ಪಂಚ ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆಯ ಬಗ್ಗೆ ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರು ಇರುವ ಬಿಜೆಪಿ ಚುನಾವಣಾ ಸಮಿತಿ ಬುಧವಾರ (ಆಗಸ್ಟ್ 16) ಸಂಜೆ ಸಭೆ ಸೇರಲಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.
ಚುನಾವಣಾ ತಯಾರಿ, ಅಭಿಪ್ರಾಯ ಸಂಗ್ರಹ ಹಾಗೂ ಅಭ್ಯರ್ಥಿಗಳ ಆಯ್ಕೆ ಸೇರಿ ಪಕ್ಷದ ಚುನಾವಣಾ ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಳಿಸಿವೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ರಾಜನಾಥ ಸಿಂಗ್ ಹಾಗೂ ಅಮಿತ್ ಶಾ ಅವರು ಭಾಗಿಯಾಗಲಿದ್ದಾರೆ.
ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ಬಳಿಕವೇ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರುತ್ತಿತ್ತು, ಆದರೆ 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಪಂಚರಾಜ್ಯಗಳ ಚುನಾವಣೆ ಮಹತ್ವದ್ದಾಗಿದ್ದರಿಂದ ಬೇಗನೇ ಸಭೆ ನಡೆಸಲು ಪಕ್ಷ ತೀರ್ಮಾನಿಸಿದೆ.
ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ಭಾರೀ ಮಳೆಗೆ ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿರುವ ಹಲವರು
ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯ ಚುನಾವಣಾ ಪ್ರಚಾರದ ಮೇಲ್ವಿಚಾರಣೆಯಲ್ಲಿ ಕೇಂದ್ರ ನಾಯಕತ್ವದ ಹೆಚ್ಚಿನ ಒಳಗೊಳ್ಳುವಿಕೆಯನ್ನು ಸೂಚಿಸುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂನಲ್ಲಿ ಈ ವರ್ಷ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.






