ಲಂಚದ ಆರೋಪದಡಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದು ಬಂಧನವಾಗಿರುವ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣದಿಂದ ಬಿಜೆಪಿ ಪಕ್ಷವು ಮುಜುಗರಕ್ಕೀಡಾಗಿದೆ. ಕಾಂಗ್ರೆಸ್ಗೆ ಈ ಪ್ರಕರಣದಿಂದ ಬಿಜೆಪಿಯನ್ನು ಟೀಕಿಸುತ್ತಿದೆ.

ಲೋಕಾಯುಕ್ತ ಅಧಿಕಾರಿಗಳು ಚಂದ್ರು ಲಮಾಣಿ ಸೇರಿ ಮೂವರನ್ನು ಬಂಧಿಸಿರುವ ಬಗ್ಗೆ ಹೆಚ್ಚಾಗಿ ಪ್ರತಿಕ್ರಿಯೆ ನೀಡಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನಿರಾಕರಿಸಿದ್ದು, ಪೂರ್ಣ ಮಾಹಿತಿ ಪಡೆದುಕೊಂಡು ನಂತರ ಮಾತನಾಡುವೆ ಎಂದು ಹೇಳಿದರು.

ಲಂಚದ ಪ್ರಕರಣದಲ್ಲಿ ಚಂದ್ರು ಲಮಾಣಿ ಬಂಧನ ಸುದ್ದಿಯಿಂದ ಹೈಕಮಾಂಡ್, ರಾಜ್ಯ ಬಿಜೆಪಿಗೆ ಕೂಡಲೇ ವಿವರವಾಗಿ ವರದಿ ನೀಡುವಂತೆ ಹೇಳಿದೆ. ಸದ್ಯದಲ್ಲೇ ಚಂದ್ರು ಲಮಾಣಿಯನ್ನು ಪಕ್ಷದಿಂದ ಅಮಾನತು ಮಾಡುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಗದಗ ಲಕ್ಷ್ಮೇಶ್ವರ ಪಟ್ಟಣದಲ್ಲಿ ಚಂದ್ರು ಲಮಾಣಿ ವಿಚಾರ ಖಂಡಿಸಿ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ರಾಜ್ಯ ಕಾಂಗ್ರೆಸ್ನ ಷಡ್ಯಂತ್ರದ ಭಾಗವಾಗಿ ಬಂಧಿಸಲಾಗಿದೆ ಎಂದು ಕಾರ್ಯಕರ್ತರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.






