ಭಾನುವಾರ ತ್ರಿಪುರಾದಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ಪತ್ರಕರ್ತರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ರಾಹುಲ್ ಬಿಜೆಪಿ ವಿರುದ್ದ್ ತೀವ್ರ ವಾಗ್ದಾಳಿಯನ್ನ ನಡೆಸಿದ್ದಾರೆ. ʻಬಿಜೆಪಿ ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ, ಸುಳ್ಳಿನ ಮುಂದೆ ಸತ್ಯ ಯಾವಾಗ ನಿಲ್ಲುತ್ತದೆʼ ಎಂದು ಕಿಡಿಕಾರಿದ್ದಾರೆ.
ಅಸ್ಸಾಂನ ತ್ರಿಪುರಾದಲ್ಲಿ ಭಾನುವಾರ ನಡೆದ ಹಿಂಸಾಚಾರದ ಕುರಿತು ವರದಿ ಮಾಡುತ್ತಿದ್ದ್ ಇಬ್ಬರು ಮಹಿಳಾ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ʻಬಿಜೆಪಿ ವ್ಯವಸ್ಥೆ ಮೂಲಕ ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ. ಆದರೆ, ಸುಳ್ಳಿನ ಮುಂದೆ ಸತ್ಯ ಯಾವಾಗ ನಿಲ್ಲುತ್ತದೆʼ ಎಂದು ಹೇಳಿದ್ದಾರೆ. #Tripura, #NoFear ಎಂಬ ಹ್ಯಾಶ್ಟ್ಯಾಗ್ಗಳನ್ನು ರಾಹುಲ್ ಟ್ವೀಟ್ನಲ್ಲಿ ಬಳಸಿದ್ದಾರೆ.