• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
June 4, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ನಾಳೆ ಸಚಿವ ಸಂಪುಟ ಸಭೆ ಹೊರತಾಗಿ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳ ಮುಂದೂಡಿಕೆ

ADVERTISEMENT

“ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ. ಪೊಲೀಸರು ಮುಂಜಾಗೃತಾ ಕ್ರಮವಾಗಿ ತೆರೆದ ವಾಹನ ಮೆರವಣಿಗೆಯನ್ನು ರದ್ದುಗೊಳಿಸಿದ ನಿರ್ಧಾರವನ್ನು ಇದೇ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಈಗ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಬಂಧ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ರಾತ್ರಿ ಪ್ರತಿಕ್ರಿಯೆ ನೀಡಿದರು.

ಕಾಲ್ತುಳಿತದ ಸಾವುಗಳಿಗೆ ಸರ್ಕಾರವೇ ಹೊಣೆ ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಇಂದು ಬೆಳಗ್ಗೆ ವಿಮಾನ ನಿಲ್ದಾಣದಿಂದಲೇ ಮೆರವಣಿಗೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ನಮ್ಮ ಪೊಲೀಸ್ ಅಧಿಕಾರಿಗಳು ನಮಗೆ ಸಲಹೆ ನೀಡಿದರು. ಈ ತೀರ್ಮಾನವನ್ನು ಖಂಡಿಸಿದ್ದ ಬಿಜೆಪಿ, ಪರಮೇಶ್ವರ್ ಅವರನ್ನು ಅಸಮರ್ಥ ಗೃಹಮಂತ್ರಿ ಎಂದು ಕರೆದು ಮುಂಜಾಗೃತಾ ಕ್ರಮವಾಗಿ ಪೊಲೀಸರು ಕೈಗೊಂಡ ಕ್ರಮವನ್ನು ಎಕ್ಸ್ ಖಾತೆಯಲ್ಲಿ ಟೀಕಿಸಿತ್ತು” ಎಂದು ತಿಳಿಸಿದರು.

“ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ವಿಮಾನ ನಿಲ್ದಾಣಕ್ಕೆ ತೆರಳಿದೆ. ವಿಧಾನ ಸೌಧದ ಕಾರ್ಯಕ್ರಮದ ವೇಳೆ ಕಬ್ಬನ್ ಪಾರ್ಕ್ ಗೇಟ್ ಅನ್ನು ಮುಚ್ಚಿ ಅಗತ್ಯವಾದ ಕ್ರಮ ಕೈಗೊಳ್ಳಲಾಯಿತು” ಎಂದು ವಿವರಿಸಿದರು.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸೇರುತ್ತಾರೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಜನದಟ್ಟಣೆ ಹೆಚ್ಚಾದ ಪರಿಣಾಮ ನಾವು 2 ತಾಸುಗಳ ಕಾಲ ಮೆಟ್ರೋ ಸಂಚಾರವನ್ನು ನಿಲ್ಲಿಸಿದ್ದೆವು. ಇಷ್ಟೆಲ್ಲಾ ಮಾಡಿದರೂ ಬಿಜೆಪಿ ಇದರಲ್ಲಿ ರಾಜಕಾರಣ ಮಾಡುತ್ತಿದೆ” ಎಂದರು.

“ಇದೇ ಸಿ.ಟಿ ರವಿ ಹಾಗೂ ಬಿಜೆಪಿ ಏನು ಟ್ವಿಟ್ ಮಾಡಿದ್ದಾರೆ. ಜನರ ಈ ಪ್ರೀತಿ ವ್ಯಾಮೋಹವನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಈ ದುರ್ಘಟನೆಯಿಂದ ನಮಗೂ ನೋವಾಗಿದೆ. ಐ ಆಮ್ ಸಾರಿ, ಈ ರೀತಿ ಆಗಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

ಸಂಭ್ರಮಾಚರಣೆ, ಸರ್ಕಾರಿ ಕಾರ್ಯಕ್ರಮ ಮುಂದೂಡಿಕೆ

“18 ವರ್ಷಗಳ ಸುದೀರ್ಘ ಅವಧಿ ಬಳಿಕ ತಮ್ಮ ನೆಚ್ಚಿನ ತಂಡ ಗೆದ್ದಿದೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನ ತಮ್ಮ ಕೆಲಸ, ಕಾರ್ಯ ಬಿಟ್ಟು ಕ್ರಿಕೆಟ್ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದಾರೆ. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆ ಹೊರತು ಪಡಿಸಿ ವಿಶ್ವ ಪರಿಸರ ದಿನ ಸೇರಿದಂತೆ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ” ಎಂದು ತಿಳಿಸಿದರು.

ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, “ಇಲ್ಲಿ ಯಾರ ಮೇಲೂ ದೂಷಣೆ ಮಾಡಲು ಆಗುವುದಿಲ್ಲ. ಈ ರೀತಿ ಏಕಾಏಕಿ, ಕುಟುಂಬ ಸಮೇತರಾಗಿ ಮಕ್ಕಳನ್ನು ಕರೆದುಕೊಂಡು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂದು ಯಾರು ನಿರೀಕ್ಷೆ ಮಾಡಿದ್ದರು?” ಎಂದು ತಿಳಿಸಿದರು.

Tags: B Y VijayendraBasavaraj BommaiBJP IndiaChinnaswamy StadiumcongressCricketCT RaviDK ShivakumarIPLR Ashoksiddaramaiah
Previous Post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು:

Next Post

ಪರಿಸರ ಕಾಳಜಿ-ಮನುಜ ಪ್ರಜ್ಞೆ ಮತ್ತು ಸಮಾಜ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಪರಿಸರ ಕಾಳಜಿ-ಮನುಜ ಪ್ರಜ್ಞೆ ಮತ್ತು ಸಮಾಜ

ಪರಿಸರ ಕಾಳಜಿ-ಮನುಜ ಪ್ರಜ್ಞೆ ಮತ್ತು ಸಮಾಜ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada