• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉರಿಗೌಡ, ನಂಜೇಗೌಡ ವಿಚಾರದಲ್ಲಿ ಸಿ.ಟಿ ರವಿ ಹೊಸ ರಾಗ : ದಾಖಲೆ ಸದ್ಯದಲ್ಲೇ ತೋರಿಸುತ್ತೇವೆಂದು ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
March 21, 2023
in ಕರ್ನಾಟಕ, ರಾಜಕೀಯ
0
ಉರಿಗೌಡ, ನಂಜೇಗೌಡ ವಿಚಾರದಲ್ಲಿ ಸಿ.ಟಿ ರವಿ ಹೊಸ ರಾಗ : ದಾಖಲೆ ಸದ್ಯದಲ್ಲೇ ತೋರಿಸುತ್ತೇವೆಂದು ಸವಾಲು
Share on WhatsAppShare on FacebookShare on Telegram

ತುಮಕೂರು : ರಾಜ್ಯದಲ್ಲಿ ಸದ್ಯ ಉರಿಗೌಡ ಹಾಗೂ ನಂಜೇಗೌಡ ಎಂಬ ಹೆಸರುಗಳು ತುಂಬಾನೇ ಚಾಲ್ತಿಯಲ್ಲಿದೆ. ರಾಜಕೀಯವಾಗಿ ಈ ಎರಡು ಹೆಸರುಗಳು ತುಂಬಾನೇ ಸದ್ದು ಮಾಡುತ್ತಿದೆ . ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ಬೇಡ ಅಂತಾ ನಿರ್ಮಲಾನಂದ ಶ್ರೀಗಳು ಸೂಚನೆ ನೀಡಿದ್ದರೂ ಸಹ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮಾತ್ರ ಮೌನ ವಹಿಸುವಂತೆ ಕಾಣುತ್ತಿಲ್ಲ. ಉರಿಗೌಡ ಹಾಗೂ ನಂಜೇಗೌಡರನ್ನು ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣರಿಗೆ ಹೋಲಿಕೆ ಮಾಡಿದ್ದ ವಿಪಕ್ಷಗಳಿಗೆ ಇಂದು ತುಮಕೂರಿನಲ್ಲಿ ಸಿ.ಟಿ ರವಿ ಟಾಂಗ್​ ನೀಡಿದ್ದಾರೆ.

ADVERTISEMENT


ನಿರ್ಮಲಾನಂದ ಸ್ವಾಮೀಜಿಗಳು ನನ್ನ ಜೊತೆ ಈ ವಿಚಾರವಾಗಿ ಮಾತನಾಡಿದ್ದಾರೆ. ಅಲ್ಲದೇ ಸ್ವಾಮೀಜಿಗಳ ಮಾತಿಗೆ ನಾನು ಗೌರವ ನೀಡುತ್ತೇನೆ. ಆದರೆ ಉರಿಗೌಡ ಹಾಗೂ ನಂಜೇಗೌಡ ಕಾಲ್ಪನಿಕ ಹೆಸರುಗಳಲ್ಲ. ಸುವರ್ಣ ಮಂಡ್ಯ ಎಂಬ ಪುಸ್ತಕದಲ್ಲಿ ಉರಿಗೌಡ ಹಾಗೂ ನಂಜೇಗೌಡ ಎಂಬ ಹೆಸರುಗಳ ಬಗ್ಗೆ ಉಲ್ಲೇಖವಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆ ನಡೆಯಬೇಕಿದೆ. ನಾವು ಎಲ್ಲಾ ದಾಖಲೆಗಳ ಸಮೇತ ನಿರ್ಮಲಾನಂದ ಸ್ವಾಮೀಜಿಗಳ ಬಳಿ ತೆರಳಿ ವಾಸ್ತವ ಪರಿಚಯ ಮಾಡಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.


ಇತಿಹಾಸದಲ್ಲಿ ಟಿಪ್ಪುವನ್ನು ಕೊಂದಿದ್ದು ಯಾರು ಎಂಬುದಕ್ಕೆ ಸೂಕ್ತ ಸಾಕ್ಷ್ಯಗಳಿಲ್ಲ. ಟಿಪ್ಪುವನ್ನು ಕೊಂದಿದ್ಯಾರು ಎಂದರೆ ಅಪರಿಚಿತರು ಎಂದು ಹೇಳುತ್ತಾರೆ. ಬ್ರಿಟೀಷರು ಹಾಗೂ ಪರ್ಶಿಯನ್ನರು ಎಲ್ಲರೂ ದೇಶವನ್ನು ಲೂಟಿ ಮಾಡಲು ಬಂದವರೇ. ಇತಿಹಾಸದಲ್ಲಿ ಟಿಪ್ಪುವನ್ನು ಮತಾಂಧ ಎಂದು ಬಿಂಬಿಸಬೇಕಿತ್ತು. ಆದರೆ ಆತನನ್ನು ಮಹಾನ್​ ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸಿ ಸುಮ್ಮನೇ ವೈಭವೀಕರಿಸಲಾಗಿದೆ ಎಂದು ಗುಡುಗಿದ್ದಾರೆ.


ಇದೇ ವೇಳೆ ಮಾಜಿ ಸಿಎಂ ಹೆಚ್​ಡಿಕೆ ವಿರುದ್ಧವೂ ಗುಡುಗಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ, ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದೇ ಹೆಚ್​ಡಿಕೆ ಉರಿಗೌಡ ಹಾಗೂ ನಂಜೇಗೌಡರನ್ನು ಕೇವಲ ಕಾಲ್ಪನಿಕ ಎಂದು ಹೇಳಿದ್ದಾರೆ. ಈ ರೀತಿ ಹೇಳಿಕೆ ನೀಡಿದ ಹೆಚ್​​ಡಿಕೆ ಈ ಕೂಡಲೇ ನಿರ್ಮಲಾನಾಂದ ಸ್ವಾಮೀಜಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

Tags: BJPBJP Leader CT RavinanjegowdaNirmalanandanatha Swamijiurigowdaಬಿಜೆಪಿ
Previous Post

ಮರಳಿ ಖರ್ಗೆ ಕೋಟೆ ಸೇರಿಕೊಂಡ ಬಾಬುರಾವ್​ ಚಿಂಚನಸೂರ್..! : Baburao Chinchansur Joined CONGRESS Again..!

Next Post

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! 'Munirathna Drops Plans To Make Movie ‘Uri Gowda - Nanje Gowda’

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada