ಮೈಸೂರು – ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಕ್ರೆಡಿಟ್ ಅನ್ನು ಬಿಜೆಪಿ ತೆಗೆದುಕೊಳ್ಳುತ್ತಿದೆ ಎಂದು ತಮ್ಮದೇ ಪಕ್ಷದ ಸಂಸದರಾದ ಪ್ರತಾಪ್ ಸಿಂಹ ವಿರುದ್ಧ ಎಂಎಲ್ಸಿ ಎಚ್. ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ ಮತ್ತು ಈ ಯೋಜನೆಯನ್ನು ಅಂದಿನ ಯುಪಿಎ ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.
ಒಂದು ದಶಕದ ಹಿಂದೆ ಮಂಜೂರಾದ ಯೋಜನೆಗಳಿಗೆ ಸಂಸದರು ಬಿಜೆಪಿ ಮಾಡಿರಿವುದಾಗಿ ಸುಳ್ಳು ಕ್ಲೈಮ್ ಮಾಡಿಕೊಂಡಿದ್ದಾರೆ ಮತ್ತು ಕ್ರೆಡಿಟ್ಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ವನಾಥ್ ಆರೋಪಿಸಿದ್ದಾರೆ.
“ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ, ಬೆಂಗಳೂರು-ಮಡಿಕೇರಿ ಹೆದ್ದಾರಿ, ಮಡಿಕೇರಿ-ಮಂಗಳೂರು ಹೆದ್ದಾರಿ ಕಾಮಗಾರಿಗಳು ಯುಪಿಎ ಸರ್ಕಾರದ ಕೊಡುಗೆಗಳಾಗಿವೆ” ಎಂದು ವಿಶ್ವನಾಥ ಅವರು ಮೈಸೂರಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಡಾ. ಎಚ್ ಸಿ ಮಹದೇವಪ್ಪ ರಾಜ್ಯದ ಪಿಡಬ್ಲ್ಯುಡಿ ಮಂತ್ರಿಯಾಗಿದ್ದಾಗ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಈ ಕ್ರೆಡಿಟ್ ಯುಪಿಎ ಸರ್ಕಾರಕ್ಕೆ ಸಲ್ಲಬೇಕು ಎಂದು ಅವರು ಹೇಳಿದ್ದಾರೆ.
ಹಳೆಯ ಯೋಜನೆಗಳಿಗೆ ಕ್ರೆಡಿಟ್ ಪಡೆದುಕೊಳ್ಳುವ ಬದಲು ಹೊಸ ಯೋಜನೆಗಳನ್ನು ತನ್ನಿ ಎಂದು ಹೇಳಿದ್ದಾರೆ. “ನೀವು ಸಂಸದರಾಗುವ ಮುನ್ನ ಈ ಯೋಜನೆಯನ್ನು ಮಂಜೂರು ಮಾಡಲಾಗಿದೆ. ಆರ್ ಧ್ರುವನಾರಾಯಣ್, ರಮ್ಯಾ ಮತ್ತು ನಾನು ಯೋಜನೆಯನ್ನು ಮಂಜೂರು ಮಾಡಿದಾಗ ಸಂಸದರಾಗಿದ್ದೆವು” ಎಂದು ಅವರು ಹೇಳಿದ್ದಾರೆ.
ವಿಶ್ವನಾಥ್ ಅವರು ಉಂಡವಾಡಿ ಕುಡಿಯುವ ನೀರಿನ ಯೋಜನೆಯನ್ನು ಸಹ ಪ್ರತಾಪ ಸಿಂಹ ತಂದಿಲ್ಲ ಮತ್ತು ಅವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.