• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
November 21, 2025
in Top Story, ಕರ್ನಾಟಕ, ರಾಜಕೀಯ
0
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೋಳಾಗಿದ್ದು, ಜನರ ಪಾಲಿಗೆ ಗೋಳು ಹಾಗೂ ರೈತರಿಗೆ ಹೂಳು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

ADVERTISEMENT
DK Shivakumar :  ಯಾವ ನವೆಂಬರ್​ ಕ್ರಾಂತಿಯೂ ಆಗೋದಿಲ್ಲ: ಡಿ.ಕೆ.ಶಿ #pratidhvani

ಕಾಂಗ್ರೆಸ್ ಕರ್ಮಕಾಂಡಗಳ ಅನಾವರಣ ಪೋಸ್ಟರ್ ಬಿಡುಗಡೆ ಬಳಿಕ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಕಾಯಿಲೆ ಬಿದ್ದು ಸೊರಗಿ ಡ್ರಿಪ್ ಹಾಕಿಸಿಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೆಹಲಿಗೆ ಹೋದವರಿಗೆ ಕ್ಯಾಬಿನೆಟ್‍ನಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಶಾಸಕರ ನಿಧಿ ಕೊಡುವುದಿಲ್ಲ ಎಂದು ಧಮ್ಕಿ ಹಾಕಿರುವುದು ಕೂಡ ಮಾಧ್ಯಮಗಳಲ್ಲಿ ಬರುತ್ತಿದೆ ಎಂದರು.

ಒಂದು ಕಡೆ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿ ಎನ್ನುತ್ತಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರು ದೆಹಲಿಗೆ ಯಾಕೆ ಹೋದೆ ಎಂದು ಕೇಳುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಎರಡುವರೆ ವರ್ಷದ ಓಳು. ವರೆ ವರ್ಷ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರಿಗೆ ಪೂರ್ತಿ ವರಿ ತಂದಿದೆ. ರಾಜ್ಯದ ಜನರ ಪಾಲಿಗೆ ಇದು ಬೆಲೆ ಏರಿಕೆಯ ಹೊರೆ, ಜನರಿಗೆ ಬರೆ ಎಂದು ಆಕ್ಷೇಪಿಸಿದರು.

DK Shivakumar :  ಯಾವ ನವೆಂಬರ್​ ಕ್ರಾಂತಿಯೂ ಆಗೋದಿಲ್ಲ: ಡಿ.ಕೆ.ಶಿ #pratidhvani

ಇವತ್ತಿನವರೆಗೂ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

25 ವಸ್ತುಗಳ ಬೆಲೆ ಏರಿಸಿದ್ದಾರೆ. ವಿದ್ಯುತ್, ಹಾಲು ದರ, ನೋಂದಣಿ ಶುಲ್ಕ, ಪೆಟ್ರೋಲ್, ಡೀಸೆಲ್, ಅಬಕಾರಿ ಸೇರಿ- ಏನೇನಿದೆಯೋ ಅದೆಲ್ಲವೂ ದುಬಾರಿಯಾಗಿದೆ. ಒಂದೇ ವರ್ಷದಲ್ಲಿ ಇಷ್ಟು ಬೆಲೆ ಏರಿಸಿದ ನಂಬರ್ 1 ಪಾಪಿ ಸರಕಾರ ಇದೆಂದು ಆಕ್ಷೇಪಿಸಿದರು. ಇವತ್ತಿನವರೆಗೂ ಅತಿ ಹೆಚ್ಚು ಸಾಲ (2 ಲಕ್ಷ ಕೋಟಿಗೂ ಹೆಚ್ಚು) ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ಇವರು ಬೆಲೆ ಏರಿಕೆ, ಅಕ್ರಮ, ಹಗರಣಗಳ, ಸಾಲ ಮಾಡುವುದರಲ್ಲಿ ಚಾಂಪಿಯನ್ ಎಂದು ಟೀಕಿಸಿದರು.


ರೈತರನ್ನು ಸಾಯಿಸುವುದರಲ್ಲಿ ಇವರು ಚಾಂಪಿಯನ್, ಗುತ್ತಿಗೆದಾರರ ಆತ್ಮಹತ್ಯೆಯಲ್ಲಿ ಚಾಂಪಿಯನ್, ಜಾತಿಗಳ ನಡುವೆ ಬೆಂಕಿ ಹಚ್ಚುವುದರಲ್ಲಿ ಚಾಂಪಿಯನ್, ದೆಹಲಿಗೆ ಗರಿಷ್ಠ ಹಣ ಕಳಿಸುವುದರಲ್ಲೂ ಇವರೇ ಚಾಂಪಿಯನ್- ಈ ಥರ ಎರಡೂವರೆ ವರ್ಷದಲ್ಲಿ ನೀವು ಚಾಂಪಿಯನ್ ಆಗಿದ್ದೀರಿ ಎಂದು ವ್ಯಂಗ್ಯವಾಗಿ ನುಡಿದರು.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani

ನಿಮ್ಮನ್ನು ಸಿಎಂ ಆಗಿ ಆಯ್ಕೆ ಮಾಡಿದ ಶಾಸಕರೇ ನೀವು ಬೇಡ ಎಂದು ದೆಹಲಿಯಲ್ಲಿ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ. ಇಷ್ಟಿದ್ದರೂ ಕ್ರಾಂತಿ- ಭ್ರಾಂತಿ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಟೀಕಿಸಿದರು. ಶಾಸಕರು ಖರ್ಗೆ ಮನೆಗೆ ವಾಂತಿ ಮಾಡಲು ಹೋಗಿದ್ದರೇ ಎಂದು ಕೇಳಿದರು.

Tags: BJPCM Siddaramaiahcongressdcm dk shivkumarPoliticsR Ashok
Previous Post

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

Next Post

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada