• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ ಪಿನ್‌ ಗೂ ಸಂಪರ್ಕ : ಎಚ್.ಡಿ. ಕುಮಾರಸ್ವಾಮಿ ಬಾಂಬ್

ಪ್ರತಿಧ್ವನಿ by ಪ್ರತಿಧ್ವನಿ
May 4, 2022
in ಕರ್ನಾಟಕ
0
Share on WhatsAppShare on FacebookShare on Telegram
ADVERTISEMENT

ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.

ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್‌ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರಸ್ಪರ ದ್ವಿಚಕ್ರ ವಾಹನ ಢಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು. ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಅವರಿಗೆ ಅವಮಾನ‌ ಮಾಡಿದ್ದರು ಬಿಜೆಪಿ ನಾಯಕರು. ಅದಕ್ಕಾಗಿ ಇಲಾಖೆಯಲ್ಲಿರುವ ಅವರ ಅಭಿಮಾನಿಗಳು ಕೆಲವರು ಸರಕಾರಕ್ಕೆ ಬುದ್ಧಿ ಕಲಿಸಲೆಂದೇ ಅವರೇ ಹಗರಣವನ್ನು ಹೊರತೆಗೆದಿದ್ದಾರೆ. ಇದು ಸರಕಾರದಿಂದ ಹೊರಬಂದಿಲ್ಲ, ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರಕಾರದ ನಡವಳಿಕೆಯನ್ನು ಪೊಲೀಸ್‌ ಇಲಾಖೆಯವರೇ ಹೊರಗೆಳೆದಿದ್ದಾರೆ ಎಂದು ಅವರು ಹೇಳಿದರು.

ನಿಷ್ಠಾವಂತ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್‌ಪಿನ್ ಲಿಂಕ್ ಇತ್ತು.‌ ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. 30% ಆಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ 30-40% ಆಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗಬಾರದು ಎಂದಷ್ಟೇ ನಾನು ಹೇಳಿದ್ದೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಕಾಂಗ್ರೆಸ್‌ ನಾಯಕರ ಬಳಿ ದಾಖಲೆ ಇದೆಯಾ?:

ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಬಳಿ ಸಚಿವರ ವಿರುದ್ಧ ದಾಖಲೆ ಇದೆಯಾ? ಅವರ ವಿರುದ್ಧ ಎಲ್ಲಿದೆ ದಾಖಲೆ? ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿಗಳು; ಸಚಿವರ ವಿರುದ್ಧ ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬೆಂಗಳೂರಿಗೆ ಬರುತ್ತಿದ್ದಂತೆಯೇ ಅದೆಲ್ಲ ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದ್ದಾರೆ. ಇದೆಲ್ಲ ಅಮಿತ್ ಶಾ ತಲೆಗೆ ಹೋಗಲಿ ಎಂದೇ ಸಚಿವರ ವಿರುದ್ಧ ಮಾಹಿತಿ ನೀಡಿದ್ದಾರೆ ಎಂದರು.

ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲಿಯೇ ಸಂಚು ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ, ನಾವು ಹಚ್ಚಬೇಕಿಲ್ಲ. ನಾನು ಮತ್ತೆ ಪೆಟ್ರೋಲ್ ತೆಗೆದುಕೊಂಡು ಹೋಗ್ಲಾ ಸುರಿಯೋಕೆ? ಕಾಂಗ್ರೆಸ್ ನಾಯಕರಿಗೆ ನೈಜ ವಿಷಯಗಳ ಮೇಲೆ ಹೋರಾಟ ನಡೆಸುವ ಶಕ್ತಿ ಇಲ್ಲ. ಯಾರೋ ಹೇಳಿದ್ದನ್ನು ಹೇಳ್ಕೋತಾರೆ ಅಷ್ಟೇ. ಎಂದು ಮಾಜಿ ಸಿಎಂ ತಿಳಿಸಿದರು.

ಧರ್ಮಗುರುಗಳ ಸಾವು ನೋವು ತಂದಿದೆ:

ರಂಜಾನ್ ಹಬ್ಬದ ದಿನವೇ ಮುಸ್ಲಿಂ ಧರ್ಮಗುರುಗಳಾದ ಸೈಯದ್ ನಜ್ಮಿ ಮೃತಪಟ್ಟ ವಿಚಾರ ನನಗೆ ಬಹಳ ನೋವುಂಟು ಮಾಡಿದೆ ಎಂದು ಕುಮಾರಸ್ವಾಮಿ ದುಃಖ ವ್ಯಕ್ತಪಡಿಸಿದರು.

ನಮಾಜ್ ಬಳಿಕ ಕುಟುಂಬ ಸಮೇತರಾಗಿ ಊರಿಗೆ ಹೊರಟಿದ್ದವರು ಅಪಘಾತದಲ್ಲಿ ಧರ್ಮ ಗುರುಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಧರ್ಮಗುರುಗಳು, ಅವರ ಧರ್ಮಪತ್ನಿ, ಪುತ್ರಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಉಚಿತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಆದಿಚುಂಚನಗಿರಿ ಶ್ರೀಗಳ ಜತೆ ಮಾತನಾಡಿ ಮನವಿ ಮಾಡಿದ್ದೇನೆ. ಶ್ರೀಗಳು ವೈಯಕ್ತಿಕವಾಗಿ ಆಕೆಗೆ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಯಾವುದೇ ರೀತಿಯ ಚಿಕಿತ್ಸಾ ವೆಚ್ಚವನ್ನು ತೆಗೆದುಕೊಳ್ಳದಂತೆ ಅವರು ಸೂಚಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳು ಒಳ್ಳೆಯ ಹೆಸರು ಗಳಿಸಿದ್ದರು. ಧಾರ್ಮಿಕ ಕೆಲಸದ ಮೂಲಕ ಅವರ ಸಮುದಾಯದಲ್ಲಿ ಬಹಳಷ್ಟು ಸೇವೆ ಮಾಡಿದ್ದರು. ಆವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೆಚ್ಡಿಕೆ ತಿಳಿಸಿದರು.

BJPಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್ | PSI EXAM SCAM |
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್

Next Post

ಪಿಎಸ್‌ ಐ ಪರೀಕ್ಷಾ ಅಕ್ರಮದ ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಕೇಂದ್ರದಿಂದ ಸಾಂಸ್ಕೃತಿಕ ಭಯೋತ್ಪಾದನೆ; ಹಿಂದಿ ಹೇರಿಕೆಗೆ  ಸಿದ್ದರಾಮಯ್ಯ ಕಿಡಿ

ಪಿಎಸ್‌ ಐ ಪರೀಕ್ಷಾ ಅಕ್ರಮದ ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada