• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಯಕತ್ವ ಇಲ್ಲದ್ದಕ್ಕೆ ಬಿಜೆಪಿ ಪರದಾಟ..! ಕಾವಿಗೆ ಪಟ್ಟ ಕಟ್ಟುವ ತಯಾರಿ..!

ಕೃಷ್ಣ ಮಣಿ by ಕೃಷ್ಣ ಮಣಿ
February 26, 2023
in ಕರ್ನಾಟಕ
0
ನಾಯಕತ್ವ ಇಲ್ಲದ್ದಕ್ಕೆ ಬಿಜೆಪಿ ಪರದಾಟ..! ಕಾವಿಗೆ ಪಟ್ಟ ಕಟ್ಟುವ ತಯಾರಿ..!
Share on WhatsAppShare on FacebookShare on Telegram

ಬಿಜೆಪಿಯಲ್ಲಿ ಯಡಿಯೂರಪ್ಪ ನಾಯಕತ್ವಕ್ಕೆ ಒತ್ತಡದ ನಿವೃತ್ತಿ ಕೊಡಲಾಗಿದೆ. ಮುಖ್ಯಮಂತ್ರಿ ಆಗಿದ್ದವರನ್ನು ಒತ್ತಡದ ಮೂಲಕ ರಾಜೀನಾಮೆ ಕೊಡಿಸಿ ಪಕ್ಷದಲ್ಲೇ ಉಳಿಯುವಂತೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಗೆಲುವು ಬರಬೇಕಿದ್ದರೆ ಯಡಿಯೂರಪ್ಪ ಇರಬೇಕು ಅನ್ನೋದು ಬಿಜೆಪಿ ಹೈಕಮಾಂಡ್​ ನಾಯಕರಿಗೂ ಅರಿವಾಗಿದೆ. ಆದರೆ ಯಡಿಯೂರಪ್ಪ ಅವರಿಗೆ ಮತ್ತೆ ನಾಯಕತ್ವ ಕೊಡುವ ಯಾವುದೇ ಉದ್ದೇಶವಿಲ್ಲ. ಯಡಿಯೂರಪ್ಪ ಇರಬೇಕು, ಈ ಬಾರಿ ಹೇಗಾದರೂ ಮಾಡಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಮುಂದಿನ 5 ವರ್ಷಗಳಲ್ಲಿ ಯಡಿಯೂರಪ್ಪ ಅವರಂತೆ ಜನಾಕರ್ಷಣೆ ಮಾಡಬಲ್ಲ ನಾಯಕತ್ವವನ್ನು ಸೃಷ್ಟಿಸುವ ಚಿಂತನೆಯಲ್ಲಿ ಭಾರತೀಯ ಜನತಾ ಪಾರ್ಟಿ ಇದೆ. ಇದೇ ಕಾರಣಕ್ಕಾಗಿ ಯಡಿಯೂರಪ್ಪ ಅವರನ್ನು ಈ ಬಾರಿ ಚುನಾವಣೆಯಲ್ಲಿ ಭಾರೀ ಗೌರವಪೂರ್ವಕವಾಗಿ ನಡೆಸಿಕೊಳ್ಳಲಾಗ್ತಿದೆ. ಚುನಾವಣೆ ಮುಗಿದ ಬಳಿಕ ಅಡ್ವಾಣಿ ಸ್ಥಿತಿಗೆ ಯಡಿಯೂರಪ್ಪ ಬಾರದಿದ್ದರೆ ಸಾಕು ಎನ್ನುವುದು ಯಡಿಯೂರಪ್ಪ ಅಭಿಮಾನಿಗಳಲ್ಲಿ ಇರುವ ಆಶಯ.

ADVERTISEMENT

ನಾಯಕನಿಗಾಗಿ ರಾಜ್ಯಾದ್ಯಂತ ಹುಡುಕಾಟ.. ಖಾವಿ ಕಡೆಗೆ ಚಿತ್ತ..!

ರಾಜ್ಯದಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಮುನ್ನಡೆಸಬಲ್ಲ ನಾಯಕನಿಗಾಗಿ ರಾಜ್ಯ ಬಿಜೆಪಿ ಹಾಗು ಕೇಂದ್ರ ಬಿಜೆಪಿ ಹುಡುಕಾಟ ನಡೆಸಿದೆ. ಕರ್ನಾಟಕದಲ್ಲಿ ಬ್ರಾಹ್ಮಣರಿಗೆ ಪಟ್ಟ ಕಟ್ಟಿದ್ದೇ ಆದರೆ ಪ್ರಬಲ ಸಮುದಾಯಗಳಾದ ಲಿಂಗಾಯತ ಹಾಗು ಒಕ್ಕಲಿಗ ಸಮುದಾಯದ ಜೊತೆಗೆ ಎಸ್​ಸಿ ಎಸ್​ಟಿ ಜನರು ಭಾರತೀಯ ಜನತಾ ಪಾರ್ಟಿಯನ್ನು ಸಾರಸಗಟಾಗಿ ತಿರಸ್ಕಾರ ಮಾಡುವ ಭೀತಿಯಲ್ಲಿ ಭಾರತೀಯ ಜನತಾ ಪಾರ್ಟಿ ನಾಯಕರಿದ್ದಾರೆ. ಆದರೆ ಓರ್ವ ಕಾವಿಧಾರಿಯನ್ನು ಬಿಜೆಪಿ ನಾಯಕನನ್ನಾಗಿ ಮಾಡಿದಾಗ ಹಿಂದುತ್ವದ ಅಜೆಂಡಾದಲ್ಲಿ ಕರ್ನಾಟಕವನ್ನು ಮುನ್ನಡೆಸುವುದು ಬಿಜೆಪಿ ನಡೆಯುತ್ತಿರುವ ಬೆಳವಣಿಗೆ. ಈಗಾಗಲೇ ಈ ಬಗ್ಗೆ ಬಿಜೆಪಿಯಲ್ಲಿ ಚರ್ಚೆಗಳು ಶುರುವಾಗಿದ್ದು, ರಾಜ್ಯ ಬಿಜೆಪಿ ನಾಯಕರೂ ಕೂಡ ಓರ್ವ ಸ್ವಾಮೀಜಿ ಬಿಜೆಪಿ ನಾಯಕತ್ವ ವಹಿಸಿಕೊಳ್ಳುವ ಬಗ್ಗೆ ಸುಳಿವು ನೀಡಿದ್ದಾರೆ. ಈಗಾಗಲೇ ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕರೆತಂದ ಹಾಗೆ ಕರ್ನಾಟಕದಲ್ಲೂ ಕೇಸರಿ ಪಕ್ಷವನ್ನು ಕಾವಿಗೆ ವಹಿಸುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

ದೆಹಲಿಯಲ್ಲಿ ನಡೀತು ಕಾವಿ ಜೊತೆಗೆ ಸಮಾಲೋಚನೆ..!

ಭಾರತೀಯ ಜನತಾ ಪಾರ್ಟಿಯ ಹೊಣೆಗಾರಿಕೆಯನ್ನು ರಾಜ್ಯದ ಮಠಾಧೀಶರಿಗೆ ವಹಿಸುತ್ತಾರೆ ಎನ್ನುವ ಮಾತಿನ ಬೆನ್ನಲ್ಲೇ ಕರ್ನಾಟಕದ ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಕರ್ನಾಟಕ ಸಂಘದ 75ನೇ ಅಮೃತ ಮಹೋತ್ಸವ ಕಾರ್ಯಕ್ರಮ ನಿಮಿತ್ತ ನಿನ್ನೆ ಅದ್ಧೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ತಲಕ್‌ಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮ ಸಂಪೂರ್ಣ ಬಿಜೆಪಿ ಪಕ್ಷದ ಕಾರ್ಯಕ್ರಮ ಎನ್ನುವಂತೆ ಭಾಸವಾಗ್ತಿತ್ತು. ಈ ಕಾರ್ಯಕ್ರಮದಲ್ಲಿ ಒಂದು ಕಡೆದ ಸಿಎಂ ಆದಿಯಾಗಿ ರಾಜಕಾರಣಿಗಳು ಕುಳಿತಿದ್ದರೆ, ಪ್ರಧಾನಿ ಬಲಭಾಗದಲ್ಲಿ ನಿರ್ಮಲಾನಂದ ಶ್ರೀಗಳು ಸೇರಿದಂತೆ ನಂಜಾವಧೂತ ಸ್ವಾಮೀಜಿ, ಪೇಜಾವರ ವಿಶ್ವಪ್ರಸನ್ನ ತೀರ್ಥರು, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಜರಿದ್ದರು. ಎಲ್ಲಾ ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಲುವಾಗಿಯೇ ಕನ್ನಡ ಡಿಂಡಿಮ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಎನ್ನುವಂತೆ ಭಾಸವಾಯ್ತು.

ಬಿಜೆಪಿ ಆಫರ್​ ಒಪ್ಪಿಕೊಳ್ತಾರಾ ನಿರ್ಮಲಾನಂದ ಶ್ರೀ..!?

ಮಾದಾರ ಚನ್ನಯ್ಯ ಸ್ವಾಮೀಜಿಗಳನ್ನು ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲೇ ಅಖಾಡಕ್ಕೆ ಇಳಿಸುವ ಸಿದ್ಧತೆಗಳು ನಡೆದಿದ್ದವು. ಹಿಂದುಳಿದ ಸಮುದಾಯದ ಸ್ವಾಮೀಜಿಯನ್ನು ಕರೆತಂದು ಇಡೀ ರಾಜ್ಯದಲ್ಲಿ ಹಿಂದುತ್ವದ ಮೂಲಕ ಹಿಡಿದುಕೊಳ್ಳಬಹುದು ಅನ್ನೋ ಉದ್ದೇಶ ಹೊಂದಲಾಗಿತ್ತು. ಆದರೆ ಆ ಬಳಿಕ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳನ್ನು ರಾಜ್ಯ ರಾಜಕಾರಣಕ್ಕೆ ತರುವ ಪ್ರಯತ್ನಗಳೂ ನಡೆದಿದ್ದವು. ಇದೀಗ ಪ್ರಧಾನಿ ದೆಹಲಿಯಲ್ಲಿ ಸ್ವಾಮೀಜಿಗಳ ಜೊತೆಗೆ ಚರ್ಚೆ ಮಾಡಿರುವುದು ನೋಡಿದಾಗ ನಿರ್ಮಲಾನಂದ ಶ್ರೀಗಳಿಗಳನ್ನು ಅಧಿಕೃತವಾಗಿ ಬಿಜೆಪಿಗೆ ಸೇರಿಸಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ. ಎಡಭಾಗದಲ್ಲಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗು ಬಲಭಾಗದಲ್ಲಿ ನಿರ್ಮಲಾನಂದ ಶ್ರೀಗಳನ್ನು ಕೂರಿಸಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ದೀರ್ಘಾವಧಿಗೆ ಬಿಜೆಪಿಯನ್ನು ಮುನ್ನಡೆಸುವ ಸ್ವಾಮೀಜಿ ಕಡೆಗೆ ಚಿತ್ತ ಹರಿಸಿದ್ದಾರೆ ಎನ್ನಲಾಗ್ತಿದೆ. ನಿರ್ಮಲಾನಂದ ಶ್ರೀಗಳು ವಿದ್ಯಾವಂತರೂ ಹಾಗು ಭಾಷೆಯ ಮೇಲೆ ಉತ್ತಮ ಹಿಡಿತ ಸಾಧಿಸಿರುವ ಕಾರಣಕ್ಕೆ ನಿರ್ಮಲಾನಂದ ಶ್ರೀಗಳನ್ನು ಓಲೈಸುವ ಕೆಲಸಗಳು ನಡೆದಿವೆ ಎನ್ನಲಾಗ್ತಿದೆ. ಕೇಸರಿ ಪಾಳಯದಲ್ಲಿ ಕಾವಿಗೆ ಪಟ್ಟಕಟ್ಟವುದು ನಿಶ್ಚಿತ ಎನ್ನಲಾಗ್ತಿದೆ.

Tags: ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಪ್ರೀತಿಗಾಗಿ ಎರಡು ದೇಶ ದಾಟಿ ಭಾರತ ಪ್ರವೇಶಿಸಿದ್ದ ಪಾಕಿಸ್ತಾನಿ ಯುವತಿ ಮರಳಿ ತವರಿಗೆ

Next Post

ನಿಮ್ಮ ಪ್ರಯಾಣಕ್ಕೆ ಬಸ್ ಮುಖ್ಯವೋ..?​ ಡ್ರೈವರ್ ​ಮುಖ್ಯವೋ..? ಮಾಲೀಕನೋ..? ಇಲ್ಲಿದೆ ನಿಖರ ಮಾಹಿತಿ..

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ನಿಮ್ಮ ಪ್ರಯಾಣಕ್ಕೆ ಬಸ್ ಮುಖ್ಯವೋ..?​ ಡ್ರೈವರ್ ​ಮುಖ್ಯವೋ..? ಮಾಲೀಕನೋ..? ಇಲ್ಲಿದೆ ನಿಖರ ಮಾಹಿತಿ..

ನಿಮ್ಮ ಪ್ರಯಾಣಕ್ಕೆ ಬಸ್ ಮುಖ್ಯವೋ..?​ ಡ್ರೈವರ್ ​ಮುಖ್ಯವೋ..? ಮಾಲೀಕನೋ..? ಇಲ್ಲಿದೆ ನಿಖರ ಮಾಹಿತಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada