Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಉರಿಗೌಡ, ನಂಜೇಗೌಡ ವಿಚಾರದಲ್ಲಿ ಸಿ.ಟಿ ರವಿ ಹೊಸ ರಾಗ : ದಾಖಲೆ ಸದ್ಯದಲ್ಲೇ ತೋರಿಸುತ್ತೇವೆಂದು ಸವಾಲು

ಮಂಜುನಾಥ ಬಿ

ಮಂಜುನಾಥ ಬಿ

March 21, 2023
Share on FacebookShare on Twitter

ತುಮಕೂರು : ರಾಜ್ಯದಲ್ಲಿ ಸದ್ಯ ಉರಿಗೌಡ ಹಾಗೂ ನಂಜೇಗೌಡ ಎಂಬ ಹೆಸರುಗಳು ತುಂಬಾನೇ ಚಾಲ್ತಿಯಲ್ಲಿದೆ. ರಾಜಕೀಯವಾಗಿ ಈ ಎರಡು ಹೆಸರುಗಳು ತುಂಬಾನೇ ಸದ್ದು ಮಾಡುತ್ತಿದೆ . ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ಬೇಡ ಅಂತಾ ನಿರ್ಮಲಾನಂದ ಶ್ರೀಗಳು ಸೂಚನೆ ನೀಡಿದ್ದರೂ ಸಹ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮಾತ್ರ ಮೌನ ವಹಿಸುವಂತೆ ಕಾಣುತ್ತಿಲ್ಲ. ಉರಿಗೌಡ ಹಾಗೂ ನಂಜೇಗೌಡರನ್ನು ಸಿಟಿ ರವಿ ಮತ್ತು ಅಶ್ವತ್ಥ ನಾರಾಯಣರಿಗೆ ಹೋಲಿಕೆ ಮಾಡಿದ್ದ ವಿಪಕ್ಷಗಳಿಗೆ ಇಂದು ತುಮಕೂರಿನಲ್ಲಿ ಸಿ.ಟಿ ರವಿ ಟಾಂಗ್​ ನೀಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ


ನಿರ್ಮಲಾನಂದ ಸ್ವಾಮೀಜಿಗಳು ನನ್ನ ಜೊತೆ ಈ ವಿಚಾರವಾಗಿ ಮಾತನಾಡಿದ್ದಾರೆ. ಅಲ್ಲದೇ ಸ್ವಾಮೀಜಿಗಳ ಮಾತಿಗೆ ನಾನು ಗೌರವ ನೀಡುತ್ತೇನೆ. ಆದರೆ ಉರಿಗೌಡ ಹಾಗೂ ನಂಜೇಗೌಡ ಕಾಲ್ಪನಿಕ ಹೆಸರುಗಳಲ್ಲ. ಸುವರ್ಣ ಮಂಡ್ಯ ಎಂಬ ಪುಸ್ತಕದಲ್ಲಿ ಉರಿಗೌಡ ಹಾಗೂ ನಂಜೇಗೌಡ ಎಂಬ ಹೆಸರುಗಳ ಬಗ್ಗೆ ಉಲ್ಲೇಖವಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆ ನಡೆಯಬೇಕಿದೆ. ನಾವು ಎಲ್ಲಾ ದಾಖಲೆಗಳ ಸಮೇತ ನಿರ್ಮಲಾನಂದ ಸ್ವಾಮೀಜಿಗಳ ಬಳಿ ತೆರಳಿ ವಾಸ್ತವ ಪರಿಚಯ ಮಾಡಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.


ಇತಿಹಾಸದಲ್ಲಿ ಟಿಪ್ಪುವನ್ನು ಕೊಂದಿದ್ದು ಯಾರು ಎಂಬುದಕ್ಕೆ ಸೂಕ್ತ ಸಾಕ್ಷ್ಯಗಳಿಲ್ಲ. ಟಿಪ್ಪುವನ್ನು ಕೊಂದಿದ್ಯಾರು ಎಂದರೆ ಅಪರಿಚಿತರು ಎಂದು ಹೇಳುತ್ತಾರೆ. ಬ್ರಿಟೀಷರು ಹಾಗೂ ಪರ್ಶಿಯನ್ನರು ಎಲ್ಲರೂ ದೇಶವನ್ನು ಲೂಟಿ ಮಾಡಲು ಬಂದವರೇ. ಇತಿಹಾಸದಲ್ಲಿ ಟಿಪ್ಪುವನ್ನು ಮತಾಂಧ ಎಂದು ಬಿಂಬಿಸಬೇಕಿತ್ತು. ಆದರೆ ಆತನನ್ನು ಮಹಾನ್​ ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸಿ ಸುಮ್ಮನೇ ವೈಭವೀಕರಿಸಲಾಗಿದೆ ಎಂದು ಗುಡುಗಿದ್ದಾರೆ.


ಇದೇ ವೇಳೆ ಮಾಜಿ ಸಿಎಂ ಹೆಚ್​ಡಿಕೆ ವಿರುದ್ಧವೂ ಗುಡುಗಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ, ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದೇ ಹೆಚ್​ಡಿಕೆ ಉರಿಗೌಡ ಹಾಗೂ ನಂಜೇಗೌಡರನ್ನು ಕೇವಲ ಕಾಲ್ಪನಿಕ ಎಂದು ಹೇಳಿದ್ದಾರೆ. ಈ ರೀತಿ ಹೇಳಿಕೆ ನೀಡಿದ ಹೆಚ್​​ಡಿಕೆ ಈ ಕೂಡಲೇ ನಿರ್ಮಲಾನಾಂದ ಸ್ವಾಮೀಜಿಗಳ ಬಳಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

‘ಸೆಂಗೋಲ್ ’ ಅಧಿಕಾರ ಹಸ್ತಾಂತರದ ಸಂಕೇತವಾಗಿರಲಿಲ್ಲ : ಜೈರಾಮ್​ ರಮೇಶ್​
ದೇಶ

‘ಸೆಂಗೋಲ್ ’ ಅಧಿಕಾರ ಹಸ್ತಾಂತರದ ಸಂಕೇತವಾಗಿರಲಿಲ್ಲ : ಜೈರಾಮ್​ ರಮೇಶ್​

by Prathidhvani
May 26, 2023
ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ
ಕರ್ನಾಟಕ

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

by Prathidhvani
May 25, 2023
Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!
Top Story

Pramod Muthalik Strikes Against Congress | ಕಾಂಗ್ರೆಸ್​​​ ವಿರುದ್ಧ ಹರಿಹಾಯ್ದ ಪ್ರಮೋದ್​ ಮುತಾಲಿಕ್..!

by ಪ್ರತಿಧ್ವನಿ
May 28, 2023
ನೂತನ ಸಚಿವರಿಗೆ ಟಾರ್ಗೆಟ್​ ಫಿಕ್ಸ್​ ಮಾಡಿದ ಸಿಎಂ ಸಿದ್ದರಾಮಯ್ಯ
ರಾಜಕೀಯ

ನೂತನ ಸಚಿವರಿಗೆ ಟಾರ್ಗೆಟ್​ ಫಿಕ್ಸ್​ ಮಾಡಿದ ಸಿಎಂ ಸಿದ್ದರಾಮಯ್ಯ

by Prathidhvani
May 28, 2023
ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ತಲವಾರಿನಿಂದ ಹಲ್ಲೆ
ಕರ್ನಾಟಕ

ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ತಲವಾರಿನಿಂದ ಹಲ್ಲೆ

by Prathidhvani
May 24, 2023
Next Post
ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! ‘Munirathna Drops Plans To Make Movie ‘Uri Gowda – Nanje Gowda’

ಒಕ್ಕಲಿಗರನ್ನು ಮುಟ್ಟಿ ಬಿಸಿ ತಟ್ಟಿಸಿಕೊಂಡ ಬಿಜೆಪಿ.. ಉರಿ-ನಂಜು ಯೂಟರ್ನ್​..! 'Munirathna Drops Plans To Make Movie ‘Uri Gowda - Nanje Gowda’

ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket

ಕೆ.ಆರ್‌ ಕ್ಷೇತ್ರ - ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra - Ticket

‘ಪ್ರಣಯಂʼ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್..! : Pranayam Movie Lyrical Song Release..!

'ಪ್ರಣಯಂʼ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್..! : Pranayam Movie Lyrical Song Release..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist