• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು: ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್

ಪ್ರತಿಧ್ವನಿ by ಪ್ರತಿಧ್ವನಿ
October 17, 2023
in Top Story, ಕರ್ನಾಟಕ
0
ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು: ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್
Share on WhatsAppShare on FacebookShare on Telegram

ಬಿಜೆಪಿಯವರು ಕಳೆದ ಮೂರು ತಿಂಗಳಿಂದ ಕುಮಾರಸ್ವಾಮಿ ಅವರ ಆಡಿಷನ್ ಮಾಡುತ್ತಿದೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಗೆ ವಾಗ್ದಾಳಿ ಮಾಡುತ್ತಾರೆ ಎಂಬುದರ ಆಧಾರದ ಮೇಲೆ ಮುಂದೆ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ನೀಡಬೇಕು ಎಂಬುದನ್ನು ನಿರ್ಧರಿಸಲಿದೆ. ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದ್ದರೆ, ಯಾರದೋ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಜತೆ ನಂಟು ಹಾಕುತ್ತಿರುತ್ತಿರಲಿಲ್ಲ. ಇವರ ನಾಟಕವನ್ನು ಜನ ನೋಡುತ್ತಿದ್ದಾರೆ. ಅವರು ಮುಟ್ಟಾಳರಲ್ಲ. ಈಗಾಗಲೇ ಅವರು ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದ್ದು, ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸಲಿದ್ದಾರೆ.

ADVERTISEMENT

ನಿನ್ನೆ ಐಟಿ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಹಾಗೂ ಕುಮಾರಸ್ವಾಮಿ ಅವರಿಗೆ ಇದನ್ನು ಸಾಧ್ಯವಾದರೆ ಅರ್ಥ ಮಾಡಿಕೊಳ್ಳಲಿ. ಈ ಹೇಳಿಕೆಯಲ್ಲಿ ಎಲ್ಲಾದರೂ ಒಂದು ಕಡೆ ಇದಕ್ಕೂ ಕಾಂಗ್ರೆಸ್ ಮುಖಂಡರಿಗೆ ಲಿಂಕ್ ತೋರಿಸಿದ್ದಾರಾ? ಐಟಿ ಇಲಾಖೆ ಹೇಳಿಕೆಯಲ್ಲಿ ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಹಣವನ್ನು ವೈಟ್ ಮಾತ್ರವಲ್ಲದೇ, ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ. ಐಟಿ ಇಲಾಖೆ ಸ್ಪಷ್ಟ ಹೇಳಿಕೆ ನೀಡಿದ ನಂತರವೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಅವರಿಗೆ ಮರ್ಯಾದೆ ಇದೆಯಾ.

ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು. ಸಿದ್ದರಾಮಯ್ಯ ಅವರು ಸರ್ಕಾರ ಬರುವ ಮುಂಚೆಯೇ ಬಿಜೆಪಿ ಮಾಡಿರುವ ಅನಾಹುತ ಸರಿಪಡಿಸಲು ಕನಿಷ್ಠ 1 ವರ್ಷ ಸಮಯ ಬೇಕು ಎಂದು ಹೇಳಿದ್ದರು. ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಬಿಜೆಪಿಯ ಒಕ್ಕಲಿಗ ಸಮುದಾಯದ ಮುಖಂಡರುಗಳ ಜತೆ ಸೇರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬವನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾಳೆ ಏನಾದರೂ ಶಿವಕುಮಾರ್ ಅವರಿಗೆ ತೊಂದರೆ ಆದರೆ ಕುಮಾರಸ್ವಾಮಿ, ಸಿ.ಟಿ ರವಿ, ಅಸ್ವತ್ಥ್ ನಾರಾಯ, ಆರ್ ಅಶೋಕ್ ಅವರೇ ನೇರ ಕಾರಣ. ಶಿವಕುಮಾರ್ ಅವರು ಡಿಸಿಎಂ ಆಗಿರುವುದನ್ನು ಸಹಿಸಲು ಆಗುತ್ತಿಲ್ಲ. ಬ್ಯ್ರಾಂಡ್ ಬೆಂಗಳೂರು ಮಾಡಲು ಹೊರಟರೆ ಅದರ ಬಗ್ಗೆ ಕೇವಲವಾಗಿ ಮಾತನಾಡುತ್ತಾರೆ. ನಿಮ್ಮ ಯೋಗ್ಯತೆಗೆ ಬೆಂಗಳೂರಿಗೆ ಸರಿಯಾದ ಅನುದಾನ ನೀಡಲಿಲ್ಲ. ಬೆಂಗಳೂರಿನಲ್ಲಿ 25 ಸಾವಿರ ರಸ್ತೆಗುಂಡಿಗಳಿವೆ ಎಂದು ಕೋರ್ಟ್ ಗೆ ಅಫಿಡವಿಟ್ ಕೊಟ್ಟಿದ್ದಿರಿ. ಈಗ ನೀವು ಟೀಕೆ ಮಾಡುತ್ತೀರಾ?

ನನ್ನ ಪ್ರಕಾರ ಮೋದಿ ಅವರಿಗೆ ಕರ್ನಾಟಕ ಹಾಗೂ ಕನ್ನಡಿಗರನ್ನು ಕಂಡರೆ ಸಿಟ್ಟಿದೆ. ಅದೇ ಕಾರಣಕ್ಕೆ ಸುಮಾರು 15-20 ಚಿನ್ನಾಭರಣ ಮಳಿಗೆ ರೈಡ್ ಮಾಡಿಸಿದ್ದಾರೆ. ಇವರಿಗೂ ಕಾಂಗ್ರೆಸ್ ಗೂ ಏನು ಸಂಬಂಧ? ಇವರ ಜತೆಗೆ 25 ಜೋತಿಷ್ಯಿಗಳ ಮೇಲೂ ದಾಳಿ ಮಾಡಿಸಿದ್ದೀರಿ. ಅವರ ಮನೆಯಲ್ಲಿ ಏನು ಸಿಗದೇ ಇದ್ದಾಗ ಐಟಿ ಅಧಿಕಾರಿಗಳು ಜೋತಿಷ್ಯ ಕೇಳಿಕೊಂಡು ಹೋಗಿದ್ದಾರೆ.

ಕುಮಾರಸ್ವಾಮಿ ಅವರು ಬಹಳ ಬಾಲೀಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮೈಸೂರು ಮನೆ ಯಾರು ಕಟ್ಟುತ್ತಿದ್ದಾರೆ? ಬೆಂಗಳೂರಿನ ಮನೆ ನವೀಕರಣ ಮಾಡುತ್ತಿರುವವರು ಯಾರು? ನೀವೇ ಹೇಳಿ ಸ್ವಾಮಿ. ಬೆಂಗಳೂರಿನ ಮನೆ ಕೃಷ್ಣ ಹಾಗೂ ಕಾವೇರಿ. ಇವೆರಡೂ ಸಿದ್ದರಾಮಯ್ಯ ಅವರ ಸ್ವಂತ ಮನೆಯಲ್ಲ ಸರ್ಕಾರದಿಂದ ನೀಡಿರುವ ಮನೆ. ಇದರ ನವೀಕರಣವನ್ನು ಪಿಡಬ್ಲ್ಯೂಡಿ ಅವರು ಮಾಡುತ್ತಾರೆ. ಅದರಲ್ಲೂ ಹಿಟ್ ಅಂಡ್ ರನ್ ಮಾಡುತ್ತೀರಿ. ಮೈಸೂರು ಮನೆ ಕಟ್ಟಲು ಆರಂಭಿಸಿ ಐದು ವರ್ಷವಾಗಿದೆ. ಹಣದ ಕೊರತೆಯಿಂದ ನಾಲ್ಕನೇ ಮಹಡಿ ಅರ್ಧಕ್ಕೆ ನಿಂತಿದೆ. ಪೆಟ್ರೋಲ್ ಬಂಕ್ ಇರುವುದು 50X80 ವಿಸ್ತೀರ್ಣದಲ್ಲಿ. ಇದು ಸಿದ್ದರಾಮಯ್ಯ ಅವರ ಹೆಸರಲ್ಲಿ ಇಲ್ಲ. ಸಿದ್ದರಾಮಯ್ಯ ಅವರು ಹಾಲಿ ವಾಸವಿರುವ ಮನೆ ಬಾಡಿಗೆ ಮನೆ. ಸಿದ್ದರಾಮಯ್ಯ ಅವರ ಹೆಸರಲ್ಲಿರುವ ಆಸ್ತಿ ಮೊತ್ತ 26 ಲಕ್ಷ ಮಾತ್ರ. ಅವರ ಬಳಿ ಎಷ್ಟು ಪಂಚೆ ಇವೆ ಎಂಬುದನ್ನು ಮಾತ್ರ ನಾನು ಚುನಾವಣಾ ಅಫಿಡವಿಟ್ ನಲ್ಲಿ ಸೇರಿಸಿಲ್ಲ.

ಯತೀಂದ್ರ ಸಿದ್ದರಾಮಯ್ಯ ಅವರನ್ನು ಸಿಕ್ಕಿಹಾಕಿಸಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಅವರಿಗೆ ಕೆಟ್ಟ ಹೆಸರು ತಂದು ನಿಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದೀರಿ. ನೀವು ಏನೆ ಮಾಡಿದರೂ ಪ್ರಯೋಜನವಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಗೆದ್ದರೂ ಅಚ್ಚರಿಪಡಬೇಕಾಗಿಲ್ಲ. ಬಿಜೆಪಿ ಮುಖಂಡರ ವಿರುದ್ಧ ದಾಳಿ ಮಾಡಿಸಿ.

2014ರಿಂದ 2023ರವರೆಗೆ ದೇಶದಲ್ಲಿ ಒಟ್ಟು 4 ಸಾವಿರ ಇಡಿ ದಾಳಿಗಳು ನಡೆದಿದ್ದು, ಇದರಲ್ಲಿ ಶೇ.90ರಷ್ಟು ದಾಳಿ ವಿರೋಧ ಪಕ್ಷಗಳ ನಾಯಕರ ಮೇಲೆ. ಇದರಲ್ಲಿ ಶಿಕ್ಷೆ ಪ್ರಮಾಣ ಕೇವಲ 23 ಜನರಿಗೆ ಮಾತ್ರ. ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಟ್ಟು ಇಡಿ ರೈಡ್ ಆಗಿದ್ದು ಕೇವಲ 112 ಮಾತ್ರ. 80 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. ಇನ್ನು ಐಟಿ ಇಲಾಖೆಯಲ್ಲಿ 2 ಸಾವಿರ ದಾಳಿ ಮಾಡಿದ್ದು 70 ಪ್ರಕರಣದಲ್ಲಿ ಶಿಕ್ಷೆ ಆಗಿದೆ. ನೀವು ಕೇವಲ ವಿರೋಧ ಪಕ್ಷಗಳ ವಿರುದ್ಧ ಅಸ್ತ್ರವಾಗಿ ಈ ಇಲಾಖೆ ಬಳಸಿಕೊಳ್ಳುತ್ತಿದ್ದೀರಿ.

ಸಾವಿರ ಕೋಟಿಯ ಲೆಕ್ಕ ಕೊಡುವ ಅಶೋಕ್ ಅವರೇ ನಿಮಗೆ ಮಾನ ಮರ್ಯಾದೆ ಇಲ್ಲವೇ? 650 ಬಿಬಿಎಂಪಿ ಬಿಲ್ ಪಾವತಿ ಆಗಿದ್ದು, ಅದರ ಕಮಿಷನ್ ಮೊತ್ತವೇ 42 ಕೋಟಿ ಎಂದು ನಿಮ್ಮ ಪಕ್ಷದವರು ಹೇಳುತ್ತಾರೆ. ಅಶೋಕ್ ಅವರು 1 ಸಾವಿರ ಕೋಟಿ ಲೆಕ್ಕ ನೀಡುತ್ತಾರೆ. 650 ಕೋಟಿ ಬಿಲ್ ಬಿಡುಗಡೆಗೆ ಸಾವಿರ ಕೋಟಿ ಕಮಿಷನ್ ನೀಡುತ್ತಾರಾ? ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಲು ಏನೆಲ್ಲಾ ಮೋಡಬೇಕೋ ಅದನ್ನು ಮಾಡುತ್ತಿದ್ದಾರೆ.

ಕುಮಾರಸ್ವಾಮಿಯನ್ನು ಯಾವುದೇ ಕಾರಣಕ್ಕೂ ನಂಬಬೇಡಿ ಎಂದು ಒಕ್ಕಲಿಗ ಸಮುದಾಯದವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ಕುಮಾರಸ್ವಾಮಿ ಬಾಯಲ್ಲಿ ಬರುವುದು ಶೇ.99ರಷ್ಟು ಸುಳ್ಳು. ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಪಿತೂರಿ ಮಾಡಿದ್ದಾರೆ. ಒಕ್ಕಲಿಗರ ನಾಯಕರನ್ನು ಸಹಿಸಲು ಆಗುತ್ತಿಲ್ಲ. ಒಕ್ಕಲಿಗರು ಯಾರಿಗೆ ಪಾಠ ಕಲಿಸುತ್ತೀರ ನೀವೇ ನಿರ್ಧರಿಸಿ.

Tags: BJPHD KumaraswamyJDSM. Lakshmansiddaramaiah
Previous Post

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ

Next Post

ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಮಾಜಿ ಪಿಎಂ ಎಚ್.ಡಿ ದೇವೇಗೌಡ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಮಾಜಿ ಪಿಎಂ ಎಚ್.ಡಿ ದೇವೇಗೌಡ

ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಮಾಜಿ ಪಿಎಂ ಎಚ್.ಡಿ ದೇವೇಗೌಡ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada