ದೇಶವು ಇಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವನ್ನು ಆಚರಿಸುತ್ತದ್ದು ಈ ಹಿನ್ನೆಲೆ ಆಜಾದಿ ಗೌರವ್ ಯಾತ್ರವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ತ್ಯಗಾ ಬಲಿದಾವನ್ನು ಸ್ವಯಂ ಗೀಳು ಸರ್ಕಾರ ಕ್ಷುಲಕಗೊಳಿಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ರಾಜಕೀಯ ಲಾಭಕ್ಕಾಗಿ ಇಂತಹ ಪ್ರಯತ್ನಗಳನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಎಂದಿದ್ದಾರೆ.
1947ರಲ್ಲಿ ದೇಶ ವಿಭಜನೆಗೆ ಕಾರಣವಾದ ಎನ್ನಲಾದ ವಿಡಿಯೋವನ್ನು ಭಾನುವಾರ ಬಿಜೆಪಿ ಬಿಡುಗಡೆ ಮಾಡಿದ್ದು ಅದರಲ್ಲಿ ದೇಶದ ಮೊದಲ ಪ್ರಧಾನ ಮಂತ್ರಿ ದಿ|| ಜವಹರಲಾಲ್ ನೆಹರೂ ಹಾಗೂ ಮೊಹಮ್ಮದ್ ಅಲಿ ಜಿನ್ನಾ ಒಟ್ಟಿಗಿರುವುದನ್ನು ತೋರಿಸಲಾಗಿತ್ತು ಇದಾದ ಒಂದು ದಿನದ ಬಳಿಕ ಸೋನಿಯಾ ಗಾಂಧಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ಭಾನುವಾರ ಕರ್ನಾಟಕ ಸರ್ಕಾರ ಪ್ರಕಟಿಸಿದ್ದ ಜಾಹೀರಾತಿನಲ್ಲಿ ನೆಹರೂ ಪೋಟೋವನ್ನು ಉದ್ದೇಶಪೂರ್ವಕವಾಗಿ ಕೈಬಿಟ್ಟಿರುವುದನ್ನು ಖಂಡಿಸಿರುವ ಕರ್ನಾಟಕ ಬಿಜೆಪಿ ಸರ್ಕಾರದ ಕ್ರಮವನ್ನ ಕರುಣಾಜನಕ ಎಂದು ಬಣ್ಣಿಸಿದ್ದಾರೆ.
ತಮ್ಮ ಭಾಷಣದುದ್ದಕ್ಕೂ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಸೋನಿಯಾ, ಕಳೆದ 75 ವರ್ಷಗಳಲ್ಲಿ ನಾವು ಸಾಧಿಸಿರುವುದು ಅಪಾರ. ಆದರೆ, ಇಂದು ಆಡಳಿತ ನಡೆಸುತ್ತಿರುವ ಸ್ವಾಭಿಮಾನ ಸರ್ಕಾರವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಸಾಧನೆಗಳನ್ನು ಕ್ಷುಲಕಗೊಳಿಸಲು ಮುಂದಾಗಿದೆ. ಅದನ್ನು ನಾವು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸೋನಿಯಾ ಹೇಳಿದ್ದಾರೆ.
ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನ ತಿರುಚಿ ತಪ್ಪಾಗಿ ನಿರೂಪಿಸುವುದನ್ನು ನಾವು ವಿರೋಧಿಸುತ್ತೇವೆ, ಜವಾಹರಲಾಲ್ ನೆಹರೂ, ಮಹಾತ್ಮ ಗಾಂಧಿ, ಚಂದ್ರಶೇಖರ್ ಅಜಾದ್, ಅಬ್ದುಲ್ ಕಲಾಂ ಅಂತಹವರನ್ನು ಬಿಜೆಪಿಯವರು ರಾಜಕೀಯ ದುರುದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದಿದ್ದಾರೆ.
ಕಳೆದ 75 ವರ್ಷಗಳಲ್ಲಿ ದೇಶದ ಪ್ರತಿಭಾವಂತರ ಪರಿಶ್ರಮದಿಂದ ವಿಜ್ಞಾನ, ಶಿಕ್ಷಣ, ಆರೋಗ್ಯ ಹಾಗೂ ಮಾಹಿತಿ ತಂತ್ರಜ್ಞಾನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಅಳಿಸಲಾಗದ ಛಾಪನ್ನು ಮೂಡಿಸಿದೆ.
ದೂರದೃಷ್ಟಿ ಉಳ್ಳಂತಹ ನಾಯಕರ ನಾಯಕತ್ವ ಭಾರತವು ಮುಕ್ತ ನ್ಯಾಯಸಮತ್ತ ಪಾರದರ್ಶಕ ಚುನಾವಣೆ ವ್ಯವಸ್ಥೆಯನ್ನು ಸ್ಥಾಪಿಸಿ ಮತ್ತೊಂದೆಡೆ ಸಾಂವಿಧಾನಿಕ ಸಂಸ್ಥೆಗಳನ್ನು ಬಲಪಡಿಸುವ ಕೆಲಸ ಮಾಡಿತ್ತು.
ಭಾರತವು ಭಾಷೆ, ಧರ್ಮ ಹಾಗೂ ಬಹುತ್ವದಲ್ಲಿ ಅನಿಸರಿಸುವ ಪ್ರಮುಖ ದೇಶವಾಗಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.