ಇತ್ತೀಚೆಗೆ ಮೂಡಿಗೆರೆ ಕ್ಷೇತ್ರವನ್ನು ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಪಟ್ಟಿಯಿಂದ ಕೈಬಿಟ್ಟ ರಾಜ್ಯ ಸರ್ಕಾರದ ವಿರುದ್ಧ ದಲಿತ ಬಲಿಗೈ ಸಮುದಾಯದ ನಾಯಕ ಮತ್ತು ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಧರಣಿ ನಡೆಸಿದ್ದರು. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದ ತನ್ನದೇ ಪಕ್ಷದ ನಾಯಕರ ವಿರುದ್ಧ ಧರಣಿ ನಡೆಸಿ ಎಂಪಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದರು. ಈ ವೇಳೆ ನನ್ನದು ಮೀಸಲಾತಿ ಕ್ಷೇತ್ರ ಅನ್ನುವ ಕಾರಣಕ್ಕೋ ಯಾಕೋ ಕಡೆಗಣಿಸ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಳಲು ತೋಡಿಕೊಂಡಿದ್ದರು.
ನನ್ನ ಕ್ಷೇತ್ರವನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ. ನಮ್ಮ ಸರ್ಕಾರ ಈ ತರ ತಾರತಮ್ಯ ಮಾಡಬಾರದು. ನನ್ನ ಕ್ಷೇತ್ರ ಆದಷ್ಟು ಬೇಗ ಜನರಲ್ ಕ್ಷೇತ್ರ ಆಗಲಿ ಎಂದು ಅನಿಸುತ್ತಿದೆ. ಯಾಕೋ ನಮ್ಮದು ದಲಿತ ಮೀಸಲಾತಿ ಕ್ಷೇತ್ರ ಎಂಬ ಕಾರಣಕ್ಕೆ ಕಡೆಗಣನೆ ಮಾಡುತ್ತಿದ್ದಾರಾ? ಎಂಬ ಅನುಮಾನ ಹುಟ್ಟಿಕೊಂಡಿದೆ. ಈ ತಾರತಮ್ಯ ಹಲವು ವರ್ಷಗಳಿಂದ ಇದೆ ಎಂದು ಎಂಪಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದರು.
2019ರಲ್ಲಿ ಅತಿಯಾದ ಅತಿವೃಷ್ಟಿ ಆಗಿತ್ತು. 7 ಜನ ಮನೆ ಸಮೇತ ಕೊಚ್ಚಿಕೊಂಡು ಹೋಗಿದ್ದರು. ಮನೆಗಳು ಕಾಫಿತೋಟ ಕೊಚ್ಚಿಕೊಂಡು ಹೋಗಿತ್ತು. ಅಂದು ನಮ್ಮ ಕ್ಷೇತ್ರದ ಜನರಿಗೆ ಪರಿಹಾರ ನೀಡದೇ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಮಾಡಿತ್ತು. ಇದಕ್ಕೂ ಮುನ್ನ 2018ರಲ್ಲಿ ಎಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ನನ್ನ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿದ್ದರು. ಆದರೆ, ಈಗ ನಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಆದರೂ, ನಮಗೆ ಅನುದಾನ ನೀಡುತ್ತಿಲ್ಲ. ಯಾಕೋ ನಾವು ದಲಿತರು ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಅನಿಸುತ್ತಿದೆ ಎಂದು ಪುನರುಚ್ಚರಿಸಿದ್ದರು. ಈ ಬೆನ್ನಲ್ಲೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಂದರೆ ನನಗೆ ತುಂಬಾ ಇಷ್ಟ ಎಂದು ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಹೇಳಿರುವುದು ಭಾರೀ ಚರ್ಚೆಗೀಡಾಗಿದೆ.
ಹೌದು, ತನ್ನ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದ ಎಂ.ಪಿ ಕುಮಾರಸ್ವಾಮಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದರು. ಭೇಟಿ ಬಳಿಕ ಸಿದ್ದರಾಮಯ್ಯ ಹುಟ್ಟು ಹಬ್ಬವಿತ್ತು. ಪ್ರತಿವರ್ಷ ನಾನು ಅವರಿಗೆ ಶುಭಕೋರಲು ಹೋಗ್ತೇನೆ. ಸಿದ್ದರಾಮಯ್ಯ ಅಂದ್ರೆ ನನಗೆ ತುಂಬ ಇಷ್ಟ. ಅಹಿಂದ ನಾಯಕ ಅಂತ ಸಿದ್ದರಾಮಯ್ಯ ಒಬ್ಬರೇ ಇದ್ದಾರೆ. ಅವರನ್ನು ಗೌರವಿಸಬೇಕು ಅದಕ್ಕಾಗಿ ನಾನು ಹೋಗಿದ್ದೆ ಎಂದ್ದಿದ್ದರು. ಆದರೆ, ಸಿದ್ದರಾಮಯ್ಯ ಭೇಟಿ ವೇಳೆ ಎಂ.ಪಿ ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾಗುವುದರ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯಲ್ಲಿ ದಲಿತರಿಗೆ ಯಾವುದೇ ಮಾನ್ಯತೆ ನೀಡುತ್ತಿಲ್ಲ. ಈ ಹಿಂದಿನಿಂದಲೂ ನನ್ನ ಬಗ್ಗೆ ಒಂದು ರೀತಿಯ ನಿರ್ಲಕ್ಷ್ಯ ಮತ್ತು ತಾತ್ಸರ ಇದೆ. ಹಾಗಾಗಿ ನನಗೆ ಕಾಂಗ್ರೆಸ್ ಸೇರಲು ಅವಕಾಶ ಮಾಡಿಕೊಡಿ ಎಂದು ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ಅಲ್ಲದೇ ಈ ಸಂಬಂಧ ಮಾಧ್ಯಮವರೊಂದಿಗೆ ಮಾತಾಡಿದ್ದಾರೆ ಕುಮಾರಸ್ವಾಮಿ.
ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತಾಡಿರುವ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷರನ್ನು ನಾನು ಸಂಪರ್ಕ ಮಾಡಿಲ್ಲ. ನಾನು ಕ್ಷೇತ್ರದ ಅನುದಾನಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಸಿಎಂ ಅನುದಾನ ಕೊಡ್ತೇನೆ ಅಂತಾ ಹೇಳಿದ್ದಾರೆ. ಅನುದಾನ ಕೊಡಲಿಲ್ಲ ಅಂದ್ರೆ ನನ್ನ ತೀರ್ಮಾನ ನಾನು ಮಾಡ್ತೇನೆ. ನನಗೆ ಸರಿಯಾಗಿ ಸ್ಪಂದನೆ ಸಿಕ್ಕಿಲ್ಲ. ಈ ಬಾರಿಯೂ ಅನುದಾನ ಸಿಗಲಿಲ್ಲ ಅಂದ್ರೆ ಬೇರೆ ತರ ಯೋಚನೆ ಮಾಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸೇರುವ ಎಚ್ಚರಿಕೆ ನೀಡಿದ್ದಾರೆ.
ಎಂ.ಪಿ ಕುಮಾರಸ್ವಾಮಿ ಬೆಳೆಯೋಕೆ ಸಿ.ಟಿ ರವಿ ಅಡ್ಡಿಪಡಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಹೀಗಾಗಿ ನನಗೂ ಸಿಟಿ ರವಿ ಅವರಿಗೂ ಯಾವತ್ತಿಗೂ ಚೆನ್ನಾಗಿಲ್ಲ. ರಾಜಕೀಯಕ್ಕೆ ಬಂದಾಗಿಂದಲೂ ಚೆನ್ನಾಗಿಲ್ಲ. ಆದರೆ ಮತದಾರರ ಜೊತೆ ನಾನು ಚೆನ್ನಾಗಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೇ ನಾನು ನನ್ನ ಸ್ವಂತ ಬಲದ ಮೇಲೆ ಚುನಾವಣೆ ಗೆದ್ದಿದ್ದೇನೆ ಎನ್ನುವ ಮೂಲಕ ಸಿಟಿ ರವಿಗೆ ತಿರುಗೇಟು ನೀಡಿದ್ದಾರೆ.

ಈ ಹಿಂದೆಯೂ ಯಡಿಯೂರಪ್ಪ ಸಿಎಂ ಆಗಿದ್ದಾಗ ಎಂ.ಪಿ.ಕುಮಾರಸ್ವಾಮಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು. ನನಗೆ ನಿಗಮ ಮಂಡಳಿ ಸ್ಥಾನ ಬೇಡ, ತಾವು ಅನ್ಯತಾ ಭಾವಿಸಬಾರದು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಯಡಿಯೂರಪ್ಪಗೆ ಪತ್ರ ಬರೆದಿದ್ದರು. ಇದೇ ವೇಳೆ ಎಸ್ಸಿ ಬಲಗೈ ಸಮುದಾಯದ ಶಾಸಕರಲ್ಲಿ ಯಾರಿಗೂ ಮಂತ್ರಿ ಸ್ಥಾನ ಯಾಕೆ ನೀಡಲಿಲ್ಲ ಎಂದು ಪ್ರಶ್ನಿಸಿದ್ದರು. ಈ ಎಲ್ಲ ವಿಚಾರಗಳಿಂದ ಬೇಸರಗೊಂಡಿರುವ ಎಂ.ಪಿ ಕುಮಾರಸ್ವಾಮಿ ಕಾಂಗ್ರೆಸ್ ಸೇರೋದು ಪಕ್ಕಾ ಎನ್ನುತ್ತಿವೆ ಮೂಲಗಳು.
ಸಿದ್ದರಾಮಯ್ಯ ಭೇಟಿಗೆ ಸ್ಪಷ್ಟನೆ ಕೊಟ್ಟ ಬಿಜೆಪಿ ಶಾಸಕ
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ಹುಟ್ಟುಹಬ್ಬವಿತ್ತು. ಪ್ರತಿವರ್ಷ ನಾನು ಅವರಿಗೆ ಶುಭಕೋರಲು ಹೋಗುತ್ತೇನೆ. ಸಿದ್ದರಾಮಯ್ಯ ಅಂದರೆ ನನಗೆ ತುಂಬ ಇಷ್ಟ. ಅಹಿಂದ ನಾಯಕ ಅಂತ ಸಿದ್ದರಾಮಯ್ಯ ಒಬ್ಬರೇ ಇದ್ದಾರೆ. ಅವರನ್ನು ಗೌರವಿಸಬೇಕು ಅದಕ್ಕಾಗಿ ನಾನು ಹೋಗಿದ್ದೆ ಎಂದು ಸ್ಪಷ್ಟಪಡಿಸಿದರು.
ನಾನು ಕ್ಷೇತ್ರದ ಅನುದಾನಕ್ಕಾಗಿ ಹೋರಾಟ ಮಾಡುತ್ತಿದ್ದೇನೆ. ಮುಖ್ಯಮಂತ್ರಿಗಳು ಅನುದಾನ ಕೊಡುತ್ತೇನೆಂದು ಹೇಳಿದ್ದಾರೆ. ಅನುದಾನ ಕೊಡಲಿಲ್ಲ ಅಂದರೆ ನನ್ನ ತೀರ್ಮಾನ ನಾನು ಮಾಡುತ್ತೇನೆ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.