• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಬಿಜೆಪಿ ಸರ್ಕಾರ ಬರೀ ಕಾರ್ಪೊರೇಟ್ ಕಂಪನಿಗಳ ಪರ : ಸಿದ್ದರಾಮಯ್ಯ

Any Mind by Any Mind
February 26, 2022
in ಇದೀಗ
0
ಡಿ.13ರಿಂದ ವಿಧಾನಮಂಡಲ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದರಾಮಯ್ಯ ಸಿದ್ಧತೆ; ಕಾಂಗ್ರೆಸ್ ತಂತ್ರಕ್ಕೆ ಬೊಮ್ಮಾಯಿ ಪ್ರತಿತಂತ್ರ
Share on WhatsAppShare on FacebookShare on Telegram

ಬಿಜೆಪಿ ಸರ್ಕಾರ (BJP Goverment) ಬರೀ ಕಾರ್ಪೊರೇಟ್ ಕಂಪನಿಗಳ ಪರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ADVERTISEMENT

ಹೌದು, ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಒಕ್ಕೂಟ (ದಸಂಸ ಒಕ್ಕೂಟ) (dalita sangharsha samithi) ಬೆಂಗಳೂರಿನ ಲಿಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಎಸ್ ಸಿ ಪಿ/ ಟಿ ಎಸ್ ಪಿ ಕಡ್ಡಾಯ ಅನುಷ್ಠಾನ” ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಅಂತಾರೆ ಮೋದಿ (Modi ). ಕಹಾ ಹೈ ಮೋದಿ ಸಬ್ ಕಾ ಸಾತ್ ಸಬ್ ಕಾ ವಿನಾಶ್ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಸರ್ಕಾರ ಎಸ್ ಸಿಪಿ/ ಟಿಎಸ್ ಪಿ ಕಾಯ್ದೆ ಪರ ಇದೆಯೇ?. ನಾನು ಸಿಎಂ ಆಗಿದ್ದಾಗ ಮಂಡಿಸಿದ್ದ ಬಜೆಟ್ 2 ಲಕ್ಷ ೨ ಸಾವಿರ ಕೋಟಿ. ಆಗ ಎಸ್ ಸಿಪಿ ಎಸ್ ಟಿಪಿಗೆ ಇಟ್ಟಿದ್ದ ಹಣ ೨೯ ಸಾವಿರ ಕೋಟಿ. ಈಗ ಬಜೇಟ್ ಗಾತ್ರ 2ಲಕ್ಷ 47 ಸಾವಿರ 207 ಕೋಟಿ. ಆದರೆ scp, tsp ಗೆ ಇಟ್ಟ ಹಣ 26 ಸಾವಿರ ಕೋಟಿ ಮಾತ್ರ. ಬಿಜೆಪಿ ಪರಿಶಿಷ್ಟರ ಕಲ್ಯಾಣದ ಪರವಾಗಿ ಇಲ್ಲ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಸರ್ಕಾರ ಯಾರ ಪರ ಇದೆ. ಬರೀ ಕಾರ್ಪೊರೇಟ್ ಕಂಪನಿಗಳ (Corporate Company) ಪರ. ಮೋದಿಗೆ ವ್ಯಂಗ್ಯ ಮಾಡಿದ ಸಿದ್ದರಾಮಯ್ಯ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಅಂತಾರೆ ಮೋದಿ. ಕಹಾ ಹೈ ಮೋದಿ ಸಬ್ ಕಾ ಸಾತ್ ಸಬ್ ಕಾ ವಿನಾಶ್ ಎಂದು ವ್ಯಂಗ್ಯವಾಡಿದ್ದಾರೆ.

ಎಸ್ ಟಿಪಿ, ಟಿಎಸ್ ಪಿ ಕಾಯಿದೆಯ ಅನುಷ್ಠಾನ ಕುರಿತು ದೇಶದೆಲ್ಲೆಡೆ ಚರ್ಚೆ ಆಗಬೇಕು.

ಅಂಬೇಡ್ಕರ್ ಒಂದು ಮಾತು ಹೇಳಿದ್ದರು , ಮತ ಹಾಕುವ ಸ್ವಾತಂತ್ರ್ಯ ಸಿಕ್ಕರೆ ಸಾಲದು. ಸಾಮಾಜಿಕ ಸ್ವಾತಂತ್ರ್ಯ (Social Freedom) ಸಿಗಬೇಕು ಎಂದು. ಆಗ ಮಾತ್ರ ಜಾತ್ಯಾತೀತ ಸಮಾಜ ನಿರ್ಮಾಣವಾಗುತ್ತೆ. ನಮ್ಮ ಸಮಾಜ ಅಸಮಾನತೆಯಿಂದ ಕೂಡಿದೆ. ಈ ಅಸಮಾನತೆ ಹೋಗಲಾಡಿಸಬೇಕು. ದೇಶದ ಸಂಪತ್ತು, ಶಿಕ್ಷಣ ಹಂಚಿಕೆಯಾಗಬೇಕು. ಶಿಕ್ಷಣ ಬಹಳ ಮುಖ್ಯ ಎಂದೂ ಅಂಬೇಡ್ಕರ್ ಅವರು ಹೇಳಿದ್ದರು. ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕು ಅಂದ್ರೆ ಶಿಕ್ಷಣ ಮುಖ್ಯ ಎಂದು ಹೇಳಿದ್ದಾರೆ.

೨೪.೧ % ಎರಡು ಸಮುದಾಯಕ್ಕೆ ಮೀಸಲಾತಿ ಇದೆ.೨೦೧೩ ರಲ್ಲಿ ಈ ಕಾಯಿದೆ ಜಾರಿಗೆ ಬಂತು. ಕಾಯಿದೆ ಜಾರಿಗೆ ತಂದ ದೇಶದಲ್ಲೇ ಎರಡನೇ ರಾಜ್ಯ ನಮ್ಮದು. ಬಸವಣ್ಣನವರ ವಚನಗಳನ್ನ ೮೦೦ ವರ್ಷಗಳಿಂದ ಹೇಳ್ತಾನೇ ಬಂದಿದ್ದಾರೆ. ಇವನಾರವ ಇವನಾರವ ಎಂದೆಣಿಸದಿರಯ್ಯ, ಇವ ನಮ್ಮವ ಇವ ನಮ್ಮವ, ನಮ್ಮ ಮನೆ ಮಗನೆಂದಿಣಸಯ್ಯ ಎಂದು ವಚನ ಹೇಳ್ತಾರೆ.. ನಂತರ ಪಕ್ಕಕ್ಕೆ ಬಂದು ನೀನು ಯಾವ ಜಾತಿ ಅಂತ ಕೇಳ್ತಾರೆ. ಮೇಲ್ ಜಾತಿನಾ, ಕೆಳ ಜಾತಿನಾ ಎಂದು ಕೇಳ್ತಾರೆ ಎಂದು ಕಿಡಿಕಾರಿದರು.

ನಮ್ಮಲ್ಲಿ ಗುಲಾಮಗಿರಿ, ಜಾತಿ ವ್ಯವಸ್ಥೆ ಇದೆ. ಗುಲಾಮಗಿರಿ ಮನಸ್ಥಿತಿ ಹೋಗಬೇಕು. ಮೇಲ್ಜಾತಿಯವರು ಬಡವ ಆದ್ರೂ ಗೌರವದಿಂದ ಮಾತನಾಡಿಸುತ್ತಾರೆ. ಆದ್ರೆ ದಲಿತ ಶ್ರೀಮಂತನಾದ್ರೂ ಅವ್ರನ್ನ ಬೇರೆಯದ್ದೇ ರೀತಿ ಮಾತನಾಡಿಸುತ್ತಾರೆ. ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರರಿಗೆ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಮನೆ ಇಲ್ಲದ ದಲಿತರು ಅರ್ಜಿ ಹಾಕಿದಾಗ ಸೂರು ಕೊಡಬೇಕು ಅಂತ ನಾನು ಕಾನೂನು ಮಾಡಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ, ಸಮ್ಮಿಶ್ರ ಸರ್ಕಾರ ಸೇರಿ ಅಧಿಕಾರಕ್ಕೆ ಬಂದು ಮೂರುವರೆ ವರ್ಷ ಆಯ್ತು. ಬಜೆಟ್ ಈಗ ಏನ್ ಮಾಡ್ತಾರೊ ಗೊತ್ತಿಲ್ಲ. ಎಲ್ಲಾದಕ್ಕೂ ದುಡ್ಡು ಇಲ್ಲ ಅಂತಾರೆ. ಏನೇ ಕೇಳಿದ್ರು ಕೋವಿಡ್ ಅಂತಾರೆ. ಕೋವಿಡ್ ಗೆ ಖರ್ಚಾಗಿದ್ದು ೮ ಸಾವಿರ ಕೋಟಿ . ಕೇಂದ್ರ ಸರ್ಕಾರದಿಂದ ಬರುವ ಹಣಕಾಸು ನೆರವಿನ ಪ್ರಮಾಣ ಕಡಿಮೆ ಆಗ್ತಿದೆ. ಮೋದಿ ಬಂದ ಮೇಲೆ ಹೀಗಾಗ್ತಿದೆ. ರಾಜ್ಯದಿಂದ ಮೂರು ಲಕ್ಷ ಕೋಟಿ ತೆರಿಗೆ ಸಂಗ್ರಹ ಆಗುತ್ತಿದೆ. ಅನುದಾನ ಸೇರಿ ಮೊದಲು ನಮಗೆ ಕೇಂದ್ರದ ಪಾಲು ೮೦ ಸಾವಿರ ಕೋಟಿ ಬರ್ತಿತ್ತು. ಈಗ 40 ಸಾವಿರ ಕೋಟಿ ಬರ್ತದೆ. ಕೇಂದ್ರದಿಂದ ಹಣ ತರದೆ ಇಲ್ಲಿ ಕೋವಿಡ್ ಕಾರಣ ಹೇಳ್ತಾರೆ. ನಮಗೆ ಕೇಂದ್ರದಿಂದ ಸರಿ ಸುಮಾರು 1ಲಕ್ಷ 20 ಸಾವಿರ ಕೋಟಿ ಬರಬೇಕು. ಮುಖ್ಯಮಂತ್ರಿ, ಮಂತ್ರಿಗಳು, ಸಂಸದರು ಪ್ರಧಾನಿಯವರನ್ನು ಕೇಳದೇ ಹೆದರಿಕೊಂಡು ಹೇಡಿಗಳ ತರ ಕುಳಿತಿದ್ದಾರೆ ಎಂದು ಕಿಡಿಕಾರಿದ್ದಾರೆ.

Tags: BJPBJP GovernmentCongress PartyCorporate CompanyCovid 19dalita sangharsha samithiModiSocial Freedomಎಚ್ ಡಿ ಕುಮಾರಸ್ವಾಮಿಎಸ್ ಸಿ ಪಿ/ ಟಿ ಎಸ್ ಪಿಕರೋನಾಕಾರ್ಪೊರೇಟ್ ಕಂಪನಿಕೆಳ ಜಾತಿಕೋವಿಡ್-19ಗುಲಾಮಗಿರಿಜಾತಿ ವ್ಯವಸ್ಥೆದಲಿತ ಸಂಘರ್ಷ ಸಮಿತಿದಸಂಸ ಒಕ್ಕೂಟನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಬಿಜೆಪಿ ಸರ್ಕಾರಮೇಲ್ ಜಾತಿಸಾಮಾಜಿಕ ಸ್ವಾತಂತ್ರ್ಯಸಿದ್ದರಾಮಯ್ಯ
Previous Post

Hubli : ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ!

Next Post

ಎಲ್ಗಾರ್ ಪರಿಷತ್ ಪ್ರಕರಣ : ಸಾಮಾಜಿಕ ಹೋರಾಟಗಾರ ವರವರ ರಾವ್ ಜಾಮೀನು ಅವಧಿ ಮಾರ್ಚ್ 3 ವರೆಗೆ ವಿಸ್ತರಣೆ

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
Next Post
ಎಲ್ಗಾರ್ ಪರಿಷತ್ ಪ್ರಕರಣ : ಸಾಮಾಜಿಕ ಹೋರಾಟಗಾರ ವರವರ ರಾವ್ ಜಾಮೀನು ಅವಧಿ ಮಾರ್ಚ್ 3 ವರೆಗೆ ವಿಸ್ತರಣೆ

ಎಲ್ಗಾರ್ ಪರಿಷತ್ ಪ್ರಕರಣ : ಸಾಮಾಜಿಕ ಹೋರಾಟಗಾರ ವರವರ ರಾವ್ ಜಾಮೀನು ಅವಧಿ ಮಾರ್ಚ್ 3 ವರೆಗೆ ವಿಸ್ತರಣೆ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada