• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

BJPಗೆ ಲಿಂಗಾಯತರು ಬೇಡ ಅಂದ್ರೆ ಲಿಂಗಾಯತರಿಗೂ ಬಿಜೆಪಿ ಬೇಡ..! ಅಖಾಡದಲ್ಲಿ ಅಸಲಿ ಕಹಾನಿ

ಕೃಷ್ಣ ಮಣಿ by ಕೃಷ್ಣ ಮಣಿ
May 8, 2023
in ಅಂಕಣ
0
BJPಗೆ ಲಿಂಗಾಯತರು ಬೇಡ ಅಂದ್ರೆ ಲಿಂಗಾಯತರಿಗೂ ಬಿಜೆಪಿ ಬೇಡ..! ಅಖಾಡದಲ್ಲಿ ಅಸಲಿ ಕಹಾನಿ
Share on WhatsAppShare on FacebookShare on Telegram

ಬಿಜೆಪಿಯಲ್ಲಿ ಪ್ರಭಾವಿ ನಾಯಕನಾಗಿದ್ದ ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಎನ್ನುವುದು ಸರಿ. ಅದೇ ಕಾರಣಕ್ಕ ಲಿಂಗಾಯತ ಸಮುದಾಯ ಬಿಜೆಪಿ ಪರವಾಗಿ ನಿಂತಿದ್ದೂ ಸತ್ಯ. ಆದರೆ ಇದೀಗ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಎನಿಸಿಕೊಂಡಿದ್ದ ಯಡಿಯೂರಪ್ಪ ಅವರನ್ನು ಭಾರತೀಯ ಜನತಾ ಪಾರ್ಟಿ ಬದಿಗೆ ಸರಿಸಿದೆ. ಚುನಾವಣೆಯಲ್ಲಿ ಮತ ಗಳಿಸುವು ಉದ್ದೇಶದಿಂದ ಪ್ರಚಾರಕ್ಕೆ ಕರೆದುಕೊಂಡು ಬರುತ್ತಿದ್ದಾರೆ ಹೊರತು, ಮತದಾನದ ಬಳಿಕ ಯಡಿಯೂರಪ್ಪ ಅವರನ್ನು ಕೇಳುವವರೂ ಇರುವುದಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​​ ಹೇಳಿಕೆ ಸಂಚಲನ ಸೃಷ್ಟಿಸಿದೆ. ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ. ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎನ್ನುವ ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ.

ADVERTISEMENT

ನಾನು ನಿಮಗೆ ಬೇಡ ಎಂದರೆ ನಮಗೂ ನೀವು ಬೇಡ..!

ಬಿ.ಎಲ್​ ಸಂತೋಷ್​​ ಹೇಳಿಕೆ ಬೆನ್ನಲ್ಲೇ ಕರ್ನಾಟಕ ಲಿಂಗಾಯತ ಮತ್ತು ವೀರಶೈವ ವೇದಿಕೆ ತಿರುಗೇಟು ನೀಡಿದ್ದು, ಬಿಜೆಪಿ ಪಕ್ಷಕ್ಕೆ ಲಿಂಗಾಯತರು ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಾಗಿಲ್ಲ ಎನ್ನುವ ಒಕ್ಕಣೆಯೊಂದಿಗೆ ಪತ್ರವೊಂದನ್ನು ಬಿಡುಗಡೆ ಮಾಡಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಹೇಗೆ ನಡೆಸಿಕೊಳ್ಳಲಾಯ್ತು. ಅಧಿಕಾರ ಕಿತ್ತುಕೊಂಡಿದ್ದು ನಮ್ಮ ಕಣ್ಣ ಮುಂದಿದೆ. ಅಷ್ಟೇ ಅಲ್ಲದೆ ಜಗದೀಶ್​ ಶೆಟ್ಟರ್​, ಲಕ್ಷ್ಮಣ ಸವದಿ, ಆಯನೂರು ಮಂಜುನಾಥ್​, ಸೊಗಡು ಶಿವಣ್ಣ ಅವರನ್ನು ಪಕ್ಷದಿಂದ ಹೊರ ಹಾಕಿದ್ದನ್ನೂ ನಾವು ನೋಡಿದ್ದೇವೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಲಿಂಗಾಯತರು ಎಂದು ಘೋಷಣೆ ಮಾಡುವಂತೆ ಒತ್ತಾಯಿಸಿದಾಗಲೂ ನಿರಾಕರಿಸಿರುವುದು ನಮಗೆ ತಿಳಿದಿದೆ. ಬಸವಣ್ಣನ ಅಭಿಮಾನಿಗಳು, ಲಿಂಗಾಯತ ಸಮುದಾಯದ ಜನರು ರಾಜ್ಯದ 224 ಕ್ಷೇತ್ರಗಳಲ್ಲೂ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಕರೆ ನೀಡಲಾಗಿದೆ. ಗೌರವಾಧ್ಯಕ್ಷ ವೀರಭದ್ರಯ್ಯ, ಅಧ್ಯಕ್ಷ ಕೃಪಾಶಂಕರ್​​ ಸೇರಿದಂತೆ ಎಂಟು ಜನರ ಸಹಿ ಕೂಡ ಇದೆ.

ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರೆ ಎಂದು ಬಿಜೆಪಿ ದೂರು..!

ಬಿ.ಎಲ್​ ಸಂತೋಷ್​​ ಹೇಳಿಕೆಯನ್ನೇ ನೀಡಿಲ್ಲ, ಆದರೂ ಹೇಳಿಕೆ ನೀಡಿದ್ದಾರೆ ಎನ್ನುವಂತೆ ಬಿಂಬಿಸಲಾಗ್ತಿದೆ ಎನ್ನುವುದು ಬಿಜೆಪಿಗರ ಆರೋಪ. ಆದರೆ ಮೈಸೂರು ಹಾಗು ಬೆಂಗಳೂರಿನ ಪ್ರಚಾರದ ವೇಳೆ ಮಾತನಾಡಿದ್ದಾರೆ ಅನ್ನೋ ಆರೋಪ ಇದೆ. ಲಿಂಗಾಯತ ಸಮುದಾಯದ ವಿರುದ್ಧ ನಾವು ಮಾತನಾಡಿಲ್ಲ ಎಂದು ಸಂತೋಷ್​​ ಎಲ್ಲಿಯೂ ಸ್ಪಷ್ಟನೆ ನೀಡಿಲ್ಲ. ಆದರೆ ಬಿಜೆಪಿ ಕಾನೂನು ಘಟಕದ ಯಶವಂತ್​ ನೀಡಿರುವ ದೂರಿನ ಹಿನ್ನಲೆಯಲ್ಲಿ ಬೈರಪ್ಪ ಹರೀಶ್​ ಕುಮಾರ್​, ಹೇಮಂತ್​ ಕುಮಾರ್​, ದಿನೇಶ್​ ಅಮೀನ್​ ಮಟ್ಟು, ಬಿಂದು ಗೌಡ, ದಿಲೀಪ್​ ಗೌಡ ವಿರುದ್ಧ ದೂರು ದಾಖಲಾಗಿದೆ. ಉತ್ತರ ವಿಭಾಗದ ಸೈಬರ್​ ಪೊಲೀಸ್​ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಆಕ್ರೋಶ ತಂದ ಹೇಳಿಕೆ..!

ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ, ಲಿಂಗಾಯತರ ಅಗತ್ಯವಿಲ್ಲ ಎನ್ನುವ ಸಂತೋಷ್​ ಹೇಳಿಕೆ ಲಿಂಗಾಯತ ಸಮುದಾಯದಲ್ಲಿ ಆಕ್ರೋಶದ ಕಟ್ಟೆ ಒಡೆಯುವಂತೆ ಮಾಡಿದೆ. ಲಿಂಗಾಯತ ಸಿಎಂ ಭ್ರಷ್ಟ ಎನ್ನುವ ಮೂಲಕ ಸಿದ್ದರಾಮಯ್ಯ ಹೇಳಿಯನ್ನು ಅಸ್ತ್ರವನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದ ಬಿಜೆಪಿಗೆ ಬಿ.ಎಲ್​ ಸಂತೋಷ್​ ಹೇಳಿಕೆ ತಿರುಗು ಬಾಣವಾಗಿದೆ. ಬಿಜೆಪಿಗೆ ಮತ ನೀಡುವಂತೆ ಕರೆ ಮಾಡುತ್ತಿದ್ದಂತೆ ಕರೆ ಸ್ವೀಕಾರ ಮಾಡಿ ಬಿಜೆಪಿಗೆ ಲಿಂಗಾಯತರು ಬೇಕಿಲ್ಲ ಎಂದ ಮೇಲೆ ನಮಗೂ ಬಿಜೆಪಿ ಬೇಕಿಲ್ಲ ಎಂದು ತಿರುಗೇಟು ನೀಡುತ್ತಿರುವ ಪ್ರಕರಣಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಒಟ್ಟಿನಲ್ಲಿ ಚುನಾವಣೆ ಸಮೀಪ ಆಗುತ್ತಿದ್ದ ಹಾಗೆ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿದ್ದು, ಚುನಾವಣೆ ವೇಳೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ. ಒಂದು ವೇಳೆ ಲಿಂಗಾಯತ ಸಮುದಾಯ ಬಿಜೆಪಿಯನ್ನು ನಿರಾಕರಿಸಿ ಕಾಂಗ್ರೆಸ್​, ಜೆಡಿಎಸ್​​ ಕಡೆಗೆ ಕಣ್ಣು ಹಾಯಿಸಿದರೆ ಬಿಜೆಪಿ ರಾಜಕೀಯ ಶಕ್ತಿ ಭಸ್ಮ ಆಗಲಿದೆ ಎನ್ನುವುದು ಮಾತ್ರ ಖಂಡಿತ.

ಕೃಷ್ಣಮಣಿ

Tags: BJPBL SantoshBS YeddyurappaLingayatಕಾಂಗ್ರೆಸ್​ಬಿಎಲ್​ ಸಂತೋಷ್​ಬಿಎಸ್​ ಯಡಿಯೂರಪ್ಪಬಿಜೆಪಿಲಿಂಗಾಯತ
Previous Post

ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಕಡೆಯಿಂದ ಲೀಗಲ್‌ ನೋಟಿಸ್‌..!

Next Post

ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್​​

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್​​

ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್​​

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada