ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮುಂದೆ ಮಾರ್ಚ್ 30 ರಂದು ನಡೆದ ಪ್ರತಿಭಟನೆ ಮತ್ತು ಧ್ವಂಸ ಪ್ರಕರಣ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಸಂಸದ ಮತ್ತು ಭಾರತೀಯ ಜನತಾ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು 2 ಗಂಟೆಗಳ ಕಾಲ ಮಂಗಳವಾರ ವಿಚಾರಣೆ ನಡೆಸಿದ್ದರು.
ಪೊಲೀಸರ ಪ್ರಕಾರ, ಸುಮಾರು 10 ದಿನಗಳ ಹಿಂದೆ ತೇಜಸ್ವಿ ಅವರನ್ನು ವಿಚಾರಣೆ ನಡೆಸಿದ್ದರು. ಸಿಆರ್ಪಿಸಿ 41ರ ಅಡಿಯಲ್ಲಿ ಪೊಲೀಸರು ಬಿಜೆಪಿ ನಾಯಕನಿಗೆ ನೋಟಿಸ್ ನೀಡಿದ್ದರು, ಇದಕ್ಕೆ ಪ್ರತಿಕ್ರಿಯಿಸಿದ ಸೂರ್ಯ ಅವರು ದೆಹಲಿಗೆ ಬಂದಾಗ ಪೊಲೀಸರು ಅವರನ್ನು ಪ್ರಶ್ನಿಸಬಹುದು ಎಂದು ಹೇಳಿದರು.
ಜೂನ್ ಕೊನೆಯ ವಾರದಲ್ಲಿ ಅಶೋಕ ರಸ್ತೆಯಲ್ಲಿರುವ ಅವರ ಸರ್ಕಾರಿ ನಿವಾಸದಲ್ಲೇ ಪೊಲೀಸರು ತೇಜಸ್ವಿ ಸೂರ್ಯನನ್ನು ವಿಚಾರಣೆಗೆ ಒಳಪಡಿಸಿದರು. ಈಗ ಇಂದೂ ಕೂಡ ವಿಚಾರಣೆಗೆ ಹಾಜರಾಗಿ ಎರಡು ಗಂಟೆಗಳಕಾಲ ವಿಚಾಋಣೆ ಎದುರಿಸಿದ್ದಾರೆ.
ಮಾರ್ಚ್ 30 ರಂದು ಬಿಜೆಪಿ ಯುವ ಮೋರ್ಚಾದ ಸುಮಾರು 150-200 ಪ್ರತಿಭಟನಾಕಾರರು ಕೇಜ್ರಿವಾಲ್ ಅವರ ನಿವಾಸದ ಹೊರಗೆ, ದೆಹಲಿ ವಿಧಾನಸೌಧದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಕುರಿತು ಮಾಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದರು.
ಪ್ರತಿಭಟನೆಯ ವೇಳೆ, ಮಧ್ಯಾಹ್ನ 1 ಗಂಟೆ ಸುಮಾರಿಗೆ, ಕೆಲವು ಪ್ರತಿಭಟನಾಕಾರರು ಎರಡು ಬ್ಯಾರಿಕೇಡ್ಗಳನ್ನು ಮುರಿದು ಸಿಎಂ ಭವನದ ಹೊರಗೆ ಬಂದು ಗದ್ದಲ ಸೃಷ್ಠಿಸಿ, ಘೋಷಣೆಗಳನ್ನು ಕೂಗಿದ್ದರು.
ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸದ ಬಾಗಿಲಿನ ಹೊರಗೆ ಬಣ್ಣವನ್ನು ಎಸೆದು. ಸಿಸಿಟಿವಿ ಕ್ಯಾಮೆರಾವನ್ನು ಧ್ವಂಸಗೊಳಿಸಲಾಗಿದೆ. ತಕ್ಷಣ ಪೊಲೀಸರು ಕರ್ಮ ಕೈಕೊಂಡರು ಷ್ಟೊತ್ತಿಗೆ ಸುಮಾರು ವಸ್ತುಗಳನ್ನು ಧ್ವಂಸ ಮಾಡಿದ್ದರು. ಪ್ರಮುಖವಾಗಿ, ಪೊಲೀಸರು ಈಗಾಗಲೇ ಸಂಘಟನೆಯ ಎಂಟು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್ ಅವರ ಮನೆಯ ಹೊರಗಿನ ಬ್ಯಾರಿಕೇಡ್ಗಳನ್ನು ಕಿತ್ತುಹಾಕಿದ ನಂತರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಿಎಂ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾಗದ ಕಾರಣ ಬಿಜೆಪಿ ಕಾರ್ಯಕರ್ತರು ಅವರನ್ನು ಕೊಲ್ಲಲು ಪ್ರಯತ್ನಿಸಿದ್ದಾರೆ ಈ ಘಟನೆಯು ಸಿಎಂ ಹತ್ಯೆಗೆ ಬಿಜೆಪಿಯ ಪೂರ್ವ ಸಂಯೋಜಿತ ಯೋಜನೆಯಾಗಿದೆ ಎಂದು ಹೇಳಿದ್ದರು.