
ಗದಗ: ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ ಎಂದು ಗದಗನಲ್ಲಿ ಸಚಿವ ಹೆಚ್.ಕೆ ಪಾಟೀಲ್ ಬಿಜೆಪಿಗೆ ಮಾತಿನ ಚಾಟಿ ಬೀಸಿದ್ದಾರೆ. ರಾಜ್ಯದ ಉಪಚುನಾವಣೆ ಬಹಳ ಮಹತ್ವದ್ದಾಗಿತ್ತು. ರಾಜ್ಯದ ಹಲವಾರು ಬೆಳೆವಣಿಗೆಗಳಿಗೆ ಸಮರ್ಪಕ ಉತ್ತರ ನೀಡಿ ಮಂಗಳಾರತಿ ಮಾಡಿದ್ದಾರೆ ಎಂದಿದ್ದಾರೆ.
ಬಿಜೆಪಿ ನಾಯಕರು ಸಮಾಜ ಒಡೆಯುವ ದೊಡ್ಡ ಹುನ್ನಾರ ಮಾಡಿದ್ದರು. ವಕ್ಫ್ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡಿದ್ದರು. ಗ್ಯಾರಂಟಿ ನಿಲ್ಲಿಸುತ್ತೇವೆ ಅಂತ ಪ್ರಧಾನಿವರಿಗೂ ಸುಳ್ಳು ಹೇಳಿ ಗೊಂದಲ ಸೃಷ್ಟಿಸಿದರು. ಮುಖ್ಯಮಂತ್ರಿ ತೇಜೋವಧೆ ಮಾಡಿ ಸರ್ಕಾರ ಉಳಿಯೋದಿಲ್ಲ ಅಂತ ಹೇಳಿದ್ರು. ಆದರೆ ಜಾಗೃತ ಮತದಾರ ಬಿಜೆಪಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದಿದ್ದಾರೆ.
