• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೀಸಲಾತಿ ಬಗ್ಗೆ ನಮಗೆ ಪಾಠ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಸಿದ್ದರಾಮಯ್ಯ

Any Mind by Any Mind
July 30, 2021
in ಕರ್ನಾಟಕ
0
ಮೀಸಲಾತಿ ಬಗ್ಗೆ ನಮಗೆ ಪಾಠ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ: ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ನೀಟ್ ಮೂಲಕ ಅಖಿಲಭಾರತ ಕೋಟಾದಡಿಯಲ್ಲಿ  ಸೇರ್ಪಡೆಗೊಳ್ಳುವ ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಶೇಕಡಾ 27ರಷ್ಟು ಮೀಸಲಾತಿ ನೀಡುವ ಪ್ರಧಾನಿ ನರೇಂದ್ರ ಮೋದಿ ಘೋಷಣೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಈ ಬಗ್ಗೆ ಜುಲೈ ಮೂರರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಪ್ರಧಾನಮಂತ್ರಿಯವರಿಗೆ ಪತ್ರ ಬರೆದು ಹಿಂದುಳಿದ ಜಾತಿಯ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದರು. ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಅಖಿಲಭಾರತ ಕೋಟಾದಡಿಯಲ್ಲಿ ಪಡೆದಿರುವ ಶೇಕಡಾ 15ರಷ್ಟು ಸೀಟುಗಳಲ್ಲಿಯೂ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಮೀಸಲಾತಿ ನಿರಾಕರಣೆಯಿಂದಾಗಿ 2017ರಿಂದ 11000 ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿರುವುದನ್ನು ಸೋನಿಯಾಗಾಂಧಿಯವರು ಪತ್ರದಲ್ಲಿ ಉಲ್ಲೇಖಿಸಿ ಅಖಿಲಭಾರತ ಕೋಟಾದಲ್ಲಿಯೂ ಒಬಿಸಿಗಳಿಗೆ ಮೀಸಲಾತಿ ನೀಡಬೇಕೆಂದು ಆಗ್ರಹ ಪಡಿಸಿದ್ದರು. ಇದಕ್ಕಾಗಿ ಸೋನಿಯಾಗಾಂಧಿಯವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ‘’ ಹತ್ತು ವರ್ಷ ಯುಪಿಎ ಸರ್ಕಾರವಿದ್ದಾಗ ಒಬಿಸಿ ಮೀಸಲು ಬಗ್ಗೆ ಸೋನಿಯಾಗಾಂಧಿ ಅವರಿಗೆ ಜ್ಞಾನ ಇರಲಿಲ್ಲವೇ? ಎಂದು ಪ್ರಶ್ನಿಸಿದೆ. ಬಿಜೆಪಿಯ ಬಡವರ,ರೈತರ, ದಲಿತರ, ಹಿಂದುಳಿದ ಜಾತಿಗಳ ವಿರೋಧಿ ಎನ್ನುವದು ನನಗೆ ಗೊತ್ತಿದೆ. ಆದರೆ ಈ ಪಕ್ಷ ಇಷ್ಟೊಂದು ಬೌದ್ದಿಕ ದಿವಾಳಿತನದಿಂದ ಬಳಲುತ್ತಿದೆ ಎಂದು ಗೊತ್ತಿರಲಿಲ್ಲ. ಇತ್ತೀಚಿನ ಇತಿಹಾಸವನ್ನಾದರೂ ಸರಿಯಾಗಿ ಓದಿಕೊಂಡು ಪ್ರತಿಕ್ರಿಯಿಸಿ ಎಂದು ಅವರಿಗೆ ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನಾಯಕರ ಗಮನಕ್ಕಾಗಿ ಕೆಲವು ವಾಸ್ತವಾಂಶಗಳನ್ನು ಮುಂದಿಡಬಯಸುತ್ತೇನೆ. ಮೊದಲನೆಯದಾಗಿ, ದೇಶದಲ್ಲಿಯೇ ಮೊದಲಬಾರಿ ಅತ್ಯಂತ ವೈಜ್ಞಾನಿಕವಾದ ಎಲ್.ಜಿ.ಹಾವನೂರು ವರದಿಯ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ತಂದುಕೊಟ್ಟಿರುವುದು ರಾಜ್ಯದ ದೇವರಾಜ್ ಅರಸು ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಎರಡನೆಯದಾಗಿ, ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಸಂವಿಧಾನಕ್ಕೆ 104ನೇ ತಿದ್ದುಪಡಿ ಮಾಡಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿರುವ ಐಐಟಿ ಮತ್ತು ಐಐಎಂ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರಲಾಯಿತು. ವಿ.ಪಿ.ಸಿಂಗ್ ಅವರು ಮಂಡಲವರದಿ ಅನುಷ್ಠಾನದ ಮೂಲಕ ಹಿಂದುಳಿದ ಜಾತಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವರಾಗಿದ್ದ ಅರ್ಜುನ್ ಸಿಂಗ್ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಹಿಂದುಳಿದ ಜಾತಿಗಳಿಗೆ ಸಂವಿಧಾನಕ್ಕೆ 104ನೇ ತಿದ್ದುಪಡಿಯ ಮೂಲಕ ಮೀಸಲಾತಿ ಕಲ್ಪಿಸಿದ್ದರು ಎಂದು ಅವರು ಹೇಳಿದ್ದಾರೆ.

ಮನಮೋಹನ್ ಸಿಂಗ್ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಾಗ ಅದನ್ನು ವಿರೋಧಿಸಿದ್ದು ಬಿಜೆಪಿ.  ಭಾರತೀಯ ಜನತಾ ಪಕ್ಷ ಸೈದ್ಧಾಂತಿಕವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಗೆ ವಿರುದ್ಧವಾಗಿರುವ ಪಕ್ಷ. ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ ಅವರು ಬಹಿರಂಗವಾಗಿಯೇ ಮೀಸಲಾತಿ ವಿರೋಧಿಸಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ದಿವಂಗತ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದರು. ಹುಟ್ಟಿನಿಂದಲೇ ಮೀಸಲಾತಿ ವಿರೋಧಿಯಾದ ಬಿಜೆಪಿ ಈಗ ರಾಜಕೀಯ ಅನಿವಾರ್ಯತೆಗೆ ಸಿಕ್ಕಿ ಮೀಸಲಾತಿಯನ್ನು ಒಪ್ಪಿಕೊಂಡಿದೆ ಅಷ್ಟೆ. ನಮ್ಮದು ಬದ್ದತೆ, ಬಿಜೆಪಿಯದ್ದು ಆತ್ಮವಂಚನೆಯ ನಾಟಕ. ರಾಜ್ಯದ ವೈದ್ಯಕೀಯ ಕಾಲೇಜುಗಳಿಂದ ಶೇಕಡಾ 15ರಷ್ಟು ಸೀಟುಗಳನ್ನು ಅಖಿಲಭಾರತ ಕೋಟಾಕ್ಕಾಗಿ ಕಿತ್ತುಕೊಂಡಿರುವುದೇ ಮಹಾದ್ರೋಹ. ಈ ನಿರ್ಧಾರವನ್ನು ಕೈಗೊಂಡಿದ್ದು ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ. ನಮ್ಮ ಭೂಮಿ, ನಮ್ಮವರ ತೆರಿಗೆ ಹಣದಿಂದ ನೀಡಿರುವ ವಿನಾಯಿತಿ-ರಿಯಾಯಿತಿಯಿಂದ ನಿರ್ಮಾಣಗೊಂಡ ವೈದ್ಯಕೀಯ ಕಾಲೇಜುಗಳ ಸೀಟನ್ನು ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಯಾಕೆ ಉಡುಗೊರೆಯಾಗಿ ನೀಡಬೇಕು? ಬಿಜೆಪಿ ನಾಯಕರು ಉತ್ತರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅಖಿಲಭಾರತ ಕೋಟಾಕ್ಕಾಗಿ ರಾಜ್ಯದ ಮೆಡಿಕಲ್ ಕಾಲೇಜುಗಳ ಸೀಟುಗಳನ್ನು ಕೇಂದ್ರ ಸರ್ಕಾರ ಕಿತ್ತುಕೊಳ್ಳುವುದನ್ನು ನಾನು ಮುಖ್ಯಮಂತ್ರಿಯಾಗಿರುವಾಗಲೇ ವಿರೋಧಿಸಿದ್ದೆ. ತಮಿಳುನಾಡು ಸರ್ಕಾರ ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದೆ. ಅದರ ಮುಂದಿನ ವಿಚಾರಣೆ ಆಗಸ್ಟ್ 3ಕ್ಕೆ ಇದೆ. ನ್ಯಾಯಾಲಯದ ತೀರ್ಪಿನಿಂದ ಮುಖ ಉಳಿಸಿಕೊಳ್ಳಲು ನರೇಂದ್ರ ಮೋದಿ ಸರ್ಕಾರ ಅಖಿಲಭಾರತ ಕೋಟಾದಡಿಯಲ್ಲಿಯೂ ಒಬಿಸಿಗಳಿಗೆ ಶೇಕಡಾ 27ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಹಿಂದುಳಿದ ಜಾತಿಯ ಬಗ್ಗೆ ಪ್ರಧಾನಿಗಳ ಈ ಕಾಳಜಿಯ ನಾಟಕಕ್ಕೆ ಮುಂಬರುವ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯೂ ಕಾರಣವಾಗಿರಬಹುದು. ಉಳಿದಂತೆ ಪ್ರಧಾನಿಯವರ ಈ ಘೋಷಣೆಯಲ್ಲಿ ಯಾವುದೇ ಬದ್ದತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags: BJPCongress Partyಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕರೋನಾ ಪ್ರಕರಣಗಳು: 3ನೇ ಅಲೆಯ ಮುನ್ಸೂಚನೆಯೇ?

Next Post

ಸಿಡಿ ಭೀತಿಯಲ್ಲಿ ಶಾಸಕ ರೇಣುಕಾಚಾರ್ಯ: ಸಿಡಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಬಿಎಸ್‌ವೈ ಬೆಂಬಲಿಸಿ ಸಹಿ ಸಂಗ್ರಹ ಮಾಡಿರುವುದು ಸತ್ಯ, ಇದರಲ್ಲಿ ಯಾವುದೇ ಅನುಮಾನ ಬೇಡ: ರೇಣುಕಾಚಾರ್ಯ

ಸಿಡಿ ಭೀತಿಯಲ್ಲಿ ಶಾಸಕ ರೇಣುಕಾಚಾರ್ಯ: ಸಿಡಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada