• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
November 20, 2021
in ಕರ್ನಾಟಕ, ರಾಜಕೀಯ
0
ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!
Share on WhatsAppShare on FacebookShare on Telegram

ಒಂದು ದೇಶ, ಒಂದು ತೆರಿಗೆ, ಒಂದು ದೇಶ, ಒಂದು ಪಡಿತರ ಅಂತೆಲ್ಲ ಪ್ರಾದೇಶಿಕ ಅಗತ್ಯತೆಗಳನ್ನು ಕಡೆಗಣಿಸುತ್ತಿರುವ ಕೇಂದ್ರ ಸರ್ಕಾರ ಈಗ ಒಂದು ದೇಶ, ಒಂದು ಭಾಷೆ ಎಂಬ ಪ್ರಯೋಗಕ್ಕೆ ಹೊರಟಿದೆ.

ADVERTISEMENT

ಶುಕ್ರವಾರ ಸಂಜೆ ದೆಹಲಿಯಿಂದ ಬಿಡುಗಡೆಯಾದ 25 ಎಂಎಲ್ಸಿ ಅಭ್ಯರ್ಥಿಗಳ ಪಟ್ಟಿಯನ್ನು ಹಿಂದಿಯಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳ ಹೆಸರನ್ನು ಇಂಗ್ಲಿಷ್ನಲ್ಲೂ ಪ್ರಕಟಿಸಿದೆ. ಅಲ್ಲಿ ಕನ್ನಡವೇ ನಾಪತ್ತೆ!

ಈ ಧೋರಣೆಯನ್ನು ಸಾವಿರಾರು ಜನ ಸಾಮಾಜಿಕ ಜಾಲತಾಣದಲ್ಲಿ ವಿರೋಧಿಸಿದ್ದಾರೆ ಈ ಕುರಿತು ʼಪ್ರತಿಧ್ವನಿʼ ಜೊತೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ನಾರಾಯಣಗೌಡ, ʼಎಲ್ಲವನ್ನೂ ಏಕೀಕೃತ ಮಾಡುವ ಕೆಟ್ಟ ಉದ್ದೇಶವನ್ನು ಸಂಘ ಪರಿವಾರ ಹೊಂದಿದೆ. ಅದನ್ನು ಪಾಲಿಸಲು ಬಿಜೆಪಿ ಸಿದ್ಧವಾಗಿದೆ. ವೈವಿಧ್ಯಮಯ ಸಂಸ್ಕೃತಿ ಹೊಂದಿರುವ ಈ ದೇಶದಲ್ಲಿ ಆಯಾ ಪ್ರಾಂತ್ಯಗಳಿಗೆ ತಮ್ಮದೇ ಆದ ಅಸ್ಮಿತೆ ಇದೆ. ಈ ಮೂಲ ಅಸ್ಮಿತೆಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅದರಲ್ಲೂ ಕನ್ನಡ ಸೇರಿದಂತೆ ಇತರ ಸ್ಥಳೀಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರುವ ಪ್ರಯತ್ಬವನವ್ನು ಕರವೇ ಸ್ಪಷ್ಟವಾಗಿ ವಿರೋಧಿಸುತ್ತದೆ. ಕರ್ನಾಟಕ ಎಂಎಲ್ಸಿ ಅಭ್ಯರ್ಥಿಗಳ ಪಟ್ಟಿಯನ್ನು ಹಿಂದಿಯಲ್ಲಿ ಓದಬೇಕಾದ ದುರ್ಗತಿ ಕನ್ನಡಿಗರಿಗೆ ಬಂದಿಲ್ಲʼ ಎಂದು ಕಿಡಿ ಕಾರಿದರು. ಈ ವಿಷಯ ಎತ್ತಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಎಚ್ಚರಿಸುತ್ತೇವೆ ಎಂದು ನಾರಾಯಣಗೌಡರು ತಿಳಿಸಿದರು.

ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಗೆ ಮುಂದಾಗಿರುವ ಬಿಜೆಪಿ ಸಂಸ್ಕೃತ ಮತ್ತು ಹಿಂದಿ ಭಾಷೆಗಳನ್ನು ಪೋಷಿಸುತ್ತಿದೆ.

ಸಂಘ ಪರಿವಾರದ ಮೂಲ ಉದ್ದೇಶವೇ ಏಕೀಕ್ಗೃತ ಸಂಸ್ಕೃತಿಯನ್ನು ನಿರ್ಮಿಸುವುದು. ಸಂಘ ಪರಿವಾರಕ್ಕೆ ಸಂಸ್ಕೃತ ಎಂಬ ಸತ್ತ ಭಾಷೆಯ ಮೇಲೆ ಮೋಹ, ಈಗದು ಸಂಸ್ಕೃತ ವನ್ನು ಹೇರಲಾಹದೇ ಇರುವ ಕಾರಣಕ್ಕೆ ಹಿಂದಿಯನ್ನು ನಮ್ಮ ,ಮೇಲೆ ಹೇರಲು ಹೊರಟಿದೆ.

ಅದರ ಪರಿಣಾಮವೇ ಈಗ ಬಿಡುಗಡೆಗೊಂಡ 25 ಎಂಎಲ್ಸಿ ಅಭ್ಯರ್ಥಿಗಳ ಪಟ್ಟಿಯೇ ಅದಕ್ಕೆ ಸಾಕ್ಷಿ.

ಡಿಸೆಂಬರ್ 10 ರಂದು 25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಕುರಿತಂತೆ ಶುಕ್ರವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ ಹೈಕಮಾಂಡ್, ಎಲ್ಲ ವಿವರಗಳನ್ನುಹಿಂದಿಯಲ್ಲಿ ಪ್ರಕಟಿಸಿದೆ. ಅಲ್ಲಲ್ಲಿ ಇಂಗ್ಲಿಷ್ನಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಹೀಗೆ ಕನ್ನಡವನ್ನು ಕಡೆಗಣಿಸುವ ಬಿಜೆಪಿ, ಪಶ್ಚಿಮ ಬಂಗಾಳ, ಕೇರಳ ಮತ್ತು ತಮಿಳುನಾಡು ರಾಜ್ಯ ಸರ್ಜಾರಗಳಿಗೆ ಮತ್ತು ಅಲ್ಲಿನ ಬಿಜೆಪಿ ಘಟಕಗಳಿಗೆ ಪತ್ರ ಕಳಿಸುವಾಗ ಅಲ್ಲಿನ ಸ್ಥಳೀಯ ಭಾಷೆಗೆ ಆದ್ಯತೆ ನೀಡುತ್ತದೆ.

ಆದರೆ, ಕನ್ನಡ ಅಥವಾ ಕರ್ನಾಟಕದ ವಿಷಯದಲ್ಲಿ ಹಿಂದಿ ಮೂಲಕವೇ ವ್ಯವಹರಿಸುವ ಮೂಲಕ ಕನ್ನಡ ಭಾಚೆಯನ್ನು ಕೊಲ್ಲುತ್ತಿದೆ.

ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ತೆರಿಗೆ ಪಾಲಿನ ಹಣ ಪೂರ್ತಿಯಾಗಿ ಬರಲೇ ಇಲ್ಲ. ರಾಜ್ಯ ಕೇಳಿದ ನೆರೆ ಪರಿಹಾರ ಮೊತ್ತವೂ ಸಂಪೂರ್ಣವಾಗಿ ಸಿಗಕೇ ಇಲ್ಲ್ಲ. ಈಗದು ಎಂಎಲ್ಸಿ ಅಭ್ಯರ್ಥಿಗಳ ಪಟ್ಟಿಯನ್ನು ಹಿಂದಿ-ಇಂಗ್ಲಿಷ್ನಲ್ಲಷ್ಟೇ ಪ್ರಕಟಿಸಿ ಕನ್ನಡವನ್ನು ಮತ್ತೆ ಕಡೆಗಣಿಸಿದೆ. ನಾಚಿಕೆ, ಮಾನ, ಮರ್ಯಾದೆ ಎಲ್ಲ ಬಿಟ್ಟ ನಮ್ಮ ಸಂಸದರು ಮತ್ತೆ ಬೆತ್ತಲಾಗಿದ್ದಾರೆ.

List-of-BJP-Candidate-for-Biennial-election-to-the-Legislative-Council-from-Karnataka-Maharashtra-on-19.11.2021Download
Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BDA ಮೇಲೆ ACB ದಾಳಿ : ಕೋಟಿ ಕೋಟಿ ಮೌಲ್ಯದ ದಾಖಲಾತಿ ವಶ!

Next Post

ತಿರುಪತಿಯಲ್ಲಿ ಭಾರಿ ಮಳೆಯ ಅವಾಂತರ! ಮಳೆಯ ರಭಸಕ್ಕೆ ಕೊಚ್ಚಿ ಹೋದ ಯುವಕ! | TTD | TIRUPATHI |

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ತಿರುಪತಿಯಲ್ಲಿ ಭಾರಿ ಮಳೆಯ ಅವಾಂತರ! ಮಳೆಯ ರಭಸಕ್ಕೆ ಕೊಚ್ಚಿ ಹೋದ ಯುವಕ! | TTD | TIRUPATHI |

ತಿರುಪತಿಯಲ್ಲಿ ಭಾರಿ ಮಳೆಯ ಅವಾಂತರ! ಮಳೆಯ ರಭಸಕ್ಕೆ ಕೊಚ್ಚಿ ಹೋದ ಯುವಕ! | TTD | TIRUPATHI |

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada