• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ- ಜೆಡಿಎಸ್ ನಾಯಕರು ಬರ ಪರಿಹಾರ ಒತ್ತಡ ಹಾಕಿ ತಮ್ಮ ಬದ್ಧತೆ ತೋರಲಿ: ಡಿಸಿಎಂ ಡಿ.ಕೆ.ಶಿ ಸವಾಲು

Any Mind by Any Mind
November 10, 2023
in ಕರ್ನಾಟಕ
0
ರಾಜ್ಯದ ರೈತರ ಬೆಳೆಗಳನ್ನು ರಕ್ಷಣೆ ಮಾಡಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

“ರಾಜ್ಯದ 200ಕ್ಕೂ ಹೆಚ್ಚು ತಾಲೂಕು ಬರಕ್ಕೆ ಸಿಲುಕಿದ್ದು, ಬರ ಪರಿಹಾರ ಹಾಗೂ ನರೇಗಾ ಉದ್ಯೋಗ ದಿನಗಳ ಹೆಚ್ಚಳ ವಿಚಾದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಕೇಂದ್ರದ ಮೇಲೆ ಒತ್ತಡ ತಂದು ತಮ್ಮ ಬದ್ಧತೆ ಪ್ರದರ್ಶಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

“ಕೇಂದ್ರ ಸರ್ಕಾರ ರಾಜ್ಯದ ಬರದ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ.

ಈ ಪರಿಸ್ಥಿತಿಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ಹಾಗೂ ದಳದವರು ಬಹಳ ಅನುಕಂಪದಿಂದ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಬರ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೇಳಿತ್ತು. ನಂತರ ಕೇಂದ್ರ ಸರ್ಕಾರ ವರದಿ ಸ್ವೀಕರಿಸಿ ಕೇಂದ್ರ ಬರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳಿಸಿತ್ತು.

ರಾಜ್ಯದಿಂದ ಆಯ್ಕೆಯಾದ 25 ಸಂಸದರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮಾಡಲಿ. ಕೇವಲ ಪ್ರಚಾರಕ್ಕೆ ಪ್ರವಾಸ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರ ಸರ್ಕಾರ ಕಾನೂನು ಪ್ರಕಾರ ಬರಕ್ಕೆ ಬಿಡುಗಡೆ ಮಾಡಬೇಕಾದ ಪರಿಹಾರ ಹಣ ನೀಡಲಿ.

ಬರ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ 800 ಕೋಟಿ ಹಣ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಕುಡಿಯುವ ನೀರು, ಪಶುಗಳಿಗೆ ಮೇವು ಪೂರೈಕೆಗೆ ಆದ್ಯತೆ ನೀಡಲು ತಿಳಿಸಿದ್ದೇವೆ.

ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕು ಬರಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ನರೇಗಾ ಯೋಜನೆಯ ಮೂಲಕ ಸೀಮಿತ ಇರುವ ಉದ್ಯೋಗ ದಿನವನ್ನು 100ರಿಂದ 150 ದಿನಕ್ಕೆ ವಿಸ್ತರಣೆ ಮಾಡಲು ಪ್ರಸ್ತಾಪ ಇಟ್ಟಿದ್ದು ಕೇಂದ್ರ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ.

ರಾಜ್ಯದ ಹಿತಕ್ಕಾಗಿ ಸಂಸದರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಶಾಸಕರು ಕೇಂದ್ರ ಸರ್ಕಾರದ ಬಳಿ ಒತ್ತಡ ಹೇರಲಿ. ಆನಂತರ ಅವರು ರಾಜಕಾರಣ ಮಾಡಲಿ. ಅವರ ರಾಜಕಾರಣಕ್ಕೆ ನಾವು ಬೇಡ ಎನ್ನುವುದಿಲ್ಲ.

ಕೇಂದ್ರ ಸರ್ಕಾರ ಉದ್ಯೋಗ ದಿನ ಹೆಚ್ಚಿಸದಿದ್ದರೆ, ನಾವೇ ಹೆಚ್ಚಳ ಮಾಡುತ್ತೇವೆ:

ನಾವು ಕೇಂದ್ರದ ಬಳಿ ಭಿಕ್ಷೆ ಬೇಡುತ್ತಿಲ್ಲ. ಕಾನೂನು ಪ್ರಕಾರ ಬರ ಪರಿಸ್ಥಿತಿ ಇದ್ದಾಗ ನರೇಗಾ ಯೋಜನೆಯಡಿ ನೀಡುವ ಉದ್ಯೋಗ ದಿನಗಳನ್ನು 150 ದಿನಗಳಿಗೆ ಹೆಚ್ಚಳ ಮಾಡಬೇಕು. ಈ ಉದ್ಯೋಗ ದಿನ ಹೆಚ್ಚಳ ಮಾಡಲು ಆಗದಿದ್ದರೆ ಕೇಂದ್ರ ಸರ್ಕಾರ ಅದನ್ನು ಸ್ಪಷ್ಟವಾಗಿ ತಿಳಿಸಲಿ. ಆ ಕೆಲಸವನ್ನು ರಾಜ್ಯ ಸರ್ಕಾರವೇ ಮಾಡಲಿದೆ.”

ಹೈಕೋರ್ಟ್ ನಿರ್ದೇಶನದಂತೆ ಬೀದಿ ವ್ಯಾಪಾರಿಗಳ ತೆರವು:

ಬೆಂಗಳೂರು ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಬಗ್ಗೆ ಕೇಳಿದಾಗ, “ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಕೊಳ್ಳಿ ಎಂದು ಅವರ ಜೊತೆ ಮಾತನಾಡಿ ಹೇಳಿದ್ದೇನೆ. ಎಲ್ಲೆಲ್ಲಿ ರಸ್ತೆಯಲ್ಲಿ ಅಂಗಡಿ ಇಟ್ಟಿದ್ದಾರೆ ಅದನ್ನು ತೆರವು ಮಾಡಿಸಲಾಗಿದೆ. ಆಯುಕ್ತರು ಮತ್ತು ಅಧಿಕಾರಿಗಳು ಈ ಸಂಬಂಧ ಫೋಟೋ, ವಿಡಿಯೋ ತೋರಿಸಿದ್ದಾರೆ. ಈ ವಿಚಾರದಲ್ಲಿ ಹೈಕೋರ್ಟ್ ನಿರ್ದೇಶನವಿದೆ. ಅದರಂತೆ ಪಾಲಿಕೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನಾವು ಎಲ್ಲರನ್ನೂ ಸಮಾನವಾಗಿ ಕಾಣುತ್ತಿದೆ. ತಾರತಮ್ಯ ಮಾಡುತ್ತಿಲ್ಲ. ನನ್ನನ್ನು ಭೇಟಿ ಮಾಡಿದಾಗ ಅವರಿಗೆ ರಸ್ತೆಯಲ್ಲಿ ವ್ಯಾಪಾರ ಮಾಡಬೇಡಿ ಎಂದು ಹೇಳಿದ್ದೇವೆ.

ಬೀದಿ ವ್ಯಾಪಾರಿಗಳ ಹಿತಕಾಯಲು 10 ಸಾವಿರದ ವರೆಗೂ ಸಾಲ ನೀಡಲು ನಾವು ಸಿದ್ಧ ಇದ್ದೇವೆ. ರಸ್ತೆಯಲ್ಲಿ ವ್ಯಾಪಾರ ಮಾಡಿದರೆ ಹೆಚ್ಚು ಅಪಘಾತ ಹಾಗೂ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ವಿಚಾರವಾಗಿ ನಾನು ಮತ್ತೆ ಬೀದಿ ವ್ಯಾಪಾರಿಗಳನ್ನು ಭೇಟಿ ಮಾಡುತ್ತೇನೆ” ಎಂದು ತಿಳಿಸಿದರು.

ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಪ್ರವಾಸ:

“ನಾನು ವಿಜಯವಾಡ ಮೂಲಕ ತೆಲಂಗಾಣ ಪ್ರವಾಸ ಮಾಡುತ್ತಿದ್ದು, ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣ ಪ್ರಚಾರ ಮಾಡಲಿದ್ದೇನೆ. ಆಂಧ್ರ ಕಾಂಗ್ರೆಸ್ ಮಾಜಿ ಅಧ್ಯಕ್ಷರು ನನ್ನ ಜೊತೆ ಪ್ರವಾಸ ಮಾಡುತ್ತಿದ್ದಾರೆ. ಪ್ರಚಾರ ಮುಗಿಸಿ ಶ್ರೀಶೈಲಕ್ಕೆ ಹೋಗಲಿದ್ದೇನೆ” ಎಂದು ತಿಳಿಸಿದರು.

ತೆಲಂಗಾಣ ಚುನಾವಣೆಗೆ ರಾಜ್ಯದ ಸಚಿವರ ಜವಾಬ್ದಾರಿ ನೀಡಿರುವ ಬಗ್ಗೆ ಟೀಕೆ ವ್ಯಕ್ತವಾಗಿದೆ ಎಂದು ಕೇಳಿದಾಗ, “ಸುಮಾರು ಐದು ಸಚಿವರಿಗೆ ಹಾಗೂ 40 ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಬಿಜೆಪಿ ಅವರು ಸರ್ಕಾರದಲ್ಲಿ ಇದ್ದಾಗಲೂ ಈ ರೀತಿ ಜವಾಬ್ದಾರಿ ನೀಡಿದ್ದರು. ಬರ ಹಿನ್ನೆಲೆಯಲ್ಲಿ ಕಂದಾಯ ಸಚಿವರಿಗೆ ಈ ಜವಾಬ್ದಾರಿ ನೀಡಿಲ್ಲ. ಅವರ ಬದಲು ಬೇರೆಯವರಿಗೆ ಜವಾಬ್ದಾರಿ ನೀಡಿ ಎಂದು ದೆಹಲಿ ನಾಯಕರಿಗೆ ನಾನು ಹಾಗೂ ಮುಖ್ಯಮಂತ್ರಿಗಳು ತಿಳಿಸಿದ್ದೇವೆ” ಎಂದು ತಿಳಿಸಿದರು.

ಕಾಂತರಾಜು ವರದಿ ಸರಿಯಿಲ್ಲ, ಹೊಸದಾಗಿ ಜಾತಿಗಣತಿ ಮಾಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಮೊದಲು ಬರಗಾಲದ ಬಗ್ಗೆ ಗಮನ ಹರಿಸಿ ರೈತರಿಗೆ ನೆರವು ನೀಡೋಣ. ನಂತರ ಈ ವಿಚಾರ ನೋಡೋಣ” ಎಂದು ತಿಳಿಸಿದರು.

ಕಾಂಗ್ರೆಸ್ ನ 68 ಶಾಸಕರನ್ನು ಆಪರೇಶನ್ ಮಾಡಲು ಬಿಜೆಪಿ ತೀರ್ಮಾನಿಸಿದೆ ಎಂಬ ವಿಚಾರವಾಗಿ ಕೇಳಿದಾಗ, “ಅವರ ವೃತ್ತಿ ಅದು. ಅದನ್ನು ಅವರು ಬಿಡುವುದಿಲ್ಲ” ಎಂದು ತಿಳಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

‘ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ’ಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ

Next Post

ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ‘ಸಾಮೂಹಿಕ ಅತ್ಯಾಚಾರ’ : ಮೂವರ ಬಂಧನ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ‘ಸಾಮೂಹಿಕ ಅತ್ಯಾಚಾರ’ : ಮೂವರ ಬಂಧನ

ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ 'ಸಾಮೂಹಿಕ ಅತ್ಯಾಚಾರ' : ಮೂವರ ಬಂಧನ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada