• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ತಾಖತ್ ಇಲ್ಲ : ಸಿದ್ದರಾಮಯ್ಯ

Any Mind by Any Mind
March 11, 2024
in Top Story, ಕರ್ನಾಟಕ
0
ಸಂವಿಧಾನ ಬದಲಾವಣೆ.. ಬಿಜೆಪಿ ತಟಸ್ಥ.. ತಿರುಗಿಬಿದ್ದ ಮುಖ್ಯಮಂತ್ರಿ..!
Share on WhatsAppShare on FacebookShare on Telegram

ಬೆಂಗಳೂರು (Bengaluru): ಸಂಸದ ಅನಂತಕುಮಾರ ಹೆಗಡೆ (AnanthKumar Hegde) ಸಂವಿಧಾನಕ್ಕೆ (Constitution) ವಿರುದ್ಧವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು ಎಂದು ಮುಖ್ಯಮಂತ್ರಿ‌‌‌ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.‌

ADVERTISEMENT

ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ (RSS) ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಖತ್ ಇಲ್ಲ ಅಷ್ಟೆ ಎಂದು ಲೇವಡಿ‌ ಮಾಡಿದ್ದಾರೆ.‌

ನರೇಂದ್ರ ಮೋದಿಯವರೂ (Narendra Modi) ಸೇರಿದಂತೆ ಬಿಜೆಪಿ (BJP) ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ (Loksabha Election)/ನಡೆಯಲಿ ಎಂದಿದ್ದಾರೆ.‌

ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ, ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಮನುಸ್ಮೃತಿಯನ್ನು ಬಹಿರಂಗವಾಗಿ ಸಮರ್ಥಿಸಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಗಲೂ ಬಿಜೆಪಿ, ಹೆಗಡೆ ವಿರುದ್ಧ ಕ್ರಮ ಕೈಗೊಂಡಿಲ್ಲ. ಯಾಕೆಂದರೆ ಹೆಗಡೆ ಮಾತುಗಳು ಬಿಜೆಪಿ ಮತ್ತು ಆರ್ ಎಸ್ ಎಸ್ ನ ಮನದ ಮಾತುಗಳೂ ಆಗಿತ್ತು ಎಂದಿದ್ದಾರೆ.‌

ಅನಂತಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ನೀಡುತ್ತಿರುವ ಹೇಳಿಕೆಗೆ ಅವರ ಬಿಜೆಪಿಯ ನಿಜವಾದ ‘‘ಹೈಕಮಾಂಡ್’’ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಪೂರ್ಣ ಬೆಂಬಲ ಇದೆ. ಆರ್.ಎಸ್.ಎಸ್ ಬಹಿರಂಗವಾಗಿ ಸಂವಿಧಾನಕ್ಕೆ ಬದ್ಧತೆ ಸಾರಿದ್ದರೂ ಅಂತರಂಗದಲ್ಲಿ ಎಂದೂ ಸಂವಿಧಾನವನ್ನಾಗಲಿ, ಅದರ ರಚನಕಾರರಾದ ಬಾಬಾಸಾಹೇಬ್ ಅಂಬೇಡ್ಕರ್ (Ambedkar) ಅವರನ್ನು ಒಪ್ಪಿಕೊಂಡಿಲ್ಲ. ಹೆಗಡೆ ಹೇಳಿರುವುದನ್ನೇ ಕಾಲಕಾಲಕ್ಕೆ ಆರ್.ಎಸ್.ಎಸ್ ನಾಯಕರು ಹೇಳಿದ್ದರು. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್.ಎಸ್.ಎಸ್ ಎಂದು ಹೇಳಿದ್ದಾರೆ.

ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕಾಗಿ ಹಿಂದುತ್ವ ಅಪಾಯದಲ್ಲಿದೆ ಎಂಬ ಹುಸಿಭೀತಿಯನ್ನು ಜನರಲ್ಲಿ ಹುಟ್ಟಿಸಿ ಕೋಮುಭಾವನೆಯನ್ನು ಕೆರಳಿಸಿ ಮತಗಳ ಧ್ರುವೀಕರಣಗೊಳಿಸುವುದು ಅವರ ಉದ್ದೇಶವಾಗಿದೆ. ಇದಕ್ಕೆ ಆರ್.ಎಸ್.ಎಸ್ ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಅವರು ಲೆಕ್ಕಕ್ಕಿಟ್ಟಿಲ್ಲ.

ಕಾರವಾರ ಕ್ಷೇತ್ರದಲ್ಲಿ ಹಿಂದುಳಿದ ಜಾತಿಗಳು, ಅಲ್ಪಸಂಖ್ಯಾತರು ಮತ್ತು ದಲಿತರು ಬಹುಸಂಖ್ಯೆಯಲ್ಲಿದ್ದಾರೆ. ಮೀಸಲಾತಿಯ ರದ್ದುಗೊಳಿಸುವ ದುರುದ್ದೇಶದಿಂದಲೇ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನದ ಬದಲಾವಣೆಯ ಬಗ್ಗೆ ವಕಾಲತು ಮಾಡುತ್ತಿದ್ದಾರೆ ಎಂಬ ಅರಿವು ಅವರಲ್ಲಿ ಮೂಡಬೇಕಾಗಿದೆ. ಹೆಗಡೆಯವರಿಗೆ ಮಾತ್ರವಲ್ಲ ಇಂತಹ ಮನುಷ್ಯ ವಿರೋಧಿ ನಡೆಯನ್ನು ಬೆಂಬಲಿಸುತ್ತಿರುವ ಬಿಜೆಪಿಗೂ ಸರಿಯಾದ ಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ.

#karnataka #bengaluru #Constitution #ananthkumarhegde #siddaramaiah #bjp #congress

Previous Post

ಲೋಕಾಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಕಣಕ್ಕಿಳಿಯುತ್ತಾರಾ ಡಾ.ಕೆ.ಸುಧಾಕರ್?

Next Post

ಪ್ರಜಾಪ್ರಭುತ್ವ ಸರಿ ದಿಕ್ಕಿನಲ್ಲಿ ಸಾಗುತ್ತಿದ್ಯಾ..? ಅನುಮಾನಕ್ಕೆ ಕಾರಣವಾಯ್ತು ಈ ಬೆಳವಣಿಗೆ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಪಾರದರ್ಶಕತೆ ಉತ್ತರದಾಯಿತ್ವ- ಸಾಂವಿಧಾನಿಕ ನೈತಿಕತೆ

ಪ್ರಜಾಪ್ರಭುತ್ವ ಸರಿ ದಿಕ್ಕಿನಲ್ಲಿ ಸಾಗುತ್ತಿದ್ಯಾ..? ಅನುಮಾನಕ್ಕೆ ಕಾರಣವಾಯ್ತು ಈ ಬೆಳವಣಿಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada