• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ನಂದಿನಿ ಉತ್ಪನ್ನಗಳ ವಿರೋಧಿಗಳು

Any Mind by Any Mind
April 9, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ನಂದಿನಿ ಉತ್ಪನ್ನಗಳ ವಿರೋಧಿಗಳು
Share on WhatsAppShare on FacebookShare on Telegram

ಬೆಂಗಳೂರು :ಏ.೦೯: ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ವಿರುದ್ಧದ ದಾಳಿ. ನಂದಿನಿ ಬ್ರ್ಯಾಂಡ್ ನಲ್ಲಿ ಯಾವ ಲೋಪದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನಂದಿನಿ ವಿರುದ್ಧ ನಿಂತಿದ್ದಾರೆ. ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಈ ಉತ್ಪನ್ನಗಳ ಮೇಲೆ ಕನ್ನಡ ಭಾಷೆ ಬಳಸಲಾಗಿದೆ ಎಂಬುದು ನಿಮ್ಮ ಸಮಸ್ಯೆಯೇ? ಎಂದು ಎಐಸಿಸಿ ವಕ್ತಾರರಾದ ಗೌರವ್ ವಲ್ಲಭ್ ಪ್ರಶ್ನಿಸಿದರು.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ನಂದಿನ ಉತ್ಪನ್ನಗಳ ರುಚಿ ನೋಡಬೇಕು. ಇದು ಕರ್ನಾಟಕದ ಹೆಮ್ಮೆ. ಆರೂವರೆ ಕೋಟಿ ಜನರ ಈ ಹೆಮ್ಮೆಯನ್ನು ಯಾಕೆ ತುಳಿಯಲು ಹೊರಟಿದ್ದೀರಿ? ಇದರಿಂದ ಏನು ಸಾಧಿಸಲು ಹೊರಟಿದ್ದೀರಿ? ಅಮಿತ್ ಶಾ ಅವರೇ ಸಹಕಾರಿ ಸಚಿವಾಲಯದ ಮೂಲ ಉದ್ದೇಶವೇನು? ನೀವು ಸಹಕಾರ ಕ್ಷೇತ್ರದಲ್ಲೂ ಸ್ಪರ್ಧೆ ತರಲು ಹೊರಟಿದ್ದೀರಿ. ಉದ್ದೇಶಪೂರ್ವಕವಾಗಿ ಇದನ್ನು ಯಾಕೆ ಮಾಡುತ್ತಿದ್ದೀರಿ. ನಂದಿನಿ ಆಶ್ರಯದಲ್ಲಿ ಸುಮಾರು 2 ಕೋಟಿ ಜನರು ಆಶ್ರಯ ಪಡೆದಿದ್ದಾರೆ.

ಮೋದಿ ಅವರೇ ಇನ್ನು ಒಂದು ತಿಂಗಳು ಮೂರು ದಿನಗಳು ಮಾತ್ರ ಬಾಕಿ ಇವೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಂತರ ಕರ್ನಾಟಕದ ಹೆಮ್ಮೆಯ ಸಂಸ್ಥೆಗಳನ್ನು ಯಾರೂ ಕೂಡ ಮುಟ್ಟಲು ಸಾಧ್ಯವಿಲ್ಲ. ದೆಹಲಿಯಲ್ಲಿ ಕೂತು ಕರ್ನಾಟಕದ ಹೆಮ್ಮೆಯ ಸಂಸ್ಥೆಗಳ ಭವಿಷ್ಯ ನಿರ್ಧರಿಸಲು ಬಿಡುವುದಿಲ್ಲ. ನಂದಿನಿ ಬ್ರ್ಯಾಂಡ್ ರೈತರು, ಕಾರ್ಮಿಕರ ಪರಿಶ್ರಮದ ಫಲವಾಗಿದೆ. ಪ್ರತಿಯೊಬ್ಬ ಕನ್ನಡಿಗನೂ ಈ ಬ್ರ್ಯಾಂಡ್ ಬಗ್ಗೆ ಹೆಮ್ಮೆ ಹೊಂದಿದ್ದಾನೆ. ಮೋದಿ ಅವರು ಒಮ್ಮೆ ಇದರ ರುಚಿ ನೋಡಲಿ, ಅವರು ತಮ್ಮ ನಿಲುವು ಬದಲಿಸಬಹುದು. ರಾಜ್ಯದಿಂದ ಆಯ್ಕೆಯಾಗಿರುವ ಸಂಸದರೂ ಇದಕ್ಕೆ ಉತ್ತೇಜನ ನೀಡುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಕರ್ನಾಟಕದ ʼನಂದಿನಿʼ ವಿನಾಶಕ್ಕೆ ಬಿಜೆಪಿ ಮುಂದಾಗಿದೆ :

ನಂದಿನಿ ವಿನಾಶಕ್ಕೆ ಬಿಜೆಪಿ ಯಾಕೆ ಮುಂದಾಗಿದೆ ಎಂದು ಕೇಳಿದಾಗ, ‘ಈ ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಎಂಬುದು ನನ್ನ ಮೂಲಭೂತ ಪ್ರಶ್ನೆ. ಇದು ರುಚಿ ಇಲ್ಲವೇ? ತಾಜವಾಗಿಲ್ಲವೇ? ಮಾರುಕಟ್ಟಿಯಲ್ಲಿ ಮಾರಾಟವಾಗುತ್ತಿಲ್ಲವೇ? ಇದನ್ನು ಸೇವಿಸುತ್ತಿರುವ ಜನರು ಇದನ್ನು ಆಸ್ವಾದಿಸುತ್ತಿಲ್ಲವೇ? ಆಗಾದರೆ ಯಾವ ಕಾರಣಕ್ಕೆ ನಂದಿನಿಗೆ ಜತೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ. ಸಹಕಾರ ಇಲಾಖೆ ಮೂಲ ಉದ್ದೇಶವೇನು? ನಾವು ಯಾವುದೇ ಇತರೆ ಸಂಸ್ಥೆಗಳ ವಿರುದ್ಧವಿಲ್ಲ. ಬಿಜೆಪಿಯವರಿಗೆ ಇರುವ ಸಮಸ್ಯೆ ಎಂದರೆ ಈ ಉತ್ಪನ್ನಗಳ ಮೇಲೆ ಕನ್ನಡವನ್ನು ಬಳಸಲಾಗಿದೆ. ಅದರ ಹೊರತಾಗಿ ಬಿಜೆಪಿಗರು ಆಕ್ಷೇಪಿಸುವಂತಹ ಯಾವುದೇ ಅಂಶಗಳು ಇಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಅಜೆಂಡಾ ಇರಬಹುದು. ಆದರೆ ರಾಜ್ಯದ ಸಂಸದರಿಗೆ ಏನಾಗಿದೆ? ರಾಜ್ಯದ ಜನರ ಪಾಲಿಗೆ ನಂದಿನಿ ಯಾವ ಸ್ಥಾನದಲ್ಲಿದ್ದಾಳೆ ಎಂಬುದನ್ನು ಪ್ರತಿಯೊಬ್ಬ ಕನ್ನಡಿಗರು 2024ರಲ್ಲಿ ಬಿಜೆಪಿಯವರಿಗೆ ಉತ್ತರ ನೀಡುತ್ತಾರೆ. ಮುಂದಿನ ತಿಂಗಳು ಕರ್ನಾಟಕದ ಹೆಮ್ಮೆಯನ್ನು ಸಂರಕ್ಷಣೆ ಮಾಡಲಾಗುವುದು’ ಎಂದು ತಿಳಿಸಿದರು.

Tags: 2023 election2023 Election ResultAICCamulassembly electionBJPBOMMAIBSYCMCmIbrahimctraviDKShivakumarElection Commissionelection resultGaurav VallabhHDDHDKJanasankalpa YatreJDSKannadaKarnataka ElectionKPCCkumaraswamyMallikarjun KhargeModiNalin Kumar KateelNandininandinivsamulNewsPancharatna YatrePMModiPratidhvanisiddaramaiahState ElectionVijayasankalpa
Previous Post

ಬಂಡಿಪುರದಲ್ಲಿ ಪ್ರಧಾನಿ ಮೋದಿ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕ ಪ್ರಾಣಿಗಳ ಫೋಟೋ ಇಲ್ಲಿದೆ ನೋಡಿ

Next Post

ಅಂದು ಸಂವಿಧಾನ ವಿರೋಧಿಸಿದ್ದ RSS ಇಂದು ಅದನ್ನೇ ಗುರಾಣಿಯನ್ನಾಗಿಸಿಕೊಂಡಿದೆ : ಸಿದ್ದರಾಮಯ್ಯ ಕಿಡಿ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಅಂದು ಸಂವಿಧಾನ ವಿರೋಧಿಸಿದ್ದ RSS ಇಂದು ಅದನ್ನೇ ಗುರಾಣಿಯನ್ನಾಗಿಸಿಕೊಂಡಿದೆ : ಸಿದ್ದರಾಮಯ್ಯ ಕಿಡಿ

ಅಂದು ಸಂವಿಧಾನ ವಿರೋಧಿಸಿದ್ದ RSS ಇಂದು ಅದನ್ನೇ ಗುರಾಣಿಯನ್ನಾಗಿಸಿಕೊಂಡಿದೆ : ಸಿದ್ದರಾಮಯ್ಯ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada