ಕೂಡಾ ಉಲ್ಲೇಖವಾಗಿದೆ. ಕಾಂಗ್ರೆಸ್ ನಾಯಕರೊಬ್ಬರ ಪುತ್ರನ ಜೊತೆ ಶ್ರೀಕೃಷ್ಣನ ಸಂಪರ್ಕವಿರೋದನ್ನ ದೂರಿನಲ್ಲಿ ರಿವೀಲ್ ಮಾಡಲಾಗಿದೆ. ಅಲ್ಲದೇ ಕೈ ನಾಯಕನ ಪುತ್ರ ಬಿಟ್ ಕಾಯಿನ್ ಮೂಲಕ ₹120 ಕೋಟಿ ರೂಪಾಯಿ ಹವಾಲಾ ಹಣ ಪಡೆದಿರೋದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ, ಈ ಪ್ರಕರಣದ ತನಿಖೆಯಿಂದ ಕೈ ನಾಯಕನ ಪುತ್ರನನ್ನ ಪೊಲೀಸರು ಕೈಬಿಟ್ಟಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದಷ್ಟೇ ಅಲ್ಲ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರನ ವಿರುದ್ಧವೂ ಬಿಟ್‌ ಕಾಯಿನ್‌ ಆರೋಪ ಕೇಳಿಬಂದಿದೆ.  ಶ್ರೀಕಿ ಜೊತೆ ಸೇರಿ ಸಿಂಪಲ್ ಪ್ರೋಸಸ್ ಮೂಲಕ ತಿಂಗಳಿಗೆ ₹160 ಕೋಟಿ ರೂಪಾಯಿ ಸಂಪಾದನೆ ಮಾಡಿರೋ ಆರೋಪವನ್ನ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಶ್ರೀಕಿಯನ್ನ ನ್ಯಾಯಾಂಗ ಬಂಧನದಿಂದ ಬಿಜೆಪಿ ನಾಯಕರೇ ಬಿಡಿಸಿದ್ದಾರೆ ಅನ್ನೋದು ದೂರುದಾರರ ಆರೋಪವಾಗಿದೆ.

ಇನ್ನು ಪ್ರದಾನಿಗೆ ನೀಡಿರೋ ದೂರಿನಲ್ಲಿ ಶ್ರೀಕಿ ಜೊತೆ ಮಾಜಿ ಐಪಿಎಸ್ ಅಧಿಕಾರಿಯ ಪುತ್ರನೂ ಪಾಲುದಾರನಾಗಿದ್ದ ಎಂಬ ಆರೋಪ ಉಲ್ಲೇಖಿಸಲಾಗಿದೆ. ಅಲ್ಲದೇ ಸಿಸಿಬಿ ಅಧಿಕಾರಿಗಳು ವಂಚನೆಯ ಹಣದಲ್ಲಿ ಕೊಳ್ಳೆ ಹೊಡೆದಿರೋದನ್ನೂ ಪ್ರಧಾನಿಯ ಗಮನಕ್ಕೆ ತರಲಾಗಿದೆ.

ಸಿಸಿಬಿ ಅಧಿಕಾರಿಗಳೂ ಶಾಮೀಲು?

ಮೊದಲಿಗೆ ಡ್ರಗ್ಸ್ ಪ್ರಕರಣದಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ಬಂಧನವಾಗಿತ್ತು. ಈ ವೇಳೆ ಪೊಲೀಸರು ಕಸ್ಟಡಿಗೆ ಪಡೆದಾಗ ಶ್ರೀಕಿ ಖಾತೆಯಲ್ಲಿ 19 ಕೋಟಿ ರೂಪಾಯಿ ಹಣವಿತ್ತು ಎನ್ನಲಾಗಿದೆ. ಆಗ ಈ ಹಣವನ್ನ ಎನ್ಜಿಒವೊಂದಕ್ಕೆ ವರ್ಗಾವಣೆ ಮಾಡುವಂತೆ ಪೊಲೀಸರು ಒತ್ತಡ ಹೇರಿದ್ರು ಎನ್ನಲಾಗಿದೆ. ಸಿಸಿಬಿಯ ಇಬ್ಬರು ಹಿರಿಯ ಅಧಿಕಾರಿಗಳ ಗಮನಕ್ಕೂ ಈ ವಿಷಯ ಇತ್ತು ಎಂದು ದೂರಲ್ಲಿ ಉಲ್ಲೇಖವಾಗಿದೆ.


ಒಟ್ಟಾರೆ, ಬಿಟ್‌ ಕಾಯಿನ್‌ ಬಲೆಯಲ್ಲಿ ಕಾಂಗ್ರೆಸ್, ಬಿಜೆಪಿಯ ನಾಯಕರು, ಅಧಿಕಾರಿಗಳು ಶಾಮೀಲಾಗಿರೋದು ಮೇಲ್ನೋಟಕ್ಕೆ ಗೊತ್ತಾಗಿದೆ. ಇದನ್ನೆಲ್ಲಾ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಾ? ಆರೋಪ ಹೊತ್ತವರ ವಿರುದ್ಧ ಕ್ರಮ ಕೈಗೊಳ್ಳುತ್ತಾ? ನೋಡಬೇಕು.

Tags: BitcoinBJPcomplaintCongress PartyPriyank Khargesrikyನರೇಂದ್ರ ಮೋದಿಬಿಜೆಪಿ
Previous Post

ನೀರಿನ ಹನಿಯೋ ಚೇಳಿನ ಮಳೆಯೋ…? : ಈಜಿಪ್ಟಿನಲ್ಲಿ ಚೇಳುಗಳ ಆರ್ಭಟಕ್ಕೆ ಜನ ಕಂಗಾಲು

Next Post

ಡಿಸೆಂಬರ್ 10ಕ್ಕೆ ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ; ಮೂರು ಪಕ್ಷಗಳಿಂದ ಭಾರೀ ಸಿದ್ಧತೆ

Related Posts

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?
ರಾಜಕೀಯ

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

by ಪ್ರತಿಧ್ವನಿ
February 1, 2026
0

ಜಮಾತೆ-ಇ-ಇಸ್ಲಾಮಿ (ಜೆಇಐ) ಶನಿವಾರ  ಅಮೀರ್ ಡಾ. ಶಫೀಕರ್ ರೆಹಮಾನ್ ಅವರ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಸಾರ್ವಜನಿಕ ಜೀವನ ಮತ್ತು ನಾಯಕತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಡಿಸೆಂಬರ್ 10ಕ್ಕೆ ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ; ಮೂರು ಪಕ್ಷಗಳಿಂದ ಭಾರೀ ಸಿದ್ಧತೆ

ಡಿಸೆಂಬರ್ 10ಕ್ಕೆ ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ; ಮೂರು ಪಕ್ಷಗಳಿಂದ ಭಾರೀ ಸಿದ್ಧತೆ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada