• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಶ್ರೀಮಂತ ಜನರ ಪಕ್ಷ, ನಾಡಿನ ಅಭಿವೃದ್ಧಿ ಬಗ್ಗೆ ಚಿಂತಿಸುವುದಿಲ್ಲ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in Top Story, ರಾಜಕೀಯ
0
ಬಿಜೆಪಿ ಶ್ರೀಮಂತ ಜನರ ಪಕ್ಷ, ನಾಡಿನ ಅಭಿವೃದ್ಧಿ ಬಗ್ಗೆ ಚಿಂತಿಸುವುದಿಲ್ಲ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಬಿಜೆಪಿ ಶ್ರೀಮಂತ ಜನರ ಪಕ್ಷ, ಅವರು ತಳ ಸಮುದಾಯದ ಜನರ ಬಗ್ಗೆಯಾಗಲೀ, ನಾಡಿನ ಅಭಿವೃದ್ಧಿ ಬಗ್ಗೆಯಾಗಲೀ ಚಿಂತನೆ ಮಾಡುವುದಿಲ್ಲ ಎಂದು  ವಿಪಕ್ಷ ನಾಯಕರಾದ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಇಂದು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ದೇಶದ ಎಲ್ಲಾ ಧರ್ಮಗಳನ್ನು, ಜಾತಿಯ ಜನರನ್ನು ಸಮಾನವಾಗಿ ಕಾಣುವ ಪಕ್ಷ. ಬಾಬಾ ಸಾಹೇಬರು ನೀಡಿರುವ ಸಂವಿಧಾನದವನ್ನು ಗೌರವಿಸಿ, ಅಧಿಕಾರ ಸಿಕ್ಕಾಗ ಅದರ ಧ್ಯೇಯೋದ್ದೇಶಗಳನ್ನು ಈಡೇರಿಸುವ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿ ಮತ್ತು ಜೆಡಿಎಸ್‌ ಗೆ ನಮ್ಮ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ಟೀಕಿಸಿದರು.

ನಾಲ್ಕು ವರ್ಷಗಳಿಂದ ಲೂಟಿ ಹೊಡೆದಿದ್ದಾರೆ

ಎರಡು ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವದ ವಿಚಾರಗಳನ್ನು ಇಟ್ಟುಕೊಂಡು ಭಾವನಾತ್ಮಕವಾಗಿ ಮತ ಪಡೆದಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಹಿಂದುತ್ವ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರಿವಾಗಿದೆ. ಹಾಗಾಗಿ ಈ ಬಾರಿ ಹಣದ ಮೂಲಕ ಅಧಿಕಾರ ಹಿಡಿಯಲು ಹೊರಟಿದ್ದಾರೆ. ಬಿಜೆಪಿಯವರ ಬಳಿ ಟನ್‌ ಗಟ್ಟಲೆ ಲೂಟಿ ಮಾಡಿರುವ ಹಣ ಇದೆ. ಕಳೆದ 4 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನೇ ಮಾಡದೆ ಬರೀ ಲೂಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು.

ಕೋರ್ಟ್ ನಲ್ಲಿ ಎಸಿಬಿ ಸಮರ್ಥಿಸಿ, ಹೊರಗೆ ಸುಳ್ಳು ಹೇಳುವುದು ಆತ್ಮವಂಚನೆ

ನಾವು ಲೋಕಾಯುಕ್ತವನ್ನು ಮುಚ್ಚಿಯೂ ಇರಲಿಲ್ಲ, ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿಯನ್ನೂ ತಂದಿರಲಿಲ್ಲ. ಲೋಕಾಯುಕ್ತರ ಮನೆಯಲ್ಲೇ ಭ್ರಷ್ಟಾಚಾರ ನಡೆಯುತ್ತಿತ್ತು ಎಂಬ ಬಗ್ಗೆ ವರದಿಗಳು ಬಂದಿದ್ದರಿಂದ ಎಸಿಬಿ ರಚನೆ ಮಾಡಿದ್ದೆವು, ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಎಸಿಬಿ ಬೇಡ, ರದ್ದು ಮಾಡಿ ಎಂದು ಆದೇಶ ನೀಡಿತ್ತು. ಎಸಿಬಿ ರದ್ದು ಮಾಡಿದ್ದು ಹೈಕೋರ್ಟ್‌, ಬಿಜೆಪಿ ಸರ್ಕಾರ ಅಲ್ಲ. ಬಿಜೆಪಿ ಅಧಿಕಾರದಲ್ಲಿರುವ ಅನೇಕ ರಾಜ್ಯಗಳಲ್ಲಿ ಎಸಿಬಿ ಮತ್ತು ಲೋಕಾಯುಕ್ತ ಎರಡೂ ಇವೆ. ಬರೀ ಕರ್ನಾಟಕ ಮಾತ್ರವಲ್ಲ ದೇಶದ 16 ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ. ಕೋರ್ಟ್‌ ನಲ್ಲಿ ಎಸಿಬಿಯನ್ನು ಸಮರ್ಥಿಸಿಕೊಂಡು, ಹೊರಗೆ ನಾವು ಎಸಿಬಿ ರದ್ದು ಮಾಡಿದ್ದೇವೆ ಎಂದು ಸುಳ್ಳು ಹೇಳುವುದು ಆತ್ಮವಂಚನೆಯಾಗುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ವಿಶ್ವನಾಥ್‌ ಶೆಟ್ಟಿ ಅವರು ಲೋಕಾಯುಕ್ತರಾಗಿದ್ದರು. ಲೋಕಾಯುಕ್ತ ಎಲ್ಲಿ ರದ್ದಾಗಿತ್ತು? ಎಂದು ಪ್ರಶ್ನಿಸಿದರು.

ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದಿಂದ 40 % ಕಮೀಷನ್ ನಡೆಯುತ್ತಿರುವುದು ಸಾಬೀತು

ಸರ್ಕಾರದ ಭ್ರಷ್ಟಾಚಾರಕ್ಕೆ ದಾಖಲೆ ಕೇಳುತ್ತಿದ್ದವರಿಗೆ ಮಾಡಾಳ್‌ ವಿರೂಪಾಕ್ಷಪ್ಪ ಅವರ ಮಗ ಲಂಚದ ಹಣದ ಸಮೇತ ಸಿಕ್ಕಿಬಿದ್ದಿರುವುದು ಸಾಕ್ಷಿ. ಒಬ್ಬ ಶಾಸಕನ ಮಗನ ಮನೆಯಲ್ಲಿ 8 ಕೋಟಿ ಭ್ರಷ್ಟ ಹಣ ಸಿಕ್ಕಿದೆ ಎಂದರೆ ಇನ್ನು ಇಡೀ ಸರ್ಕಾರ ಎಷ್ಟು ಲೂಟಿ ಮಾಡಿರಬಹುದು. ಈ ಪ್ರಕರಣದಿಂದ ರಾಜ್ಯದಲ್ಲಿ 40% ಕಮಿಷನ್‌ ನಡೆಯುತ್ತಿದೆ ಎಂಬುದು ಸಾಬೀತಾಗಿದೆ. ನಿಮ್ಮದು 40% ಕಮಿಷನ್‌ ಸರ್ಕಾರ ಎಂದು ಹೇಳಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು ಬೊಮ್ಮಾಯಿ ಅವರೇ? ನಿಮಗೇನಾದರೂ ನೈತಿಕತೆ ಇದ್ದರೆ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಡಾಳ್ ವಿರೂಪಾಕ್ಷಪ್ಪರನ್ನು ಕೂಡಲೇ ಬಂಧಿಸಬೇಕು

ಸರ್ಕಾರ ವಿರೂಪಾಕ್ಷಪ್ಪ ಅವರ ರಕ್ಷಣೆ ಮಾಡುತ್ತಿದೆ. ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಾಯ ಮಾಡುತ್ತೇನೆ. ರಾಜೀನಾಮೆ ಕೊಡಲು ಬಂದ ದಿನವೇ ಅವರ ಬಂಧನ ಆಗಬೇಕಿತ್ತು. ಈಗಲೂ ಅವರು ಬೆಂಗಳೂರಿನಲ್ಲಿದ್ದುಕೊಂಡೇ ಜಾಮೀನಿಗೆ ಅರ್ಜಿ ಹಾಕಿದ್ದಾರೆ ಎಂದರು.

ಇಂಥಾ ಭ್ರಷ್ಟ ಸರ್ಕಾರವನ್ನು ಕಿತ್ತುಹಾಕಲೇಬೇಕು. ಇಂದು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿರುವ ಎಲ್ಲಾ ನಾಯಕರು ಅತ್ಯಂತ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ. ಮುಖ್ಯವಾಗಿ ದಲಿತರು ಬಿಜೆಪಿಯ ಕಡೆಗೆ ಮುಖವನ್ನೇ ಹಾಕಬಾರದು. ಅವರು ಮನುವಾದಿಗಳು, ಬಿಜೆಪಿ ಎಂದಿಗೂ ದಲಿತರ ಹಿತದ ಬಗ್ಗೆ ಯೋಚನೆ ಮಾಡಿದ ಪಕ್ಷವಲ್ಲ ಎಂದು ಕಿಡಿಕಾರಿದರು.

Tags: Congress PartyMadal Virupakshappaಬಿಜೆಪಿಸಿದ್ದರಾಮಯ್ಯ
Previous Post

ಬಸವ ಭವನ ನಿರ್ಮಿಸಲು ಕೋರಿದ ಅನುದಾನ ಪತ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್’ಗೆ ಅವಮಾನ: ಕ್ಷಮೆ ಕೋರಲು ಆಗ್ರಹ

Next Post

ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ತಾತ್ಕಾಲಿಕ ರಿಲೀಫ್​: ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post
ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ತಾತ್ಕಾಲಿಕ ರಿಲೀಫ್​: ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

ಶಾಸಕ ವಿರೂಪಾಕ್ಷಪ್ಪ ಮಾಡಾಳ್​ಗೆ ತಾತ್ಕಾಲಿಕ ರಿಲೀಫ್​: ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

Please login to join discussion

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada