• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಐಎಸ್’ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in ಕರ್ನಾಟಕ, ರಾಜಕೀಯ
0
ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟದ ಬಗ್ಗೆ ತನಿಖೆ ಆಗಬೇಕು: ಡಿಕೆ ಶಿವಕುಮಾರ್‌
Share on WhatsAppShare on FacebookShare on Telegram

ಭದ್ರಾವತಿ: ಬಿಜೆಪಿ ನಾಯಕರು ಕೊಟ್ಟ  ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ಮಾಡಲು ವಿಫಲರಾಗಿದ್ದಾರೆ. ಹೀಗಾಗಿ ಬಿಜೆಪಿಯವರು ಈ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ.

ADVERTISEMENT

ಭದ್ರಾವತಿಯಲ್ಲಿ ಪ್ರಜಾಧ್ವನಿ ಸಮಾವೇಶಕ್ಕೂ ಮುನ್ನ ವಿಐಎಸ್ಎಲ್ ಕಾರ್ಮಿಕರ ಜತೆ ಚರ್ಚೆ ಮಾಡಿ ಅವರ ಅಳಲು ಕೇಳಿದ ಡಿ.ಕೆ. ಶಿವಕುಮಾರ್, ಬಿಜೆಪಿ ಸರ್ಕಾರದ ನಿರ್ಲಕ್ಷ್ಯತನದ ಬಗ್ಗೆ ಕಿಡಿಕಾರಿದರು. ಅಲ್ಲದೆ ಈ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಪುನರಾರಂಭ ಮಾಡಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ಸಂಸದರೂ ಸೇರಿ ರಾಜ್ಯದಿಂದ 25 ಬಿಜೆಪಿ ಸಂಸದರಿದ್ದಾರೆ. ಆದರೂ ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿರುವ ಈ ಕಾರ್ಖಾನೆ ಉಳಿಸಲು ಪ್ರಯತ್ನಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ ಸಾರ್ವಜನಿಕ ಉದ್ದಿಮೆಗಳನ್ನು ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿದೆ. ಈಗ ಈ ಕಾರ್ಖಾನೆ ಮಾರಾಟ ಮಾಡಲು ಮುಂದಾಗಿದ್ದು, ಖರೀದಿ ಮಾಡಲು ಯಾರೂ ಬಂದಿಲ್ಲ ಎಂದು ಈಗ ಮುಚ್ಚಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಉಕ್ಕಿನ ಕಾರ್ಖಾನೆ ಹಾಗೂ ಕಾಗದ ಕಾರ್ಖಾನೆ ಎರಡು ಸರ್ಕಾರದ ಸ್ವಾಮ್ಯದಲ್ಲೇ ಮುಂದುವರಿಯಬೇಕು, ಅವುಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಖಾಸಗಿಯವರಿಂದ ನಡೆಸಲಾಗುವ ಕಾರ್ಖಾನೆಯನ್ನು ಸರ್ಕಾರ ಯಾಕೆ ನಡೆಸಲು ಸಾಧ್ಯವಾಗುತ್ತಿಲ್ಲ? ಅಂದರೆ ನಿಮಗೆ ಆಡಳಿತ ನಡೆಸಲು ಆಗುತ್ತಿಲ್ಲ ಎಂಬುದು ಸಾಬೀತಾಗುತ್ತಿದೆ ಎಂದು ಹರಿಹಾಯ್ದರು.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ, ಎಷ್ಟು ಯೋಜನೆ ಜಾರಿಯಾಗಿವೆ ಎಂದು ಯಡಿಯೂರಪ್ಪ, ಸಂಸದ ರಾಘವೇಂದ್ರ ಹಾಗೂ ಈಶ್ವರಪ್ಪ ಅವರು ಉತ್ತರಿಸಬೇಕು ಎಂದರು.

ಯಡಿಯೂರಪ್ಪ ವಿಫಲರಾದರೂ ಎಂದು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಮೇಲೆ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ನಾವು ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುವುದಾಗಿ ಹೇಳಿದ್ದರು. ಈಗ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ  ಚುನಾವಣೆ ಎದುರಿಸಲಾಗುವುದು ಎಂದಿದ್ದಾರೆ. ಆ ಮೂಲಕ ಬೊಮ್ಮಾಯಿ ಅವರ ಆಡಳಿತವೂ ವಿಫಲವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನಾಯಕತ್ವ ಇಲ್ಲದ ಬಿಜೆಪಿ ಈಗ ಮೋದಿ ಅವರ ಮುಂದಿಟ್ಟು ಚುನಾವಣೆ ಮಾಡುತ್ತಿದೆ.

ಪಕ್ಷದ ಟಿಕೆಟ್ ವಿಚಾರವಾಗಿ ಕೇಳಿದಾಗ, ಈಗಾಗಲೇ ಎರಡು ಸಭೆ ಮಾಡಿದ್ದೇವೆ. ಇನ್ನು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಬೇಕು. ನಮ್ಮ ಪಕ್ಷದ ಪ್ರಕ್ರಿಯೆ ಮೂಲಕ ಟಿಕೆಟ್ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

40% ಕಮಿಷನ್ ನಿಲ್ಲಿಸಿದರೆ ನಮ್ಮ ಯೋಜನೆ ಜಾರಿಗೊಳಿಸಬಹುದು

ಪಕ್ಷದ ಮುಂದಿನ ಘೋಷಣೆಗಳ ಬಗ್ಗೆ ಕೇಳಿದಾಗ, ನಾವು ಈಗಾಗಲೇ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಿದ್ದೇವೆ. ಬಿಜೆಪಿಯವರ 40% ಕಮಿಷನ್ ನಿಲ್ಲಿಸಿದರೆ ನಮ್ಮ ಯೋಜನೆಗಳನ್ನು ಜಾರಿಗೊಳಿಸಬಹುದು. ಇದು ನಮ್ಮ ಸರ್ಕಾರದ ಬದ್ಧತೆ. ಇವರ ಅಕ್ರಮಗಳಿಂದ ದೇಶದಲ್ಲಿ ಕರ್ನಾಟಕಕ್ಕೆ ಕಳಂಕ ಬಂದಿದೆ. ರಾಜ್ಯಕ್ಕೆ ದಕ್ಷ ಆಡಳಿತ ನೀಡಬೇಕು ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ತಿಳಿಸಿದರು.

ವಿಚಾರಣೆ ಏನಿದ್ದರೂ ವಿರೋಧ ಪಕ್ಷಗಳ ನಾಯಕರಿಗೆ ಸೀಮಿತ

ಅಕ್ರಮ ಆಸ್ತಿ ವಿಚಾರವಾಗಿ ಚಾರ್ಜ್ ಶೀಟ್ ಸಲ್ಲಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಈ ವಿಚಾರವಾಗಿ ದಿನನಿತ್ಯ ನನಗೆ ನೊಟೀಸ್ ನೀಡುತ್ತಿದ್ದಾರೆ. ಅಧಿಕಾರಿಗಳ ಮುಂದೆ ಎಲ್ಲ ಉತ್ತರ ನೀಡಿದ್ದೇನೆ. ನ್ಯಾಷನಲ್ ಹೆರಾಲ್ಡ್ ವಿಚಾರವಾಗಿ ಉತ್ತರ ನೀಡಿದ್ದೇನೆ. ಆದರೂ 22 ರಂದು ಇಡಿ ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ. ಆಡಳಿತ ಪಕ್ಷದವರು ಎಷ್ಟು ಸಾವಿರ ಕೋಟಿ ಲೂಟಿ ಹೊಡೆದರೂ ಕೇಳುವುದಿಲ್ಲ. ಈ ವಿಚಾರಣೆ ಏನಿದ್ದರೂ ವಿರೋಧ ಪಕ್ಷಗಳ ನಾಯಕರಿಗೆ ಮಾತ್ರ ಸೀಮಿತ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ಕಾರ್ಖಾನೆ ನೌಕಕರಿಂದ ಕಾರ್ಖಾನೆಯ ಸ್ಥಿತಿಗತಿಗಳ ಬಗ್ಗೆ ಹಾಗೂ ಅವರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು.

Tags: Congress Partyಡಿ.ಕೆ. ಶಿವಕುಮಾರ್ಭದ್ರಾವತಿವಿಐಎಸ್ಎಲ್ ಕಾರ್ಖಾನೆ
Previous Post

ಮೈಸೂರು ಜಿಲ್ಲೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಮತದಾನಕ್ಕೆ ಶ್ರಮಿಸೋಣ: ಡಾ. ಕೆ.ವಿ.ರಾಜೇಂದ್ರ

Next Post

ಬೆಂಗಳೂರು: ಆಟೋ ಚಾಲಕನಿಂದ ಕಾರ್ ಚಾಲಕನ ಮೇಲೆ ಹಲ್ಲೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಬೆಂಗಳೂರು: ಆಟೋ ಚಾಲಕನಿಂದ ಕಾರ್ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಆಟೋ ಚಾಲಕನಿಂದ ಕಾರ್ ಚಾಲಕನ ಮೇಲೆ ಹಲ್ಲೆ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada