• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನರ್ಸ್‌ ಗಳಿಗೆ ಸರ್ಟಿಫಿಕೇಟ್‌ ಕೊಡಿಸುವುದರಲ್ಲಿ ಅಶ್ವಥ್‌ ನಾರಾಯಣ್‌ ಎತ್ತಿದ ಕೈ: ಎಚ್.ಡಿ. ಕುಮಾರಸ್ವಾಮಿ

Any Mind by Any Mind
May 5, 2022
in ಕರ್ನಾಟಕ
0
ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್
Share on WhatsAppShare on FacebookShare on Telegram

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬಗ್ಗೆ ತಮಗೆ ಯಾವುದೇ ರೀತಿಯ ಸಾಫ್ಟ್ ಕಾರ್ನರ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ADVERTISEMENT

ಪಕ್ಷದ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಅಶ್ವತ್ಥನಾರಾಯಣ ಬಗ್ಗೆ ನನಗೆ ಮೃದು ಧೋರಣೆ ಇದೆ ಕೆಲವರು ಹೇಳಿದ್ದಾರೆ. ಅಂತಹ ಯಾವ ಮೃದು ನಿಲುವು ನನಗೆ ಇಲ್ಲ. ಬದಲಿಗೆ, ದಾಖಲೆ ಇಟ್ಟು ಮಾತನಾಡಿ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದರು.

ಸರ್ಟಿಫಿಕೇಟ್ ಕೊಡಿಸುವುದರಲ್ಲಿ ಅಶ್ವತ್ಥನಾರಾಯಣ ಅವರದ್ದು ಎತ್ತಿದ ಕೈ ಅನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹಿಂದೆ ಅವರು ನರ್ಸುಗಳಿಗೆ ಸರ್ಟಿಫಿಕೇಟ್ ಕೊಡಿಸಿ ಹೆಸರುವಾಸಿ ಆಗಿದ್ದರು. ಪರೀಕ್ಷೆ ಬರೆಯದೇ ಇದ್ದವರಿಗೂ ಕೊಟ್ಟಿದ್ದರು. ಕಾಂಗ್ರೆಸ್ ನವರು ಅದನ್ನಾದರೂ ಹೇಳಲಿ. ಅದಕ್ಕೆ ದಾಖಲೆ ಇಟ್ಟುಕೊಂಡು ಮಾತನಾಡಲು ಎಂದು ನಾನು ಹೇಳಿದ್ದು ಎಂದು ಕುಮಾರಸ್ವಾಮಿ ಹೇಳಿದರು.

ಈ ಸರಕಾರ ಎಲ್ಲಕ್ಕೂ ಮೌನವಾಗಿದೆ. ಪ್ರತಿ ಹಗರಣದ ಬಗ್ಗೆ ಕೂಡ ಮೌನವಾಗಿದೆ. ಕಳೆದ ಎರಡು ತಿಂಗಳಿಂದ ನಡೆದ ಗಲಾಟೆ, ಗಲಭೆಗಳು ನಡೆದಾಗಲೂ ಸರಕಾರ ಸುಮ್ಮನೆ ಇತ್ತು. ಎಲ್ಲಕ್ಕೂ ಮೌನಂ ಸಮ್ಮತಿ ಲಕ್ಷಣಂ ಅನ್ನುವಂತ ಪರಿಸ್ಥಿತಿ ಇದೆ. ಇದು ರಾಜ್ಯ ಹಣೆಬರಹ ಎಂದು ಅವರು ಕಿಡಿಕಾರಿದರು.

ಎರಡೂ ರಾಷ್ಟ್ರೀಯ ಪಕ್ಷಗಳ ನಡವಳಿಕೆಯನ್ನು ಜನ ನೋಡ್ತಾ ಇದ್ದಾರೆ. ರಾಜ್ಯದಲ್ಲಿ ಉತ್ತಮ ಸರ್ಕಾರ ಆಡಳಿತಕ್ಕೆ ಬರಬೇಕು. ಎರಡೂ ಪಕ್ಷಗಳ ನಾಯಕರು ನಾಡಿನ‌ ಜನತೆಯ ಜೊತೆ ಚೆಲ್ಲಾಟ ಆಡ್ತಾ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಒಂದು ಸಣ್ಣ ಪ್ರಕರಣದ ಬಗ್ಗೆ ಯಾರೋ ಕೆಲವರು ಮಾತನಾಡುತ್ತಿದ್ದಾರೆ. 20 ಲಕ್ಷ ರೂಪಾಯಿ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕೆಪಿಎಸ್ಸಿ ಶುದ್ಧ ಮಾಡ್ತೀವಿ ಅಂತ ಹೊರಟರು. ಆದರೆ, ಶ್ಯಾಮ್ ಭಟ್ಟರನ್ನು ತಂದು ಅಲ್ಲಿ ಕೂರಿಸಿದ ಮೇಲೆ ಅಲ್ಲಿ ಉದ್ಯೋಗದ ಮುಕ್ತ ಮಾರುಕಟ್ಟೆ ಶುರು ಆಯಿತು. ಎಸಿ ಹುದ್ದೆಗೆ ಇಷ್ಟು, ಡಿವೈಎಸ್ ಪಿ ಹುದ್ದೆಗೆ ಇಷ್ಟು ಅಂತ ವ್ಯಾಪಾರ ನಡೆಯಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ? ಭ್ರಷ್ಟಾಚಾರ ಮತ್ತು ಕಮಿಷನ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ತಮಗೆ ಬೇಕಾದವರನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿಕೊಂಡು ಅಮಾಯಕರ ಬಳಿ ಹಣ ಪೀಕಿಸುತ್ತಿದ್ದರು. ಹಾಗೆ ವಂಚನೆಗೆ ಒಳಗಾದ ಎಷ್ಟೋ ಜನ ನನ್ನ ಬಳಿ ಬಂದಿದ್ದಾರೆ. ಕಾಂಗ್ರೆಸ್ ಸರಕಾರ ಮಾಡಿದ್ದನ್ನೇ ಬಿಜೆಪಿ ಸರಕಾರವು ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಇವರ ಆಟಕ್ಕೆ ಅವಕಾಶ ಇರಲಿಲ್ಲ. ತಮಗೆ ಬೇಕಾದವರನ್ನು ಕೆಪಿಎಸ್ಸಿ ಸದಸ್ಯರನ್ನಾಗಿ ನೇಮಕ ಮಾಡುವ ಬಗ್ಗೆ ನನ್ನ ಮೇಲೂ ಸಿದ್ದರಾಮಯ್ಯ ಒತ್ತಡ ಹಾಕಿದ್ದರು. ಆದರೆ, ಅವರು ಶಿಫಾರಸು ಮಾಡಿದ ವ್ಯಕ್ತಿಯ ಬಗ್ಗೆ ನನಗೆ ಮಾಹಿತಿ ಇದ್ದ ಕಾರಣಕ್ಕೆ ನಾನು ಆ ವ್ಯಕ್ತಿಯನ್ನು ಕೆಪಿಎಸ್ಸಿಗೆ ನೇಮಕ ಮಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹೊರಗೆಡವಿದರು.

ಹೀಗೆ ಹಣ ಕೊಟ್ಟು ಬಂದವರು ಸರಿಯಾಗಿ ಕೆಲಸ ಮಾಡುವುದಿಲ್ಲ. ಅವರೆಲ್ಲ ನ್ಯಾಯಯುತವಾಗಿ ಜನರ ಸೇವೆ ಮಾಡಲ್ಲ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಾರೆ. ಇದನ್ನು ಜನ ಅರಿತುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಈ ಹಿಂದೆ ಹಲವಾರು ಹಗರಣಗಳು ಹೊರ ಬಂದವು. ಅವೆಲ್ಲ ಈಗ ಏನಾಗಿವೆ? ನಾನೇ ಹಲವಾರು ಹಗರಣಗಳ ಬಗ್ಗೆ ದಾಖಲೆ ಸಮೇತ ಜನರ ಮುಂದೆ ಇಟ್ಟಿದ್ದೆ. ಆದರ ಪ್ರತಿಫಲ ಏನಾಯಿತು? ಈ‌ ನಾಡಿನಿಂದ ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರಗಿಡಿ ಎಂದು ಅವರು ಜನರನ್ನು ಕೋರಿದರು.

ಡ್ರಗ್ಸ್ ಕೇಸ್ ನಡೆದಾಗ ಮಾಜಿ ಸಿಎಂ ಇದ್ದಾರೆ ಅಂತ ತೇಲಿಬಿಟ್ಟರು. ಆ ಮಾಜಿ ಸಿಎಂ ಯಾರು ಎಂದು ನಾನು ಕೇಳಿದೆ. ಅವರು ಯಾರೆಂದು ಹೇಳಲೇ ಇಲ್ಲ. ಆ ಪ್ರಕರಣವೂ ಹಳ್ಳ ಹಿಡಿಯಿತು. ಆಮೇಲೆ ಲಾಟರಿ ಕೇಸ್ ಏನ್ ಆಯಿತು ಎನ್ನುವುದು ರಾಜ್ಯದ ಜನರಿಗೆ ಗೊತ್ತಿದೆ. ಯಾವ ಕೇಸ್ ಗಳಿಗೂ ತಾರ್ಕಿಕ ಅಂತ್ಯ ಕಾಣಿಸುತ್ತಿಲ್ಲ. ಪಿಎಸ್ಐ ಕೇಸ್ ಅನ್ನು ಕೂಡ ಹಾಗೆಯೇ ಮುಚ್ಚಿ ಹಾಕುತ್ತಾರೆ ಎಂದು ಕುಮಾರಸ್ವಾಮಿ ಗುಡುಗಿದರು.

ಹದಿನೈದು ದಿನ ಪಿಎಸ್ಐ ಹಗರಣ ಭಾರೀ ಪ್ರಚಾರದಲ್ಲಿ ಇರುತ್ತದೆ. ಆಮೇಲೆ ಗುಂಡಿ ತೋಡಿ ಮುಚ್ಚಿ ಹಾಕುತ್ತಾರೆ. ಉದಾಹರಣೆಗೆ, ಕಾಂಗ್ರೆಸ್ ಅವಧಿಯಲ್ಲಿ ಪಿಯುಸಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಅಗ ಶಿವಕುಮಾರ್ ಅನ್ನುವ ವ್ಯಕ್ತಿಯನ್ನು ಬಂಧಿಸಲಾಯಿತು. ಆಮೇಲೆ ಆ ಪ್ರಕರಣ ಏನಾಯಿತು ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಅವರು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಹಾಕಿಕೊಟ್ಟ ಭ್ರಷ್ಟಾಚಾರದ ಅಡಿಪಾಯ ಇಂದು ಬೃಹತ್ ಆಗಿ ಬೆಳೆದು ನಿಂತಿದ್ದು, ಅದನ್ನು ಬಿಜೆಪಿ ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: ashwath narayanHD KumaraswamyPratidhvani
Previous Post

ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಸಿನಿಮಾದ ಫಸ್ಟ್ ಲುಕ್ ರಿಲೀಸ್!

Next Post

ವಾರ್ನರ್, ಪೊವೆಲ್ ಅಬ್ಬರಕ್ಕೆ ಮಣಿದ ಹೈದರಾಬಾದ್: ಡೆಲ್ಲಿಗೆ 21 ರನ್ ಜಯ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ವಾರ್ನರ್, ಪೊವೆಲ್ ಅಬ್ಬರಕ್ಕೆ ಮಣಿದ ಹೈದರಾಬಾದ್: ಡೆಲ್ಲಿಗೆ 21 ರನ್ ಜಯ

ವಾರ್ನರ್, ಪೊವೆಲ್ ಅಬ್ಬರಕ್ಕೆ ಮಣಿದ ಹೈದರಾಬಾದ್: ಡೆಲ್ಲಿಗೆ 21 ರನ್ ಜಯ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada