• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಕಾಂಗ್ರೆಸ್​​ ತಂತ್ರಗಾರಿಕೆಗೆ ಬಿಜೆಪಿ ಜೆಡಿಎಸ್​ ಕಂಗಾಲು.. ಸಭೆ ಮೇಲೆ ಸಭೆ..

ಕೃಷ್ಣ ಮಣಿ by ಕೃಷ್ಣ ಮಣಿ
August 19, 2023
in ಅಂಕಣ, ಅಭಿಮತ
0
ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ ..?
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾಂಗ್ರೆಸ್​ ಆಪರೇಷನ್​ ಹಸ್ತ ಶುರು ಮಾಡಿದೆ ಅನ್ನೋ ಗುಮಾನಿ ಶುರುವಾಗಿದೆ. ಬಿಜೆಪಿ ಹಾಗು ಜೆಡಿಎಸ್​ನ ಹಾಲಿ ಮಾಜಿ ಶಾಸಕರನ್ನು ಸೆಳೆಯಲು ಡಿಕೆ ಶಿವಕುಮಾರ್​ ಅಂಡ್​ ಟೀಂ ಸಿದ್ದತೆ ಮಾಡಿಕೊಂಡಿದೆ. ಈ ಬಗ್ಗೆ ಬಿಜೆಪಿ ಶಾಸಕರೇ ಬಹಿರಂಗವಾಗಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕುವ ಮೂಲಕ ಪಕ್ಷ ತ್ಯಜಿಸುವ ಸುಳಿವು ನೀಡಿದ್ದಾರೆ. ಆದರೆ ಬಿಜೆಪಿ ಹಾಗು ಜೆಡಿಎಸ್​ ನಾಯಕರು ಮಾತ್ರ ನಮ್ಮ ಪಕ್ಷಗಳಿಂದ ಯಾರೊಬ್ಬರೂ ಕಾಂಗ್ರೆಸ್​ಗೆ ಹೋಗಲ್ಲ ಹೋಗಲ್ಲ ಎನ್ನುತ್ತಲೇ ಆಪರೇಷನ್​ ಹಸ್ತ ತಡೆಯಲು ಭಾರೀ ಕಸರತ್ತು ಶುರು ಮಾಡಿಕೊಂಡಿದ್ದಾರೆ. ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್​ನ ರಣತಂತ್ರದ ವಿರುದ್ಧ ಹರಿಹಾಯುತ್ತಿದ್ದಾರೆ.

ADVERTISEMENT

ಬಿಜೆಪಿ ಅಲರ್ಟ್, ಅಖಾಡಕ್ಕೆ ರಾಜಾಹುಲಿ ಎಂಟ್ರಿ

ಬಿಜೆಪಿ ಹೈಕಮಾಂಡ್​ ಬಿಜೆಪಿಯ ಭೀಷ್ಮ ಬಿ.ಎಸ್​ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಅವಮಾನಕರವಾಗಿ ಇಳಿಸಿದ್ದು ಇತಿಹಾಸ. ಆ ಬಳಿಕ ಯಡಿಯೂರಪ್ಪ ಹೇಳಿದ ನಾಯಕರನ್ನು ಬಿಜೆಪಿ ಅಧ್ಯಕ್ಷ ಹಾಗು ವಿರೋಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೂ ಪರಿಗಣಿಸದೆ ನಿರ್ಲಕ್ಷ್ಯ ಮಾಡಿದೆ. ಆದರೆ ಆಪರೇಷನ್‌ ಹಸ್ತದ ಸದ್ದು ಕೇಳುತ್ತಿದ್ದ ಹಾಗೆ ಬಿಜೆಪಿ ಅಲರ್ಟ್‌ ಆಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. BBMP ಚುನಾವಣೆ ಅಜೆಂಡಾದ ಸಭೆಯಲ್ಲಿ ಆಪರೇಷನ್‌ ಹಸ್ತದ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಕಾಂಗ್ರೆಸ್ ಟಾರ್ಗೆಟ್ ಮಾಡಿರುವ ನಾಯಕರಿಗೆ ಮನವರಿಕೆ ಮಾಡುವ ಕೆಲಸ ಮಾಡಿದೆ. ಆದರೆ ಪ್ರಮುಖವಾಗಿ ಆಪರೇಷನ್​ ಹಸ್ತದಲ್ಲಿ ಕೇಳಿ ಬಂದಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್, ಕೆ.ಆರ್ ಪುರ ಶಾಸಕ ಬೈರತಿ ಬಸವರಾಜು ಸೇರಿದಂತೆ ಸುರೇಶ್ ಕುಮಾರ್, ರವಿ ಸುಬ್ರಹ್ಮಣ್ಯ, ರಾಮಮೂರ್ತಿ, ಸತೀಶ್ ರೆಡ್ಡಿ, ಮಂಜುಳಾ ಲಿಂಬಾವಳಿ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಜೆಡಿಎಸ್​ನಲ್ಲಿ ಅಧಿಕಾರ ಹಂಚಿಕೆ, ಕೋರ್​ ಕಮಿಟಿ ರಚನೆ..!

ಆಪರೇಷನ್‌ ಹಸ್ತದ ಸದ್ದು ಕೇಳುತ್ತಲೇ ಜೆಡಿಎಸ್ ಅಲರ್ಟ್‌ ಆಗಿದ್ದು, ಕೋರ್‌ ಕಮಿಟಿ ರಚನೆ ಮಾಡಲಾಗಿದೆ. ಈ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸುವ ಕೆಲಸ ಮಾಡಿದ್ದಾರೆ. ಆಗಸ್ಟ್ 20ರಿಂದ ಸೆಪ್ಟೆಂಬರ್ 30ರೊಳಗೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆಗೆ ವರದಿಗೆ ಸೂಚನೆ ಕೊಡಲಾಗಿದೆ. ಇನ್ನು ಜಿಲ್ಲಾಧ್ಯಕ್ಷರು ಹಾಗು ಪದಾಧಿಕಾರಿಗಳ ಬದಲಾವಣೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಕಾಂಗ್ರೆಸ್‌‌ಗೆ ಯಾವ ಶಾಸಕರೂ ಹೋಗೋದಿಲ್ಲ ಎಂಬುದನ್ನು ಖಾತ್ರಿ ಮಾಡಿಕೊಂಡು, ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗುವ ಕಾಂಗ್ರೆಸ್‌ ಲೆಕ್ಕಾಚಾರಕ್ಕೆ ಕೌಂಟರ್​​ ಕೊಡುವ ಕೆಲಸಕ್ಕೆ ಮುಂದಾಗಿದೆ. ಅಷ್ಟೇ ಅಲ್ಲದೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸಬೇಕು. ಇದಕ್ಕಾಗಿ ವಿಭಾಗವಾರು ಸಭೆ ಮೂಲಕ ವಿಧಾನಸಭೆ ಸೋಲಿನ ಪರಾಮರ್ಶೆ ಮಾಡುವುದು, ಕಾಂಗ್ರೆಸ್ ಗ್ಯಾರಂಟಿ‌ಗಳ ವೈಫಲ್ಯ ಹಾಗು ಆಡಳಿತ ವೈಫಲ್ಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಚಿಂತನೆ ನಡೆದಿದೆ.

ಕಾಂಗ್ರೆಸ್​ ಕಡೆಗೆ ವಿಪಕ್ಷಗಳ ನಾಯಕರ ಸೆಳೆತ ಯಾಕೆ..!?

ಕಾಂಗ್ರೆಸ್​ ಸಂಪೂರ್ಣ ಬಹುಮತಕ್ಕೆ ಬೇಕಿರುವ 113 ಸ್ಥಾನಗಳನ್ನು ಮಾತ್ರ ಗೆಲ್ಲದೆ 23 ಸ್ಥಾನಗಳನ್ನು ಹೆಚ್ಚುವರಿಯಾಗಿ ಗೆದ್ದು ಅಧಿಕಾರ ರಚನೆ ಮಾಡಿದೆ. ಅಂದರೆ ಆಪರೇಷನ್​​ ಕಮಲದ ಮೂಲಕ ಶಾಸಕರನ್ನು ಕೊಂಡುಕೊಂಡು ಕಾಂಗ್ರೆಸ್​ ಪಕ್ಷವನ್ನು ಅವಧಿಗೂ ಮುನ್ನವೇ ಅಧಿಕಾರದಿಂದ ಇಳಿಸುವುದು ಅಸಾಧ್ಯ. ಹೀಗಾಗಿ ಕೆಲವು ಶಾಸಕರು ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಯೋಜನೆಯಲ್ಲಿದ್ದಾರೆ ಎನ್ನಲಾಗಿದೆ. ತಮ್ಮ ಕ್ಷೇತ್ರಗಳನ್ನು ಮಕ್ಕಳಿಗೆ ಬಿಟ್ಟುಕೊಡುವ ಮೂಲಕ ಅಧಿಕಾರದಲ್ಲಿರುವ ಕಾಂಗ್ರೆಸ್​ ಪಕ್ಷದಿಂದ ಶಾಸಕರನ್ನಾಗಿ ಮಾಡಿದರೆ ಮಕ್ಕಳ ಭವಿಷ್ಯವೂ ಗಟ್ಟಿಯಾಗಲಿದೆ ಎನ್ನೋದು ಲೆಕ್ಕಾಚಾರ. ಇನ್ನೂ ಸೋಲುಂಡಿರುವ ಮಾಜಿ ಶಾಸಕರು ಕಾಂಗ್ರೆಸ್​ ಪಕ್ಷಕ್ಕೆ ಸೇರಿದರೆ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ಸುಲಭ. ಕಾಂಗ್ರೆಸ್​ ಕೊಟ್ಟಿರುವ ಗ್ಯಾರಂಟಿಗಳ ಮೂಲಕ ಗೆದ್ದು ಲೋಕಸಭಾ ಸ್ಥಾನ ಪಡೆದುಕೊಂಡರೆ ಮುಂದಿನ ನಾಲ್ಕೂವರೆ ವರ್ಷ ರಾಜಕೀಯ ಅಜ್ಞಾತವಾಸದಿಂದ ದೂರ ಉಳಿಯಬಹುದು ಎನ್ನುವ ಚಿಂತನೆಯಲ್ಲಿದ್ದಾರೆ ಎನ್ನಲಾಗ್ತಿದೆ.

ಕೃಷ್ಣಮಣಿ

Tags: Basavaraj BommaiBJPCMSiddaramaiahDKShivakumarhdkumraswamyJDSYediyurappa
Previous Post

ಸಂವಹನ ಮಾಧ್ಯಮವೂ ವರ್ತಮಾನದ ಸೂಕ್ಷ್ಮತೆಗಳೂ

Next Post

ಬೆಂಗಳೂರು | ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ ; ವಿಡಿಯೊ

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025

DCM DK Shivakumar: ಸಿಎಂ ಕುರ್ಚಿ ಖಾಲಿ ಇಲ್ಲ..!!

July 3, 2025
Next Post
ಅಗಿ ಅವಘಡ

ಬೆಂಗಳೂರು | ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ ; ವಿಡಿಯೊ

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada